AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂಬರೀಷ್​​ ಕುಟುಂಬಕ್ಕಾಗಿ ನಾನು ಪ್ರಾಣ ಕೊಡಲೂ ಸಿದ್ಧ’; ರಾಕ್​ಲೈನ್​ ವೆಂಕಟೇಶ್​

Rockline Venkatesh: ನನ್ನನ್ನು ಯಾರಾದರೂ ಹೆದರಿಸಬೇಕು ಅಂದರೆ ಆಗೋದಿಲ್ಲ. ಯಾರೋ ದುಷ್ಕರ್ಮಿಗಳು ನಮ್ಮನೆಗೆ ಬಾಟಲಿ ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬ ಬೆಂಬಲಿಸುವೆ ಎಂದಿದ್ದಾರೆ ರಾಕ್​ಲೈನ್​ ವೆಂಕಟೇಶ್.

‘ಅಂಬರೀಷ್​​ ಕುಟುಂಬಕ್ಕಾಗಿ ನಾನು ಪ್ರಾಣ ಕೊಡಲೂ ಸಿದ್ಧ’; ರಾಕ್​ಲೈನ್​ ವೆಂಕಟೇಶ್​
ರಾಕ್​ಲೈನ್​ ವೆಂಕಟೇಶ್​
TV9 Web
| Edited By: |

Updated on:Jul 12, 2021 | 5:25 PM

Share

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದರು. ಇದಾದ ಬೆನ್ನಲ್ಲೇ ರಾಕ್​ಲೈನ್​ ವೆಂಕಟೇಶ್ ಮನೆ ಮೇಲೆ ಬಾಟಲಿ ಎಸೆಯಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ರಾಕ್​ಲೈನ್​ ವೆಂಕಟೇಶ್, ‘ನನ್ನನ್ನು ಯಾರಾದರೂ ಹೆದರಿಸಬೇಕು ಅಂದರೆ ಆಗೋದಿಲ್ಲ. ಯಾರೋ ದುಷ್ಕರ್ಮಿಗಳು ನಮ್ಮ ಮನೆಗೆ ಬಾಟಲಿ ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬ ಬೆಂಬಲಿಸುವೆ. ಈ ರೀತಿ ಗಲಾಟೆ ಮಾಡಿಸಿ ಹೆದರಿಸ್ತೀವಿ ಅಂದ್ಕೊಂಡ್ರೆ ಆಗಲ್ಲ. ಅಂಬರೀಷ್​​ ಕುಟುಂಬದ ಹಿಂದೆ ನಾನು ಸದಾ ಇರುತ್ತೇನೆ. ಅವರ ಕುಟುಂಬಕ್ಕಾಗಿ ನಾನು ಪ್ರಾಣ ಕೊಡಲೂ ಸಿದ್ಧ. ಅಕ್ರಮ ಗಣಿಗಾರಿಕೆ ವಿರುದ್ಧ ಸುಮಲತಾ ದನಿ ಎತ್ತಿದ್ದಾರೆ. ನಾನು ರಾಜಕೀಯವಾಗಿ ಮಾತನಾಡಲು ಹೋಗುವುದಿಲ್ಲ’ ಎಂದಿದ್ದಾರೆ.

ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವೆ ಟಾಕ್‌ಫೈಟ್ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ರಾಕ್​ಲೈನ್​ ವೆಂಕಟೇಶ್​, ‘ರಾಜ್ಯದ ಜನರಿಗೆ ಬೇಸರ ಆಗಿದೆ. ಕುಮಾರಣ್ಣನಿಗೆ ನಾನು ಮನವಿ ಮಾಡುತ್ತೇನೆ. ಇದಕ್ಕೆ ವಿರಾಮ ಕೊಡಬೇಡಿ, ಅದರ ಬದಲು ಅಂತ್ಯ ಹಾಡಿ. ಇಬ್ಬರು ಕುಳಿತು ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ. ಮಾಧ್ಯಮದಲ್ಲಿ ಒಂದು ವೇದಿಕೆ ಕಲ್ಪಿಸಿ ಚರ್ಚೆ ಮಾಡಿ. ನಿಮ್ಮ ನಿಮ್ಮ ಮನಸ್ಸಿನಲ್ಲಿ ಇರೋದನ್ನು ಚರ್ಚೆ ಮಾಡಿ. ಇದನ್ನು ಇನ್ನೂ ಮುಂದುವರಿಸೋದು ಬೇಡವೆಂದು ನನ್ನ ಮನವಿ’ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಿಟ್ಟಿಗೆದ್ದಿದ್ದ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ:

ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ: ಮಂಡ್ಯ ಸಂಸದೆ ಸುಮಲತಾ ಟ್ವೀಟ್

ಕುಮಾರಣ್ಣನ ಕೆಣಕಿದರೆ ಸಹಿಸೋದಿಲ್ಲ, ಮಂಡ್ಯ ಬಗ್ಗೆ ಮಾತನಾಡಿದರೆ ಹುಷಾರ್: ರಾಕ್​ಲೈನ್​ಗೆ ಅನ್ನದಾನಿ ಎಚ್ಚರಿಕೆ

Published On - 4:48 pm, Mon, 12 July 21

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ