AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ ಮಾಡ್ತೀನಿ ಎಂದ ನಟ ಸಾಯಿ ಕುಮಾರ್

ಕರ್ನಾಟಕದಲ್ಲಿ ಮುಂದಿನ ವರ್ಷ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಈಗ ಸಾಯಿಕುಮಾರ್ ಅವರು ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ.

ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ ಮಾಡ್ತೀನಿ ಎಂದ ನಟ ಸಾಯಿ ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:May 20, 2022 | 6:49 PM

Share

ಚಿತ್ರರಂಗಕ್ಕೂ (Cinema Industry) ರಾಜಕೀಯಕ್ಕೂ ಮೊದಲಿನಿಂದಲೂ ಒಳ್ಳೆಯ ನಂಟಿದೆ. ಅನೇಕ ಸೆಲೆಬ್ರಿಟಿಗಳು ರಾಜಕೀಯದಲ್ಲಿ ಅದೃಷ್ಟಪರೀಕ್ಷೆ ಮಾಡಿದ್ದಾರೆ. ಈಗ ಬಹುಭಾಷಾ ನಟ ಸಾಯಿಕುಮಾರ್ (Sai Kumar) ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆ ನೀಡಿದ್ದಾರೆ. ಬಿಜೆಪಿಯವರು ಟಿಕೆಟ್ ಕೊಟ್ಟರೆ ಮುಂದಿನ ವರ್ಷ ಸ್ಪರ್ಧೆ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಮುಂದಿನ ವರ್ಷ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಈಗ ಸಾಯಿಕುಮಾರ್ ಅವರು ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ. ‘ಬಿಜೆಪಿಯವರು ಟಿಕೆಟ್ ಕೊಟ್ಟರೆ ಮುಂದಿನ ವರ್ಷ ಸ್ಪರ್ಧೆ ಮಾಡುತ್ತೇನೆ. ಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಬಿಜೆಪಿ ಕೆಲಸ ಮಾಡಿಕೊಂಡು ಕ್ಯಾಂಪೇನ್ ಮಾಡುತ್ತೇನೆ. ಕಳೆದ ಬಾರಿ ಎಲೆಕ್ಷನ್​ನಲ್ಲಿ ಸೋತೆ, ಏನೂ ಮಾಡಲು ಆಗುವುದಿಲ್ಲ’ ಎಂದಿದ್ದಾರೆ ನಟ ಸಾಯಿಕುಮಾರ್.

ಇದನ್ನೂ ಓದಿ: ‘ಬಾಹುಬಲಿಗೆ ಕಟ್ಟಪ್ಪ, ಕೆಜಿಎಫ್​​ಗೆ ಅಯ್ಯಪ್ಪ’ ಎಂದ ಸಾಯಿಕುಮಾರ್

ಇದನ್ನೂ ಓದಿ
Image
‘ಬಾಹುಬಲಿಗೆ ಕಟ್ಟಪ್ಪ, ಕೆಜಿಎಫ್​​ಗೆ ಅಯ್ಯಪ್ಪ’ ಎಂದ ಸಾಯಿಕುಮಾರ್
Image
ನನ್ನ ಮಗನನ್ನು ತಮ್ಮ ಪ್ರೊಡಕ್ಷನ್ ಹೌಸ್ ಮೂಲಕವೇ ಲಾಂಚ್ ಮಾಡುವುದಾಗಿ ಅಪ್ಪು ಹೇಳಿದ್ದರು: ಸಾಯಿಕುಮಾರ್

ಸಾಯಿಕುಮಾರ್ ಅವರು ಕನ್ನಡ ಮಾತ್ರವಲ್ಲದೆ, ತೆಲುಗು ಮೊದಲಾದ ಚಿತ್ರರಂಗದಲ್ಲೂ ಫೇಮಸ್ ಆಗಿದ್ದಾರೆ. ಅವರು ಮಾಡುವ ಪೊಲೀಸ್ ಪಾತ್ರ ಪ್ರೇಕ್ಷಕರಿಗೆ ಸಾಕಷ್ಟು ಇಷ್ಟವಾಗುತ್ತದೆ. ಇತ್ತೀಚೆಗೆ ತೆರೆಗೆ ಬಂದ ‘ಅವತಾರ ಪುರುಷ’ ಸಿನಿಮಾದಲ್ಲಿ ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಲಿಲ್ಲ.

ಚಿತ್ರರಂಗದಲ್ಲಿ ಸಾಯಿಕುಮಾರ್ 50 ವರ್ಷ ಪೂರೈಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಕಮಲ್ ಹಾಸನ್ ಅವರಿಗೆ ಡಬ್ಬಿಂಗ್ ಮಾಡಬೇಕು ಅನ್ನೋದಷ್ಟೇ ನನ್ನ ಆಸೆ ಆಗಿತ್ತು. ‘ಪ್ರೇಮಲೋಕ’ ಸಿನಿಮಾಗೆ ತೆಲುಗಿನಲ್ಲಿ ನಾನೇ ಡಬ್ ಮಾಡಿದ್ದು. ಸದ್ಯದಲ್ಲೇ ನನ್ನ ಮಗನನ್ನು ಕನ್ನಡಕ್ಕೆ ಪರಿಚಯ ಮಾಡಿಸುತ್ತೇನೆ’ ಎಂದಿದ್ದಾರೆ ಸಾಯಿಕುಮಾರ್.

‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಬಗ್ಗೆ ಸಾಯಿಕುಮಾರ್ ಸಂತಸ ಹಂಚಿಕೊಂಡಿದ್ದಾರ. ಈ ಚಿತ್ರದ ಯಶಸ್ಸನ್ನು ಅವರು ಕೊಂಡಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:36 pm, Fri, 20 May 22

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!