‘ಹೇಮಾ ಸಮಿತಿ ರೀತಿಯೇ ಸ್ಯಾಂಡಲ್​ವುಡ್​ನಲ್ಲೂ ಒಂದು ಸಮಿತಿಯ ಅಗತ್ಯವಿದೆ’; ಶ್ರುತಿ ಹರಿಹರನ್

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೇರಳ ಸರ್ಕಾರ ಪ್ರಕಟಿಸಿತ್ತು. ಇದರಲ್ಲಿ ಕೆಲವು ಆಘಾತಕಾರಿ ಅಂಶಗಳು ಹೊರಬಂದಿದ್ದವು. ಈ ರೀತಿಯ ಸಮಿತಿ ಕನ್ನಡ ಚಿತ್ರಂಗಕ್ಕೂ ಅಗತ್ಯವಿದೆ ಎಂದು ಶ್ರುತಿ ಹರಿಹರನ್ ಹೇಳಿದ್ದಾರೆ.

‘ಹೇಮಾ ಸಮಿತಿ ರೀತಿಯೇ ಸ್ಯಾಂಡಲ್​ವುಡ್​ನಲ್ಲೂ ಒಂದು ಸಮಿತಿಯ ಅಗತ್ಯವಿದೆ’; ಶ್ರುತಿ ಹರಿಹರನ್
ಶ್ರುತಿ ಹರಿಹರನ್
Follow us
|

Updated on:Sep 03, 2024 | 1:07 PM

ಜಸ್ಟೀಸ್ ಹೇಮಾ ಸಮಿತಿ ವರದಿ ಸಂಚಲನ ಸೃಷ್ಟಿ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ಹೀರೋಯಿನ್​ಗಳು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಹಾಗೂ ಶೋಷಣೆಗಳ ಬಗ್ಗೆ ಈ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ವರದಿ 2019ರಲ್ಲೇ ಸರ್ಕಾರದ ಕೈ ಸೇರಿತ್ತು. ಈಗ ವರದಿಯ ವಿಚಾರಗಳನ್ನು ಬಹಿರಂಗ ಮಾಡಲಾಗಿದೆ. ಈ ಬಗ್ಗೆ ಅನೇಕರು ಮಾತನಾಡುತ್ತಿದ್ದಾರೆ. ಕನ್ನಡದ ನಟಿ ಶ್ರುತಿ ಹರಿಹರನ್ ಕೂಡ ಈ ಬಗ್ಗೆ‘ಟಿವಿ9 ಕನ್ನಡ ಡಿಜಿಟಲ್​’ಗೆ  ಪ್ರತಿಕ್ರಿಯೆ ನೀಡಿದ್ದು, ಕನ್ನಡದಲ್ಲಿ ಈ ರೀತಿಯ ಸಮಿತಿಯ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನನಗೆ ಹೇಮಾ ಸಮಿತಿಯ ವರದಿ​ ಬಗ್ಗೆ ತುಂಬಾನೇ ಗೌರವ ಇದೆ. ಇಷ್ಟು ದಿನಗಳಿಂದ ಈ ಬಗ್ಗೆ ನಾವು ಇದನ್ನು ಮುಚ್ಚುಮರೆಯಲ್ಲಿ ಮಾತನಾಡುತ್ತಿದ್ದೆವು. ಸೆಕ್ಷುವಲ್ ಫೇವರ್ ಅತಿಯಾಗಿದೆ ಎಂದು ಹೇಳುತ್ತಿದ್ದೆವು. ಈ ವಿಚಾರವನ್ನು ಆಪ್ತ ಬಳಗದಲ್ಲಿ ಕೆಲವರು ಜೋಕ್ ಕೂಡ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರೆ ನಿಜಕ್ಕೂ ಹೆಮ್ಮೆಯ ವಿಚಾರ’ ಎಂದಿದ್ದಾರೆ ಅವರು.

‘ಈ ವರದಿ ಮಲಯಾಳಂ ಚಿತ್ರರಂಗದ ಗೌರವ ಕಡಿಮೆ ಮಾಡುತ್ತಿದೆ, ಮಲಯಾಳಂ ಚಿತ್ರರಂಗದ ಘನತೆಗೆ ಧಕ್ಕೆ ತಂದಿದೆ’ ಎಂದು ಮಾತನಾಡಿಕೊಂಡಿದ್ದೂ ಇದೆ. ಆದರೆ, ಇದನ್ನು ಶ್ರುತಿ ಹರಿಹರನ್ ತಪ್ಪು ಎಂದಿದ್ದಾರೆ. ‘ಇದು ಖಂಡಿತವಾಗಿಯೂ ತಪ್ಪು. ಆ ರೀತಿ ನೋಡಬಾರದು. ಸಿನಿಮಾ ಕಲೆಗೆ ಸಂಬಂಧಿಸಿದ್ದು. ಅದರೊಳಗೆ ಇರುವ ಕೆಲವ ವಿಚಾರಗಳನ್ನು ಸ್ವಚ್ಛ ಮಾಡಲು ಇದು ಸರಿಯಾದ ಸಮಯ. ನಮ್ಮ ಮನೆಯನ್ನು ನಾವು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು’ ಎಂದಿದ್ದಾರೆ ಶ್ರುತಿ ಹರಿಹರನ್.

ಸಮಂತಾ ಅವರು ಈ ಬಗ್ಗೆ ಮಾತನಾಡುವಾಗ ತೆಲುಗು ಚಿತ್ರರಂಗದಲ್ಲೂ ಈ ರೀತಿಯ ಸಮಿತಿಯ ಅಗತ್ಯವಿದೆ ಎಂದು ಹೇಳಿದ್ದರು. ಅದೇ ರೀತಿ, ಕನ್ನಡದಲ್ಲೂ ಈ ರೀತಿಯ ಸಮಿತಿಯ ರಚನೆ ಆಗಬೇಕು ಎಂದು ಶ್ರುತಿ ಹರಿಹರನ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಸಂಭವಾಮಿ ಯುಗೇ ಯುಗೇ’ ಸಿನಿಮಾದ ಸಾಂಗ್​ ಬಿಡುಗಡೆ ಮಾಡಿದ ಶ್ರುತಿ ಹರಿಹರನ್

ಶ್ರುತಿ ಹರಿಹರನ್ ಸಿನಿಮಾ ವಿಚಾರಗಳ ಬಗ್ಗೆಯೂ ಮಾತನಾಡಿದ್ದಾರೆ. ‘ಚೀತಾ ಹೆಸರಿನ ಸಿನಿಮಾಗೆ ಸಹಿ ಹಾಕಿದ್ದೆ. ಅದರ ಕೆಲಸ ಮುಗಿಯುತ್ತಾ ಬಂತು. ತಮಿಳಿನಲ್ಲಿ ಎರಡುಮೂರು ಸಿನಿಮಾಗಳನ್ನು ಮಾಡುತ್ತಿದ್ದೇನೆ’ ಎಂದಿದ್ದಾರೆ. ಅವರು ಕನ್ನಡದಲ್ಲಿ ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:02 pm, Tue, 3 September 24

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?