AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಹಲ್ಲೆ ಮಾಡಿಲ್ಲ ಎಂದಿದ್ದ ದರ್ಶನ್ ನಿಜ ಒಪ್ಪಿಕೊಂಡಿದ್ದು ಹೇಗೆ? ಇಲ್ಲಿದೆ ಆ ಐವತ್ತು ನಿಮಿಷಗಳ ಸೀಕ್ರೆಟ್

ಬೆಂಗಳೂರಿನ ಪಟ್ಟಣಗೆರೆ ಶೆಡ್​ಗೆ ಸಂಜೆ 4.30ರ ಸುಮಾರಿಗೆ ದರ್ಶನ್ ಆಗಮಿಸಿದ್ದಾರೆ. ಆ  ಬಳಿಕ ಅವರು ಮರಳಿ ತೆರಳಿದ್ದು ಸಂಜೆ 5.20ಕ್ಕೆ. ರೇಣುಕಾಸ್ವಾಮಿ ಮೇಲೆ ದರ್ಶನ್ ನಿರಂತರವಾಗಿ 30 ನಿಮಿಷಗಳ ಕಾಲ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಸಿನಿಮಾ ಮಾದರಿಯಲ್ಲೇ ನಟ ದರ್ಶನ್ ಕ್ರೌರ್ಯ ಇತ್ತು ಎಂದು ವರದಿ ಆಗಿದೆ.

Darshan: ಹಲ್ಲೆ ಮಾಡಿಲ್ಲ ಎಂದಿದ್ದ ದರ್ಶನ್ ನಿಜ ಒಪ್ಪಿಕೊಂಡಿದ್ದು ಹೇಗೆ? ಇಲ್ಲಿದೆ ಆ ಐವತ್ತು ನಿಮಿಷಗಳ ಸೀಕ್ರೆಟ್
ದರ್ಶನ್
TV9 Web
| Edited By: |

Updated on:Jun 28, 2024 | 12:18 PM

Share

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಆರಂಭದಲ್ಲಿ ತಮಗೂ ಈ ಕೇಸ್​ಗೂ ಸಂಬಂಧ ಇಲ್ಲ ಎನ್ನುತ್ತಲೇ ಬರುತ್ತಿದ್ದರು. ‘ರೇಣುಕಾಸ್ವಾಮಿಗೆ ಎರಡೇಟು ಹೊಡೆದು ಟ್ಯಾಬ್ಲೆಟ್ ಹಾಗೂ ಊಟ ಕೊಡಿ ಎಂದು ಹೇಳಿ ನಾನು ಬಂದೆ’ ಎಂದು ದರ್ಶನ್​ ಹೇಳಿದ್ದರು. ಆದರೆ, ಪೊಲೀಸರು ಎದುರು ಇಟ್ಟ ಸಾಕ್ಷಿಗಳಿಂದ ದರ್ಶನ್ ಕಂಗಾಲಾಗಿದ್ದಾರೆ. ಕೊನೆಗೆ ಅವರು ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ. 50 ನಿಮಿಷ ಶೆಡ್​ನಲ್ಲಿ ಏನಾಯ್ತು ಎನ್ನುವ ಮಾಹಿತಿ ಸಿಕ್ಕಿದೆ.

ಪಟ್ಟಣಗೆರೆ ಶೆಡ್​ಗೆ ಸಂಜೆ 4.30ರ ಸುಮಾರಿಗೆ ವಿನಯ್ ಜೊತೆಗೆ ದರ್ಶನ್ ಎಂಟ್ರಿ ಕೊಟ್ಟಿದ್ದಾರೆ. ಆ  ಬಳಿಕ ಅವರು ತೆರಳಿದ್ದು ಸಂಜೆ 5.20ಕ್ಕೆ. ರೇಣುಕಾಸ್ವಾಮಿ ಮೇಲೆ ದರ್ಶನ್ ನಿರಂತರವಾಗಿ 30 ನಿಮಿಷಗಳ ಕಾಲ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಸಿನಿಮಾ ಮಾದರಿಯಲ್ಲೇ ನಟ ದರ್ಶನ್ ಕ್ರೌರ್ಯ ಇತ್ತು ಎಂದು ವರದಿ ಆಗಿದೆ. ನಿಂತಿದ್ದ ವಾಹನಗಳ ಮೇಲೆ ರೇಣುಕಾಸ್ವಾಮಿ ಅವರನ್ನು ದರ್ಶನ್ ಎತ್ತಿ ಬೀಸಾಡಿದ್ದರು. ದರ್ಶನ್ ಆರ್ಭಟಕ್ಕೆ ಅಲ್ಲಿದ್ದ ವಾಹನಗಳೇ ಶೇಕ್ ಆಗಿದ್ದವು. ಬೂಟು ಕಾಲಿನಲ್ಲಿ ರೇಣುಕಾಸ್ವಾಮಿಗೆ ಒದ್ದು ಹಲ್ಲೆ ಮಾಡಿದ್ದರು. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಮೆಸೆಜ್​ನ ಗ್ಯಾಂಗ್ ಓಪನ್ ಮಾಡಿಕೊಂಡಿತ್ತು. ಆ ಮೆಸೇಜ್​ಗಳನ್ನು ಓದಲು ಪವನ್​ಗೆ ದರ್ಶನ್ ಹೇಳಿದ್ದರು. ಮೆಸೆಜ್ ಓದುತ್ತಿದ್ದ ಟೋನ್​ನಲ್ಲಿಯೇ ದರ್ಶನ್ ಹಲ್ಲೆ ಮಾಡುತ್ತಿದ್ದರು.

ಮೊದ ಮೊದಲು ಎರಡೇಟು ಹೊಡೆದು ಹಣ ಕೊಟ್ಟು ಹೊರಟೆ ಎಂದು ದರ್ಶನ್ ಹೇಳಿದ್ದರು. ಆದರೆ, ದರ್ಶನ್ ಐವತ್ತು ನಿಮಿಷ ಶೆಡ್​ನಲ್ಲಿದ್ದ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು. ಕೊನೆಗೆ ಸಾಕ್ಷಿ ಮುಂದೆ ಇಟ್ಟು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಹಲ್ಲೆ ಮಾಡಿರೋದಾಗಿ ಅವರು ಸತ್ಯ ಒಪ್ಪಿಕೊಂಡರು ಎನ್ನಲಾಗಿದೆ.

ಇದನ್ನೂ ಓದಿ: ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ

ಫೆಬ್ರವರಿ ತಿಂಗಳಿಂದ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಮೆಸೆಜ್ ಮಾಡಲು ಶುರು ಮಾಡಿದ್ದರು. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಬರೋಬ್ಬರಿ 200 ಮೆಸೆಜ್ ಕಳುಹಿಸಿದ್ದರು. ಎಲ್ಲವೂ ಅಶ್ಲೀಲ್ ಮೆಸೆಜ್​ಗಳೇಆಗಿತ್ತು. ಈತನ ಕಾಟ ಅತಿಯಾದಾಗ ಪವನ್​ಗೆ ಪವಿತ್ರಾ ಗೌಡ ವಿಚಾರ ತಿಳಿಸಿದ್ದರು. ಆತ‌ನ ಕೊಲೆ ಆಗುತ್ತೆ ಅಂದುಕೊಂಡಿರ್ಲಿಲ್ಲ ಎಂದು ಪವಿತ್ರಾ ಗೌಡ ಹೇಳಿಕೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:17 pm, Fri, 28 June 24

Follow Us
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ