AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

ಯಾವುದೇ ಸಿನಿಮಾ ಕೈಗೆತ್ತಿಕೊಂಡರೂ ರಕ್ಷಿತ್​ ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ಸಿನಿಮಾವನ್ನು ಮಗು ರೀತಿಯಲ್ಲಿ ನೋಡುವ ಅವರು ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ.

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ
ರಕ್ಷಿತ್​ ಶೆಟ್ಟಿ
TV9 Web
| Edited By: |

Updated on: Jul 12, 2021 | 7:58 AM

Share

ರಕ್ಷಿತ್​ ಶೆಟ್ಟಿ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ‘ರಿಚರ್ಡ್​ ಆಂಟನಿ’ ಹೆಸರಿನ ಸಿನಿಮಾ ಮೂಲಕ ರಕ್ಷಿತ್​ ಮತ್ತೆ ಡೈರೆಕ್ಟರ್​ ಕ್ಯಾಪ್​ ತೊಡುತ್ತಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದು ಇವರ ಬಗ್ಗೆ ಪ್ರಸಾರ ಮಾಡಿದ ಸುಳ್ಳು ಸುದ್ದಿ ಹಾಗೂ ಸಿನಿಮಾ ಬಗ್ಗೆ ರಕ್ಷಿತ್​ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ರಕ್ಷಿತ್​ ಮನವಿ ಮಾಡಿದ್ದಾರೆ.

ಯಾವುದೇ ಸಿನಿಮಾ ಕೈಗೆತ್ತಿಕೊಂಡರೂ ರಕ್ಷಿತ್​ ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ಸಿನಿಮಾವನ್ನು ಮಗು ರೀತಿಯಲ್ಲಿ ನೋಡುವ ಅವರು ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ. ಇವುಗಳ ಮಧ್ಯೆ ಬ್ಯುಸಿಯಾದಾಗ ರಕ್ಷಿತ್​ಗೆ ಯಾರ ಕರೆಗಳನ್ನೂ ಸ್ವೀಕರಿಸೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ರಕ್ಷಿತ್​ ಮಾಧ್ಯಮದವರ ಕರೆ ಸ್ವೀಕರಿಸುವುದಿಲ್ಲ ಎನ್ನುವ ಮಾತಿದೆ. ಇದಕ್ಕೆ ರಕ್ಷಿತ್​ ಸ್ಪಷ್ಟನೆ ನೀಡಿದ್ದಾರೆ.

‘ನಾನು ಸ್ಕ್ರಿಪ್ಟ್​ ಕೆಲಸಕ್ಕೆ ಕೂತರೆ ಒಂದೆರಡು ಗಂಟೆ ಕೂರೋಕೆ ಆಗಲ್ಲ. ಬೆಳಗ್ಗೆ ಬರೆಯೋಕೆ ಕೂತರೆ ನಾನು ಏಳೋದು ಸಂಜೆ ಅಥವಾ ರಾತ್ರಿ ಆಗತ್ತೆ. ಮಧ್ಯೆ ಹಸಿವಾದಾಗ ಮಾತ್ರ ಎಳುತ್ತೇನೆ.  ಅಲ್ಲಿಯವರಿಗೆ ನಾನು ಮೊಬೈಲ್​ ಮುಟ್ಟಲ್ಲ. ಮೀಡಿಯಾದವರು ಕರೆ ಮಾಡಿದರೆ ನಾನು ಉದ್ದೇಶ ಪೂರ್ವಕವಾಗಿ ಕಾಲ್​ ಕಟ್​ ಮಾಡೋದಿಲ್ಲ. ಆ ಸಮಯದಲ್ಲಿ ನಾನು ಬೇರೆ ಕೆಲಸದಲ್ಲಿ ಬ್ಯುಸಿ ಇರ್ತೀನಿ ಅಷ್ಟೆ. ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡ್ಕೋಳಿ’ ಎಂದು ರಕ್ಷಿತ್​ ಮನವಿ ಮಾಡಿದ್ದಾರೆ.

ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ಮಾಪಕ ಪುಷ್ಕರ್​ ಮಲ್ಲಿಕಾರ್ಜುನಯ್ಯ ನಡುವೆ ವೈಮನಸ್ಸು ಬೆಳೆದಿದೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿತ್ತು. ಮಾಧ್ಯಮವೊಂದು ಈ ಬಗ್ಗೆ ಕಾರ್ಯಕ್ರಮ ಕೂಡ ಪ್ರಸಾರ ಮಾಡಿತ್ತು. ರಕ್ಷಿತ್​ ಬಗ್ಗೆ ಇಲ್ಲಸಲ್ಲದ ವಿಚಾರವನ್ನು ಹೇಳಲಾಗಿತ್ತು. ಈ ಬಗ್ಗೆಯೂ ರಕ್ಷಿತ್​ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳ ಕಾಯುವಿಕೆಗೆ ಕೊನೆ ಹಾಡೇ ಬಿಟ್ರು ರಕ್ಷಿತ್​ ಶೆಟ್ಟಿ, ಡೈರೆಕ್ಟರ್ ಕ್ಯಾಪ್​ ಹಾಕ್ಕೊಳ್ಳೋ ಟೈಮ್ ಬಂದೇ ಬಿಡ್ತು!

‘ಹಿಂದೆ ನೋಡೋಕೆ ಇಷ್ಟವಿಲ್ಲ, ನಾನು ಗೋರಿ ಕಟ್ಕೊಂಡೇ ಮುಂದೆ ಹೋಗೋದು’; ಎಲ್ಲಾ ವಿಚಾರಕ್ಕೆ ಸ್ಪಷ್ಟನೆ ನೀಡಿದ ರಕ್ಷಿತ್​

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ