AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

ಯಾವುದೇ ಸಿನಿಮಾ ಕೈಗೆತ್ತಿಕೊಂಡರೂ ರಕ್ಷಿತ್​ ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ಸಿನಿಮಾವನ್ನು ಮಗು ರೀತಿಯಲ್ಲಿ ನೋಡುವ ಅವರು ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ.

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ
ರಕ್ಷಿತ್​ ಶೆಟ್ಟಿ
TV9 Web
| Updated By: Skanda|

Updated on: Jul 12, 2021 | 7:58 AM

Share

ರಕ್ಷಿತ್​ ಶೆಟ್ಟಿ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ‘ರಿಚರ್ಡ್​ ಆಂಟನಿ’ ಹೆಸರಿನ ಸಿನಿಮಾ ಮೂಲಕ ರಕ್ಷಿತ್​ ಮತ್ತೆ ಡೈರೆಕ್ಟರ್​ ಕ್ಯಾಪ್​ ತೊಡುತ್ತಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದು ಇವರ ಬಗ್ಗೆ ಪ್ರಸಾರ ಮಾಡಿದ ಸುಳ್ಳು ಸುದ್ದಿ ಹಾಗೂ ಸಿನಿಮಾ ಬಗ್ಗೆ ರಕ್ಷಿತ್​ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ರಕ್ಷಿತ್​ ಮನವಿ ಮಾಡಿದ್ದಾರೆ.

ಯಾವುದೇ ಸಿನಿಮಾ ಕೈಗೆತ್ತಿಕೊಂಡರೂ ರಕ್ಷಿತ್​ ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ಸಿನಿಮಾವನ್ನು ಮಗು ರೀತಿಯಲ್ಲಿ ನೋಡುವ ಅವರು ಅದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ. ಇವುಗಳ ಮಧ್ಯೆ ಬ್ಯುಸಿಯಾದಾಗ ರಕ್ಷಿತ್​ಗೆ ಯಾರ ಕರೆಗಳನ್ನೂ ಸ್ವೀಕರಿಸೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ರಕ್ಷಿತ್​ ಮಾಧ್ಯಮದವರ ಕರೆ ಸ್ವೀಕರಿಸುವುದಿಲ್ಲ ಎನ್ನುವ ಮಾತಿದೆ. ಇದಕ್ಕೆ ರಕ್ಷಿತ್​ ಸ್ಪಷ್ಟನೆ ನೀಡಿದ್ದಾರೆ.

‘ನಾನು ಸ್ಕ್ರಿಪ್ಟ್​ ಕೆಲಸಕ್ಕೆ ಕೂತರೆ ಒಂದೆರಡು ಗಂಟೆ ಕೂರೋಕೆ ಆಗಲ್ಲ. ಬೆಳಗ್ಗೆ ಬರೆಯೋಕೆ ಕೂತರೆ ನಾನು ಏಳೋದು ಸಂಜೆ ಅಥವಾ ರಾತ್ರಿ ಆಗತ್ತೆ. ಮಧ್ಯೆ ಹಸಿವಾದಾಗ ಮಾತ್ರ ಎಳುತ್ತೇನೆ.  ಅಲ್ಲಿಯವರಿಗೆ ನಾನು ಮೊಬೈಲ್​ ಮುಟ್ಟಲ್ಲ. ಮೀಡಿಯಾದವರು ಕರೆ ಮಾಡಿದರೆ ನಾನು ಉದ್ದೇಶ ಪೂರ್ವಕವಾಗಿ ಕಾಲ್​ ಕಟ್​ ಮಾಡೋದಿಲ್ಲ. ಆ ಸಮಯದಲ್ಲಿ ನಾನು ಬೇರೆ ಕೆಲಸದಲ್ಲಿ ಬ್ಯುಸಿ ಇರ್ತೀನಿ ಅಷ್ಟೆ. ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡ್ಕೋಳಿ’ ಎಂದು ರಕ್ಷಿತ್​ ಮನವಿ ಮಾಡಿದ್ದಾರೆ.

ನಟ ರಕ್ಷಿತ್​ ಶೆಟ್ಟಿ ಹಾಗೂ ನಿರ್ಮಾಪಕ ಪುಷ್ಕರ್​ ಮಲ್ಲಿಕಾರ್ಜುನಯ್ಯ ನಡುವೆ ವೈಮನಸ್ಸು ಬೆಳೆದಿದೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿತ್ತು. ಮಾಧ್ಯಮವೊಂದು ಈ ಬಗ್ಗೆ ಕಾರ್ಯಕ್ರಮ ಕೂಡ ಪ್ರಸಾರ ಮಾಡಿತ್ತು. ರಕ್ಷಿತ್​ ಬಗ್ಗೆ ಇಲ್ಲಸಲ್ಲದ ವಿಚಾರವನ್ನು ಹೇಳಲಾಗಿತ್ತು. ಈ ಬಗ್ಗೆಯೂ ರಕ್ಷಿತ್​ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳ ಕಾಯುವಿಕೆಗೆ ಕೊನೆ ಹಾಡೇ ಬಿಟ್ರು ರಕ್ಷಿತ್​ ಶೆಟ್ಟಿ, ಡೈರೆಕ್ಟರ್ ಕ್ಯಾಪ್​ ಹಾಕ್ಕೊಳ್ಳೋ ಟೈಮ್ ಬಂದೇ ಬಿಡ್ತು!

‘ಹಿಂದೆ ನೋಡೋಕೆ ಇಷ್ಟವಿಲ್ಲ, ನಾನು ಗೋರಿ ಕಟ್ಕೊಂಡೇ ಮುಂದೆ ಹೋಗೋದು’; ಎಲ್ಲಾ ವಿಚಾರಕ್ಕೆ ಸ್ಪಷ್ಟನೆ ನೀಡಿದ ರಕ್ಷಿತ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ