AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಪಾತ್ರಗಳನ್ನೂ ನಾನೇ ಮಾಡೋಕಾಗಲ್ಲ; ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಹೀಗೆ ಅಂದಿದ್ಯಾಕೆ?

ಸಿನಿಮಾ ಯಶಸ್ಸಿನ ಬಗ್ಗೆ ದರ್ಶನ್​ ಅವರು ಇದೇ ಮೊದಲ ಬಾರಿಗೆ ಟಿವಿ9 ಕನ್ನಡದ ಜತೆಗೆ ಎಕ್ಸ್​ಕ್ಲ್ಯೂಸಿವ್​ ಆಗಿ ಮಾತನಾಡಿದ್ದಾರೆ. ಈ ವೇಳೆ, ಅವರು ಸಾಕಷ್ಟು ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಎಲ್ಲಾ ಪಾತ್ರಗಳನ್ನೂ ನಾನೇ ಮಾಡೋಕಾಗಲ್ಲ; ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಹೀಗೆ ಅಂದಿದ್ಯಾಕೆ?
ದರ್ಶನ್​ನಲ್ಲಿ ರಾಬರ್ಟ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 14, 2021 | 4:45 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ನಿತ್ಯ ಕೋಟಿ ಕೋಟಿ ಕಲೆಕ್ಷನ್​ ಮಾಡುತ್ತಿರುವ ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಎನ್ನುವ ಕೀರ್ತಿಗೆ ಭಾಜನವಾಗಿದೆ. ಸಿನಿಮಾ ಯಶಸ್ಸಿನ ಬಗ್ಗೆ ದರ್ಶನ್​ ಅವರು ಇದೇ ಮೊದಲ ಬಾರಿಗೆ ಟಿವಿ9 ಕನ್ನಡದ ಜತೆಗೆ ಎಕ್ಸ್​ಕ್ಲ್ಯೂಸಿವ್​ ಆಗಿ ಮಾತನಾಡಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರಾಬರ್ಟ್​ ಸಿನಿಮಾದಲ್ಲಿ ದರ್ಶನ್​ ಜತೆಗೆ ಸಾಕಷ್ಟು ಪಾತ್ರಗಳು ಹೈಲೈಟ್​ ಆಗಿವೆ. ವಿನೋದ್​​ ಪ್ರಭಾಕರ್​ ಪಾತ್ರವೂ ಹೆಚ್ಚು ತೂಕ ಹೊಂದಿದೆ. ವಿನೋದ್​​ ಪ್ರಭಾಕರ್​ ಮತ್ತು ದರ್ಶನ್​ ಕಾಂಬಿನೇಷನ್​ ಬಗ್ಗೆ ಕೇಳಿದ ಪ್ರಶ್ನೆಗೆ ದರ್ಶನ್​ ಉತ್ತರಿಸಿದ್ದಾರೆ. ಸಿನಿಮಾ ಎಂಬುದು ಒನ್​ ಮ್ಯಾನ್​ ಶೋ ಅಲ್ಲ. ಎಲ್ಲಾ ಪಾತ್ರಗಳು ದರ್ಶನ್​ ಮಾಡೋಕೆ ಆಗಲ್ಲ. ಯಾವ ದೃಶ್ಯದಲ್ಲಿ ಯಾರು ಹೈಲೈಟ್​ ಆಗಬೇಕೋ ಅವರೇ ಹೈಲೈಟ್​ ಆಗಬೇಕು. ಅಂದಾಗ ಮಾತ್ರ ಸಿನಿಮಾ ಯಶಸ್ಸು ಕಾಣುತ್ತದೆ ಎಂದು ದರ್ಶನ್​ ಹೇಳಿದ್ದಾರೆ.

ಚಿತ್ರಮಂದಿರಕ್ಕೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಕಾಲಿಡುತ್ತಿದ್ದಾರೆ. ಈ ಬಗ್ಗೆ ದರ್ಶನ್​ ಮಾತನಾಡಿದ್ದಾರೆ. ಸಿನಿಮಾವನ್ನು ಜನರು ನೋಡಿ ಖುಷಿಪಡುತ್ತಿದ್ದಾರೆ. ಈ ಎಲ್ಲಾ ಕ್ರೆಡಿಟ್​ಅನ್ನು ನಾನು ಜನರಿಗೆ ನೀಡುತ್ತೇನೆ. ನನ್ನ ಎರಡು ಭಿನ್ನ ಪಾತ್ರಗಳನ್ನು ಹುಟ್ಟಿ ಹಾಕಿದ್ದು ನಿರ್ದೇಶಕ ತರುಣ್​ ಸುಧೀರ್​. ಅವರನ್ನೂ ನಾನು ಹೊಗಳಲೇ ಬೇಕು ಎಂದು ದರ್ಶನ್​ ಹೇಳಿದ್ದಾರೆ.

ತೆಲುಗು ನಾಡಿನಲ್ಲೂ ರಾಬರ್ಟ್​ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಈ ಬಗ್ಗೆ ದರ್ಶನ್​ ಫುಲ್​ ಖುಷ್​ ಆಗಿದ್ದಾರೆ. ಈ ಬಗ್ಗೆಯೂ ದರ್ಶನ್​ ಖುಷಿ ಹಂಚಿಕೊಂಡಿದ್ದಾರೆ. ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Roberrt Kannada Movie Review: ಒಂದೇ ಟಿಕೆಟ್​ನಲ್ಲಿ ದರ್ಶನ್​ ಫ್ಯಾನ್ಸ್​ಗೆ ರಾಬರ್ಟ್​ ಮತ್ತು ರಾಘವನ ಡಬಲ್​ ಧಮಾಕಾ!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು