ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು […]

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  
ಸಾಧು ಶ್ರೀನಾಥ್​

Updated on: Sep 08, 2019 | 12:57 PM

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಮಡಿಕೇರಿ ನಗರ ಪೊಲೀಸರು ಹುಚ್ಚ ವೆಂಕಟ್ ಮೇಲೆ ಐದು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡು, ಬಳಿಕ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ.

Published On - 4:03 pm, Fri, 30 August 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us