‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಖಡಕ್ ಆಗಿ ಉತ್ತರಿಸಿದ ನಟಿ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆ ಸಿನಿಮಾಗೆ ಯಾರೆಲ್ಲ ನಾಯಕಿ ಎನ್ನುವ ವಿಚಾರ ಚರ್ಚೆ ಆಗಿತ್ತು. ‘ತಾರಾ ಸುತಾರಿಯಾ ಸಿನಿಮಾಗೆ ಎರಡನೇ ನಾಯಕಿ’ ಎಂದು ವರದಿ ಆಗಿತ್ತು. ಇದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.  

‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಖಡಕ್ ಆಗಿ ಉತ್ತರಿಸಿದ ನಟಿ
ಟಾಕ್ಸಿಕ್ ಸಿನಿಮಾ
Follow us
| Updated By: Digi Tech Desk

Updated on:Aug 08, 2024 | 11:30 AM

ತಾರಾ ಸುತಾರಿಯಾ ಅವರು ‘ಸ್ಟುಡೆಂಟ್ ಆಫ್ ದಿ ಇಯರ್ 2’, ‘ಏಕ್ ವಿಲನ್ ರಿಟರ್ನ್ಸ್​’ ಮೂಲಕ ಗಮನ ಸೆಳೆದವರು. ಅವರು ‘ಟಾಕ್ಸಿಕ್’ ಸಿನಿಮಾದ ಭಾಗ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸ್ಪಷ್ಟನೆ ಸಿಕ್ಕಿದೆ. ಅವರೇ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವರು ಮತ್ತೊಂದು ವಿಚಾರವನ್ನು ಒತ್ತಿ ಹೇಳಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಜಾಗದ ವಿಚಾರದಲ್ಲಿ ಕೇಸ್​​ ಹಾಕಲಾಗಿದೆ. ಈ ಮಧ್ಯೆ ಸಿನಿಮಾಗೆ ಯಾರೆಲ್ಲ ನಾಯಕಿ ಎನ್ನುವ ವಿಚಾರ ಚರ್ಚೆ ಆಗಿತ್ತು. ‘ತಾರಾ ಸುತಾರಿಯಾ ಸಿನಿಮಾಗೆ ಎರಡನೇ ನಾಯಕಿ’ ಎಂದು ವರದಿ ಆಗಿತ್ತು. ಇದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

‘ಇತ್ತೀಚೆಗೆ ಪ್ರಾಜೆಕ್ಟ್​ ಒಂದರ ಬಗ್ಗೆ ಬರೆಯಲಾದ ಆರ್ಟಿಕಲ್ ಸುಳ್ಳು. ನಾನು ಆ ವಿಚಾರವನ್ನು ಹಂಚಿಕೊಂಡಿಲ್ಲ. ಏನಾದರೂ ಹೇಳೊಕೆ ಇದ್ದರೆ ನಾನೇ ಅದನ್ನು ಶೇರ್ ಮಾಡುತ್ತೇನೆ. ವಿಶೇಷ ಸೂಚನೆ, ಇಲ್ಲಿ ಯಾರೂ ಎರಡನೆಯವರಲ್ಲ’ ಎಂದಿದ್ದಾರೆ ತಾರಾ. ಈ ಮೂಲಕ ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟಿದ್ದಾರೆ.

ಮಲಯಾಳಂನ ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಯನತಾರಾ, ಶ್ರುತಿ ಹಾಸನ್ ಮೊದಲಾದವರು ನಟಿಸುತ್ತಾರೆ ಎಂದು ಸುದ್ದಿ ಆಗಿತ್ತು. ಆದರೆ, ಯಾವುದೂ ಅಧಿಕೃತ ಆಗಿಲ್ಲ.

ಇದನ್ನೂ ಓದಿ: ‘ರಾಕಿಂಗ್​ ಸ್ಟಾರ್​’ ಯಶ್​ ನಟನೆಯ ‘ಟಾಕ್ಸಿಕ್​’ ಸಿನಿಮಾದಲ್ಲಿ ಜನಪ್ರಿಯ ನಟಿಯರ ದಂಡು?

ಇತ್ತೀಚೆಗೆ ತಾರಾ ಸುತಾರಿಯಾ ಅವರು ‘ಅಪೂರ್ವ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸರ್ವೈಲ್ ಆ್ಯಕ್ಷನ್ ಡ್ರಾಮಾ ರೀತಿಯಲ್ಲಿ ಮೂಡಿ ಬಂದಿತ್ತು. ಅಭಿಷೇಕ್ ಬ್ಯಾನರ್ಜಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರಯ ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:10 am, Sat, 27 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್