AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್

ಸದ್ಯ ಬಾಕ್​ ಟು ಬ್ಯಾಕ್​ ತೆಲುಗು ಸಿನಿಮಾಗಳಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಬ್ಯುಸಿ ಆಗಿದ್ದಾರೆ. ಅವರು ತೆಲುಗಿಗೆ ಹಾರಿದ್ದಾದ್ರು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್
ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 17, 2022 | 10:32 PM

ಭಾರತೀಯರು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ಎಂದರೆ ಅದು ‘ಕೆಜಿಎಫ್’ (KGF) ಹಾಗೂ ‘ಕೆಜಿಎಫ್ 2’ ಚಿತ್ರ​​. ಅದಕ್ಕೆ ಮುಖ್ಯ ಕಾರಣ ನಿರ್ದೇಶಕ ಪ್ರಶಾಂತ್ ನೀಲ್. ‘ಕೆಜಿಎಫ್ ‘ ಸರಣಿಯ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ  ಪ್ರಶಾಂತ್ ನೀಲ್ (Prashanth Neel) ಮನೆಮಾತಾದರು. ಹಲವು ನಟ, ನಟಿಯರು ಅವರೊಂದಿಗೆ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಟ ಪ್ರಭಾಸ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವ ಗ್ಯಾಂಗ್​ಸ್ಟಾರ್ ಹಿನ್ನೆಲೆಯುಳ್ಳ ‘ಸಲಾರ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ನಟಿ ಶೃತಿ ಹಾಸನ್ ಕೂಡ ನಟಿಸುತ್ತಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’​ ಚಿತ್ರದ ಬಳಿಕ ಜೂನಿಯರ್​ ಎನ್​ಟಿಆರ್​ಗೆ ಪ್ರಶಾಂತ್ ನೀಲ್ ಆ್ಯಕ್ಷನ್​ ಚಿತ್ರ ಮಾಡಲಿದ್ದಾರೆ. ಸದ್ಯ ಆ ಚಿತ್ರಕ್ಕೆ ಇನ್ನು ಹೆಸರಿಟ್ಟಿಲ್ಲ. 2023ರ ಮಧ್ಯದಲ್ಲಿ ಈ ಚಿತ್ರದ ಕೆಲಸ ಆರಂಭಗೊಳ್ಳುವ ಸಾಧ್ಯತೆ ಇದೆ. ಇದಾದ ನಂತರ ನಟ ರಾಮ್​​ ಚರಣ್ ಅವರೊಂದಿಗೂ ಒಂದು ಸಿನಿಮಾ ಮಾಡುವ ಯೋಜನೆ ಕೂಡ ಅವರಿಗೆ ಇದೆ. ಹೀಗೆ ಪ್ರಶಾಂತ್​ ನೀಲ್ ತೆಲುಗಿನ ದೊಡ್ಡ ದೊಡ್ಡ ನಟರೊಂದಿಗೆ ಸಿನಿಮಾ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಇತ್ತ ಕೆಲ ಕರ್ನಾಟಕದ ಫ್ಯಾನ್ಸ್​ ಮಾತ್ರ ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ. ಕನ್ನಡದಲ್ಲಿ ಸಿನಿಮಾ ಮಾಡಿ ಗೆದ್ದು, ಸ್ಟಾರ್ ನಿರ್ದೇಶಕರಾದ ಮೇಲೆ ತೆಲುಗಿಗೆ ಹಾರಿದರು ಎಂದೆಲ್ಲಾ ಟ್ರೋಲ್​ ಮಾಡಿದ್ದರು.

ಸದ್ಯ ಅದಕ್ಕೆಲ್ಲ ಪ್ರಶಾಂತ್​ ನೀಲ್​ ಉತ್ತರಿಸಿದ್ದು, ಅವರು ಏಕೆ ತೆಲುಗಿಗೆ ಹೋದೆ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಆಗ ಅವರಿಗೆ ಇದೇ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರ ನೀಡಿದ ಪ್ರಶಾಂತ್​ ನೀಲ್,  ‘ನಾನು ಯಾವ ತೆಲುಗು ನಟರನ್ನು ಸಂಪರ್ಕ ಮಾಡಿಲ್ಲ. ಕೆಲ ನಿರ್ಮಾಪಕರು ನನಗೆ ಕಾಲ್ ಮಾಡಿ ತೆಲಗು ನಟರೊಂದಿಗೆ ಪ್ಯಾನ್​ ಇಂಡಿಯಾ ಚಿತ್ರ ಮಾಡೋಣ ಬನ್ನಿ ಎಂದು ಅವಕಾಶ ನೀಡಿದ್ದಾರೆ. ಈ ಚಿತ್ರಗಳು ಮುಗಿದ ನಂತರ ನಾನು ಮತ್ತೆ ಕನ್ನಡದಲ್ಲಿ ಚಿತ್ರಗಳನ್ನು ಮಾಡುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:29 pm, Thu, 17 November 22

ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ