AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಖಡಕ್ ಆಗಿ ಉತ್ತರಿಸಿದ ನಟಿ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆ ಸಿನಿಮಾಗೆ ಯಾರೆಲ್ಲ ನಾಯಕಿ ಎನ್ನುವ ವಿಚಾರ ಚರ್ಚೆ ಆಗಿತ್ತು. ‘ತಾರಾ ಸುತಾರಿಯಾ ಸಿನಿಮಾಗೆ ಎರಡನೇ ನಾಯಕಿ’ ಎಂದು ವರದಿ ಆಗಿತ್ತು. ಇದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.  

‘ಟಾಕ್ಸಿಕ್’ ಸಿನಿಮಾದಲ್ಲಿ ಎರಡನೇ ನಾಯಕಿ ಅನ್ನೋ ವಿಚಾರ; ಖಡಕ್ ಆಗಿ ಉತ್ತರಿಸಿದ ನಟಿ
ಟಾಕ್ಸಿಕ್ ಸಿನಿಮಾ
ರಾಜೇಶ್ ದುಗ್ಗುಮನೆ
| Edited By: |

Updated on:Aug 08, 2024 | 11:30 AM

Share

ತಾರಾ ಸುತಾರಿಯಾ ಅವರು ‘ಸ್ಟುಡೆಂಟ್ ಆಫ್ ದಿ ಇಯರ್ 2’, ‘ಏಕ್ ವಿಲನ್ ರಿಟರ್ನ್ಸ್​’ ಮೂಲಕ ಗಮನ ಸೆಳೆದವರು. ಅವರು ‘ಟಾಕ್ಸಿಕ್’ ಸಿನಿಮಾದ ಭಾಗ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸ್ಪಷ್ಟನೆ ಸಿಕ್ಕಿದೆ. ಅವರೇ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವರು ಮತ್ತೊಂದು ವಿಚಾರವನ್ನು ಒತ್ತಿ ಹೇಳಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಜಾಗದ ವಿಚಾರದಲ್ಲಿ ಕೇಸ್​​ ಹಾಕಲಾಗಿದೆ. ಈ ಮಧ್ಯೆ ಸಿನಿಮಾಗೆ ಯಾರೆಲ್ಲ ನಾಯಕಿ ಎನ್ನುವ ವಿಚಾರ ಚರ್ಚೆ ಆಗಿತ್ತು. ‘ತಾರಾ ಸುತಾರಿಯಾ ಸಿನಿಮಾಗೆ ಎರಡನೇ ನಾಯಕಿ’ ಎಂದು ವರದಿ ಆಗಿತ್ತು. ಇದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

‘ಇತ್ತೀಚೆಗೆ ಪ್ರಾಜೆಕ್ಟ್​ ಒಂದರ ಬಗ್ಗೆ ಬರೆಯಲಾದ ಆರ್ಟಿಕಲ್ ಸುಳ್ಳು. ನಾನು ಆ ವಿಚಾರವನ್ನು ಹಂಚಿಕೊಂಡಿಲ್ಲ. ಏನಾದರೂ ಹೇಳೊಕೆ ಇದ್ದರೆ ನಾನೇ ಅದನ್ನು ಶೇರ್ ಮಾಡುತ್ತೇನೆ. ವಿಶೇಷ ಸೂಚನೆ, ಇಲ್ಲಿ ಯಾರೂ ಎರಡನೆಯವರಲ್ಲ’ ಎಂದಿದ್ದಾರೆ ತಾರಾ. ಈ ಮೂಲಕ ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟಿದ್ದಾರೆ.

ಮಲಯಾಳಂನ ಗೀತು ಮೋಹನ್​ದಾಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಯನತಾರಾ, ಶ್ರುತಿ ಹಾಸನ್ ಮೊದಲಾದವರು ನಟಿಸುತ್ತಾರೆ ಎಂದು ಸುದ್ದಿ ಆಗಿತ್ತು. ಆದರೆ, ಯಾವುದೂ ಅಧಿಕೃತ ಆಗಿಲ್ಲ.

ಇದನ್ನೂ ಓದಿ: ‘ರಾಕಿಂಗ್​ ಸ್ಟಾರ್​’ ಯಶ್​ ನಟನೆಯ ‘ಟಾಕ್ಸಿಕ್​’ ಸಿನಿಮಾದಲ್ಲಿ ಜನಪ್ರಿಯ ನಟಿಯರ ದಂಡು?

ಇತ್ತೀಚೆಗೆ ತಾರಾ ಸುತಾರಿಯಾ ಅವರು ‘ಅಪೂರ್ವ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸರ್ವೈಲ್ ಆ್ಯಕ್ಷನ್ ಡ್ರಾಮಾ ರೀತಿಯಲ್ಲಿ ಮೂಡಿ ಬಂದಿತ್ತು. ಅಭಿಷೇಕ್ ಬ್ಯಾನರ್ಜಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರಯ ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:10 am, Sat, 27 July 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್