AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಖಡಕ್ ಆಗಿ ಉತ್ತರಿಸಿದ ನಟಿ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆ ಸಿನಿಮಾಗೆ ಯಾರೆಲ್ಲ ನಾಯಕಿ ಎನ್ನುವ ವಿಚಾರ ಚರ್ಚೆ ಆಗಿತ್ತು. ‘ತಾರಾ ಸುತಾರಿಯಾ ಸಿನಿಮಾಗೆ ಎರಡನೇ ನಾಯಕಿ’ ಎಂದು ವರದಿ ಆಗಿತ್ತು. ಇದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.  

‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಖಡಕ್ ಆಗಿ ಉತ್ತರಿಸಿದ ನಟಿ
ಟಾಕ್ಸಿಕ್ ಸಿನಿಮಾ
ರಾಜೇಶ್ ದುಗ್ಗುಮನೆ
| Edited By: |

Updated on:Aug 08, 2024 | 11:30 AM

Share

ತಾರಾ ಸುತಾರಿಯಾ ಅವರು ‘ಸ್ಟುಡೆಂಟ್ ಆಫ್ ದಿ ಇಯರ್ 2’, ‘ಏಕ್ ವಿಲನ್ ರಿಟರ್ನ್ಸ್​’ ಮೂಲಕ ಗಮನ ಸೆಳೆದವರು. ಅವರು ‘ಟಾಕ್ಸಿಕ್’ ಸಿನಿಮಾದ ಭಾಗ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸ್ಪಷ್ಟನೆ ಸಿಕ್ಕಿದೆ. ಅವರೇ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವರು ಮತ್ತೊಂದು ವಿಚಾರವನ್ನು ಒತ್ತಿ ಹೇಳಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಜಾಗದ ವಿಚಾರದಲ್ಲಿ ಕೇಸ್​​ ಹಾಕಲಾಗಿದೆ. ಈ ಮಧ್ಯೆ ಸಿನಿಮಾಗೆ ಯಾರೆಲ್ಲ ನಾಯಕಿ ಎನ್ನುವ ವಿಚಾರ ಚರ್ಚೆ ಆಗಿತ್ತು. ‘ತಾರಾ ಸುತಾರಿಯಾ ಸಿನಿಮಾಗೆ ಎರಡನೇ ನಾಯಕಿ’ ಎಂದು ವರದಿ ಆಗಿತ್ತು. ಇದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

‘ಇತ್ತೀಚೆಗೆ ಪ್ರಾಜೆಕ್ಟ್​ ಒಂದರ ಬಗ್ಗೆ ಬರೆಯಲಾದ ಆರ್ಟಿಕಲ್ ಸುಳ್ಳು. ನಾನು ಆ ವಿಚಾರವನ್ನು ಹಂಚಿಕೊಂಡಿಲ್ಲ. ಏನಾದರೂ ಹೇಳೊಕೆ ಇದ್ದರೆ ನಾನೇ ಅದನ್ನು ಶೇರ್ ಮಾಡುತ್ತೇನೆ. ವಿಶೇಷ ಸೂಚನೆ, ಇಲ್ಲಿ ಯಾರೂ ಎರಡನೆಯವರಲ್ಲ’ ಎಂದಿದ್ದಾರೆ ತಾರಾ. ಈ ಮೂಲಕ ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟಿದ್ದಾರೆ.

ಮಲಯಾಳಂನ ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಯನತಾರಾ, ಶ್ರುತಿ ಹಾಸನ್ ಮೊದಲಾದವರು ನಟಿಸುತ್ತಾರೆ ಎಂದು ಸುದ್ದಿ ಆಗಿತ್ತು. ಆದರೆ, ಯಾವುದೂ ಅಧಿಕೃತ ಆಗಿಲ್ಲ.

ಇದನ್ನೂ ಓದಿ: ‘ರಾಕಿಂಗ್​ ಸ್ಟಾರ್​’ ಯಶ್​ ನಟನೆಯ ‘ಟಾಕ್ಸಿಕ್​’ ಸಿನಿಮಾದಲ್ಲಿ ಜನಪ್ರಿಯ ನಟಿಯರ ದಂಡು?

ಇತ್ತೀಚೆಗೆ ತಾರಾ ಸುತಾರಿಯಾ ಅವರು ‘ಅಪೂರ್ವ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸರ್ವೈಲ್ ಆ್ಯಕ್ಷನ್ ಡ್ರಾಮಾ ರೀತಿಯಲ್ಲಿ ಮೂಡಿ ಬಂದಿತ್ತು. ಅಭಿಷೇಕ್ ಬ್ಯಾನರ್ಜಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರಯ ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:10 am, Sat, 27 July 24

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ