AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್

ಸದ್ಯ ಬಾಕ್​ ಟು ಬ್ಯಾಕ್​ ತೆಲುಗು ಸಿನಿಮಾಗಳಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಬ್ಯುಸಿ ಆಗಿದ್ದಾರೆ. ಅವರು ತೆಲುಗಿಗೆ ಹಾರಿದ್ದಾದ್ರು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್
ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್
TV9 Web
| Edited By: |

Updated on:Nov 17, 2022 | 10:32 PM

Share

ಭಾರತೀಯರು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ಎಂದರೆ ಅದು ‘ಕೆಜಿಎಫ್’ (KGF) ಹಾಗೂ ‘ಕೆಜಿಎಫ್ 2’ ಚಿತ್ರ​​. ಅದಕ್ಕೆ ಮುಖ್ಯ ಕಾರಣ ನಿರ್ದೇಶಕ ಪ್ರಶಾಂತ್ ನೀಲ್. ‘ಕೆಜಿಎಫ್ ‘ ಸರಣಿಯ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ  ಪ್ರಶಾಂತ್ ನೀಲ್ (Prashanth Neel) ಮನೆಮಾತಾದರು. ಹಲವು ನಟ, ನಟಿಯರು ಅವರೊಂದಿಗೆ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಟ ಪ್ರಭಾಸ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವ ಗ್ಯಾಂಗ್​ಸ್ಟಾರ್ ಹಿನ್ನೆಲೆಯುಳ್ಳ ‘ಸಲಾರ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ನಟಿ ಶೃತಿ ಹಾಸನ್ ಕೂಡ ನಟಿಸುತ್ತಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’​ ಚಿತ್ರದ ಬಳಿಕ ಜೂನಿಯರ್​ ಎನ್​ಟಿಆರ್​ಗೆ ಪ್ರಶಾಂತ್ ನೀಲ್ ಆ್ಯಕ್ಷನ್​ ಚಿತ್ರ ಮಾಡಲಿದ್ದಾರೆ. ಸದ್ಯ ಆ ಚಿತ್ರಕ್ಕೆ ಇನ್ನು ಹೆಸರಿಟ್ಟಿಲ್ಲ. 2023ರ ಮಧ್ಯದಲ್ಲಿ ಈ ಚಿತ್ರದ ಕೆಲಸ ಆರಂಭಗೊಳ್ಳುವ ಸಾಧ್ಯತೆ ಇದೆ. ಇದಾದ ನಂತರ ನಟ ರಾಮ್​​ ಚರಣ್ ಅವರೊಂದಿಗೂ ಒಂದು ಸಿನಿಮಾ ಮಾಡುವ ಯೋಜನೆ ಕೂಡ ಅವರಿಗೆ ಇದೆ. ಹೀಗೆ ಪ್ರಶಾಂತ್​ ನೀಲ್ ತೆಲುಗಿನ ದೊಡ್ಡ ದೊಡ್ಡ ನಟರೊಂದಿಗೆ ಸಿನಿಮಾ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಇತ್ತ ಕೆಲ ಕರ್ನಾಟಕದ ಫ್ಯಾನ್ಸ್​ ಮಾತ್ರ ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ. ಕನ್ನಡದಲ್ಲಿ ಸಿನಿಮಾ ಮಾಡಿ ಗೆದ್ದು, ಸ್ಟಾರ್ ನಿರ್ದೇಶಕರಾದ ಮೇಲೆ ತೆಲುಗಿಗೆ ಹಾರಿದರು ಎಂದೆಲ್ಲಾ ಟ್ರೋಲ್​ ಮಾಡಿದ್ದರು.

ಸದ್ಯ ಅದಕ್ಕೆಲ್ಲ ಪ್ರಶಾಂತ್​ ನೀಲ್​ ಉತ್ತರಿಸಿದ್ದು, ಅವರು ಏಕೆ ತೆಲುಗಿಗೆ ಹೋದೆ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಆಗ ಅವರಿಗೆ ಇದೇ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರ ನೀಡಿದ ಪ್ರಶಾಂತ್​ ನೀಲ್,  ‘ನಾನು ಯಾವ ತೆಲುಗು ನಟರನ್ನು ಸಂಪರ್ಕ ಮಾಡಿಲ್ಲ. ಕೆಲ ನಿರ್ಮಾಪಕರು ನನಗೆ ಕಾಲ್ ಮಾಡಿ ತೆಲಗು ನಟರೊಂದಿಗೆ ಪ್ಯಾನ್​ ಇಂಡಿಯಾ ಚಿತ್ರ ಮಾಡೋಣ ಬನ್ನಿ ಎಂದು ಅವಕಾಶ ನೀಡಿದ್ದಾರೆ. ಈ ಚಿತ್ರಗಳು ಮುಗಿದ ನಂತರ ನಾನು ಮತ್ತೆ ಕನ್ನಡದಲ್ಲಿ ಚಿತ್ರಗಳನ್ನು ಮಾಡುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:29 pm, Thu, 17 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ