AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’; ದರ್ಶನ್​ ವಿರುದ್ಧ ಮತ್ತೆ ಹರಿಹಾಯ್ದ ಇಂದ್ರಜಿತ್​ ಲಂಕೇಶ್

ಬಡವರಿಗೆ ಅನ್ಯಾಯ ಆಗ್ತಿದೆ. ಈ ದೃಷ್ಟಿಯಿಂದ ನಾನು ಮುಂದೆ ಬಂದಿದೀನಿ. ತಪ್ಪಾದಾಗ ತಪ್ಪು ಎಂದಿದೀನಿ. ನನ್ನನ್ನು ಯಾರೂ ಎತ್ತಿ ಕಟ್ಟಿಲ್ಲ ಎಂದಿದ್ದಾರೆ ಇಂದ್ರಜಿತ್​.

‘ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’; ದರ್ಶನ್​ ವಿರುದ್ಧ ಮತ್ತೆ ಹರಿಹಾಯ್ದ ಇಂದ್ರಜಿತ್​ ಲಂಕೇಶ್
ಇಂದ್ರಜಿತ್​ ಲಂಕೇಶ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 15, 2021 | 3:42 PM

Share

ನಿರ್ಮಾಪಕ ಸಂದೇಶ್​ ಅವರ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿರುವ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಆರೋಪ ಮಾಡಿದ್ದರು. ಇದಾದ ನಾಲ್ಕು ಗಂಟೆ ನಂತರದಲ್ಲಿ ಮತ್ತೆ ಅವರು ಸುದ್ದಿಗೋಷ್ಠಿ ಕರೆದು ಮಾತನಾಡಿದ್ದು, ‘ನನ್ನ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ, ಸಾರ್ವಜನಿಕರಿಗೆ ಅನ್ಯಾಯವಾಗಬಾರದು ಅನ್ನೋದಷ್ಟೇ ನನ್ನ ಉದ್ದೇಶ’ ಎಂದಿದ್ದಾರೆ.

‘ನನಗೆ ಯಾರ ಮೇಲೂ ದ್ವೇಷ ಇಲ್ಲ. ಸಾರ್ವಜನಿಕರಿಗೆ ಅನ್ಯಾಯ ಆಗಬಾರದು ಎನ್ನುವುದು ನನ್ನ ಉದ್ದೇಶ. ಇತ್ತೀಚೆಗೆ ಹಲವಾರು ಘಟನೆ ನಡೀತಾನೆ ಇದೆ. ಬಡವರಿಗೆ ಅನ್ಯಾಯ ಆಗ್ತಿದೆ. ಈ ದೃಷ್ಟಿಯಿಂದ ನಾನು ಮುಂದೆ ಬಂದಿದೀನಿ. ತಪ್ಪಾದಾಗ ತಪ್ಪು ಎಂದಿದೀನಿ. ನನ್ನನ್ನು ಯಾರೂ ಎತ್ತಿ ಕಟ್ಟಿಲ್ಲ. ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’ ಎಂದಿದ್ದಾರೆ ಅವರು.

‘ಈ ಘಟನೆಗೆ ಸಾಕ್ಷಿ ಸಾಕಷ್ಟಿದೆ. ಹೋಟೆಲ್​ನಲ್ಲಿ ಸಿಸಿ ಟಿವಿ ಫೂಟೆಜ್​ ಇಲ್ಲ ಎಂದು ಹೇಳುತ್ತಾರೆ. ಸರ್ಕಾರದ ನಿಯಮದ ಪ್ರಕಾರ ಹೋಟೆಲ್​ನವರು 60 ದಿನದ ಸಿಸಿಟಿವಿ ದೃಶ್ಯಗಳನ್ನು ಇಟ್ಟುಕೊಳ್ಳಲೇಬೇಕು. ಆದರೆ, ಈ ಘಟನೆಯಲ್ಲಿ 10 ದಿನಕ್ಕೆ ಮಾಯವಾಗಿಬಿಡುತ್ತೆ ಎಂದರೆ ಏನಿದರ ಅರ್ಥ. ಜೂನ್​ 24-25 ರಂದು ಲಾಕ್​ಡೌನ್​ ಇತ್ತು. ಆದಾಗ್ಯೂ ಪಾರ್ಟಿ ಮಾಡಿದ್ದಾರೆ. ಸಂದೇಶ್ ಹೋಟೆಲ್​ನಲ್ಲಿ ಹೊಡೆದಿದ್ದು ಬಿಹಾರದವನಿಗಲ್ಲ. ಗಂಗಾಧರ ಎಂಬ ಕನ್ನಡಿಗನಿಗೆ. ಹಲ್ಲೆ ಬಳಿಕ ಗಂಗಾಧರನನ್ನು ಕೆಲಸದಿಂದ ತೆಗೆದಿದ್ದಾರೆ. ಗಂಗಾಧರ್ ಈಗ ಎಲ್ಲಿದ್ದಾನೆ ಎಂದು ತನಿಖೆ ಮಾಡಿಸಲಿ. ಅನ್ಯಾಯದ ಬಗ್ಗೆ ಗೃಹಸಚಿವರಿಗೆ ನಾನು ದೂರು ನೀಡಿದ್ದೇನೆ. ಸರ್ಪ್ರೈಸಿಂಗ್, ಶಾಕಿಂಗ್ ಘಟನೆಗಳು ಇನ್ನೂ ನನ್ನ ಬಳಿ ಇವೆ.  ಪೊಲೀಸರು ನ್ಯಾಯಯುತವಾಗಿ ಕೆಲಸ ಮಾಡಲಿ’ ಎಂದು ಇಂದ್ರಜಿತ್​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇಂದ್ರಜಿತ್ ಲಂಕೇಶ್ ಮನವಿಗೆ ಸ್ಪಂದಿಸಿದ ಗೃಹ ಸಚಿವ ಬೊಮ್ಮಾಯಿ; ತನಿಖೆಗೆ ಸೂಚನೆ

Darshan Press Meet: ಕಾಣದ ಕೈಗಳು ಕೆಲಸ ಮಾಡುತ್ತಿವೆ; ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಗರಂ

Published On - 3:36 pm, Thu, 15 July 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್