‘ಅಂಬರೀಷ್​​ ಕುಟುಂಬಕ್ಕಾಗಿ ನಾನು ಪ್ರಾಣ ಕೊಡಲೂ ಸಿದ್ಧ’; ರಾಕ್​ಲೈನ್​ ವೆಂಕಟೇಶ್​

Rockline Venkatesh: ನನ್ನನ್ನು ಯಾರಾದರೂ ಹೆದರಿಸಬೇಕು ಅಂದರೆ ಆಗೋದಿಲ್ಲ. ಯಾರೋ ದುಷ್ಕರ್ಮಿಗಳು ನಮ್ಮನೆಗೆ ಬಾಟಲಿ ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬ ಬೆಂಬಲಿಸುವೆ ಎಂದಿದ್ದಾರೆ ರಾಕ್​ಲೈನ್​ ವೆಂಕಟೇಶ್.

‘ಅಂಬರೀಷ್​​ ಕುಟುಂಬಕ್ಕಾಗಿ ನಾನು ಪ್ರಾಣ ಕೊಡಲೂ ಸಿದ್ಧ’; ರಾಕ್​ಲೈನ್​ ವೆಂಕಟೇಶ್​
ರಾಕ್​ಲೈನ್​ ವೆಂಕಟೇಶ್​
Edited By:

Updated on: Jul 12, 2021 | 5:25 PM

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದರು. ಇದಾದ ಬೆನ್ನಲ್ಲೇ ರಾಕ್​ಲೈನ್​ ವೆಂಕಟೇಶ್ ಮನೆ ಮೇಲೆ ಬಾಟಲಿ ಎಸೆಯಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ರಾಕ್​ಲೈನ್​ ವೆಂಕಟೇಶ್, ‘ನನ್ನನ್ನು ಯಾರಾದರೂ ಹೆದರಿಸಬೇಕು ಅಂದರೆ ಆಗೋದಿಲ್ಲ. ಯಾರೋ ದುಷ್ಕರ್ಮಿಗಳು ನಮ್ಮ ಮನೆಗೆ ಬಾಟಲಿ ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬ ಬೆಂಬಲಿಸುವೆ. ಈ ರೀತಿ ಗಲಾಟೆ ಮಾಡಿಸಿ ಹೆದರಿಸ್ತೀವಿ ಅಂದ್ಕೊಂಡ್ರೆ ಆಗಲ್ಲ. ಅಂಬರೀಷ್​​ ಕುಟುಂಬದ ಹಿಂದೆ ನಾನು ಸದಾ ಇರುತ್ತೇನೆ. ಅವರ ಕುಟುಂಬಕ್ಕಾಗಿ ನಾನು ಪ್ರಾಣ ಕೊಡಲೂ ಸಿದ್ಧ. ಅಕ್ರಮ ಗಣಿಗಾರಿಕೆ ವಿರುದ್ಧ ಸುಮಲತಾ ದನಿ ಎತ್ತಿದ್ದಾರೆ. ನಾನು ರಾಜಕೀಯವಾಗಿ ಮಾತನಾಡಲು ಹೋಗುವುದಿಲ್ಲ’ ಎಂದಿದ್ದಾರೆ.

ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವೆ ಟಾಕ್‌ಫೈಟ್ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ರಾಕ್​ಲೈನ್​ ವೆಂಕಟೇಶ್​, ‘ರಾಜ್ಯದ ಜನರಿಗೆ ಬೇಸರ ಆಗಿದೆ. ಕುಮಾರಣ್ಣನಿಗೆ ನಾನು ಮನವಿ ಮಾಡುತ್ತೇನೆ. ಇದಕ್ಕೆ ವಿರಾಮ ಕೊಡಬೇಡಿ, ಅದರ ಬದಲು ಅಂತ್ಯ ಹಾಡಿ. ಇಬ್ಬರು ಕುಳಿತು ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ. ಮಾಧ್ಯಮದಲ್ಲಿ ಒಂದು ವೇದಿಕೆ ಕಲ್ಪಿಸಿ ಚರ್ಚೆ ಮಾಡಿ. ನಿಮ್ಮ ನಿಮ್ಮ ಮನಸ್ಸಿನಲ್ಲಿ ಇರೋದನ್ನು ಚರ್ಚೆ ಮಾಡಿ. ಇದನ್ನು ಇನ್ನೂ ಮುಂದುವರಿಸೋದು ಬೇಡವೆಂದು ನನ್ನ ಮನವಿ’ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಂಬರೀಷ್​ ಕುಟುಂಬದವರ ಮೇಲೆ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಿಟ್ಟಿಗೆದ್ದಿದ್ದ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ:

ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ: ಮಂಡ್ಯ ಸಂಸದೆ ಸುಮಲತಾ ಟ್ವೀಟ್

ಕುಮಾರಣ್ಣನ ಕೆಣಕಿದರೆ ಸಹಿಸೋದಿಲ್ಲ, ಮಂಡ್ಯ ಬಗ್ಗೆ ಮಾತನಾಡಿದರೆ ಹುಷಾರ್: ರಾಕ್​ಲೈನ್​ಗೆ ಅನ್ನದಾನಿ ಎಚ್ಚರಿಕೆ

Published On - 4:48 pm, Mon, 12 July 21

Web contact

TV9 Kannada

Read More
Follow Us