AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್

ಸದ್ಯ ಬಾಕ್​ ಟು ಬ್ಯಾಕ್​ ತೆಲುಗು ಸಿನಿಮಾಗಳಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಬ್ಯುಸಿ ಆಗಿದ್ದಾರೆ. ಅವರು ತೆಲುಗಿಗೆ ಹಾರಿದ್ದಾದ್ರು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್
ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್
TV9 Web
| Edited By: |

Updated on:Nov 17, 2022 | 10:32 PM

Share

ಭಾರತೀಯರು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ಎಂದರೆ ಅದು ‘ಕೆಜಿಎಫ್’ (KGF) ಹಾಗೂ ‘ಕೆಜಿಎಫ್ 2’ ಚಿತ್ರ​​. ಅದಕ್ಕೆ ಮುಖ್ಯ ಕಾರಣ ನಿರ್ದೇಶಕ ಪ್ರಶಾಂತ್ ನೀಲ್. ‘ಕೆಜಿಎಫ್ ‘ ಸರಣಿಯ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ  ಪ್ರಶಾಂತ್ ನೀಲ್ (Prashanth Neel) ಮನೆಮಾತಾದರು. ಹಲವು ನಟ, ನಟಿಯರು ಅವರೊಂದಿಗೆ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಟ ಪ್ರಭಾಸ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವ ಗ್ಯಾಂಗ್​ಸ್ಟಾರ್ ಹಿನ್ನೆಲೆಯುಳ್ಳ ‘ಸಲಾರ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ನಟಿ ಶೃತಿ ಹಾಸನ್ ಕೂಡ ನಟಿಸುತ್ತಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’​ ಚಿತ್ರದ ಬಳಿಕ ಜೂನಿಯರ್​ ಎನ್​ಟಿಆರ್​ಗೆ ಪ್ರಶಾಂತ್ ನೀಲ್ ಆ್ಯಕ್ಷನ್​ ಚಿತ್ರ ಮಾಡಲಿದ್ದಾರೆ. ಸದ್ಯ ಆ ಚಿತ್ರಕ್ಕೆ ಇನ್ನು ಹೆಸರಿಟ್ಟಿಲ್ಲ. 2023ರ ಮಧ್ಯದಲ್ಲಿ ಈ ಚಿತ್ರದ ಕೆಲಸ ಆರಂಭಗೊಳ್ಳುವ ಸಾಧ್ಯತೆ ಇದೆ. ಇದಾದ ನಂತರ ನಟ ರಾಮ್​​ ಚರಣ್ ಅವರೊಂದಿಗೂ ಒಂದು ಸಿನಿಮಾ ಮಾಡುವ ಯೋಜನೆ ಕೂಡ ಅವರಿಗೆ ಇದೆ. ಹೀಗೆ ಪ್ರಶಾಂತ್​ ನೀಲ್ ತೆಲುಗಿನ ದೊಡ್ಡ ದೊಡ್ಡ ನಟರೊಂದಿಗೆ ಸಿನಿಮಾ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಇತ್ತ ಕೆಲ ಕರ್ನಾಟಕದ ಫ್ಯಾನ್ಸ್​ ಮಾತ್ರ ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ. ಕನ್ನಡದಲ್ಲಿ ಸಿನಿಮಾ ಮಾಡಿ ಗೆದ್ದು, ಸ್ಟಾರ್ ನಿರ್ದೇಶಕರಾದ ಮೇಲೆ ತೆಲುಗಿಗೆ ಹಾರಿದರು ಎಂದೆಲ್ಲಾ ಟ್ರೋಲ್​ ಮಾಡಿದ್ದರು.

ಸದ್ಯ ಅದಕ್ಕೆಲ್ಲ ಪ್ರಶಾಂತ್​ ನೀಲ್​ ಉತ್ತರಿಸಿದ್ದು, ಅವರು ಏಕೆ ತೆಲುಗಿಗೆ ಹೋದೆ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಆಗ ಅವರಿಗೆ ಇದೇ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರ ನೀಡಿದ ಪ್ರಶಾಂತ್​ ನೀಲ್,  ‘ನಾನು ಯಾವ ತೆಲುಗು ನಟರನ್ನು ಸಂಪರ್ಕ ಮಾಡಿಲ್ಲ. ಕೆಲ ನಿರ್ಮಾಪಕರು ನನಗೆ ಕಾಲ್ ಮಾಡಿ ತೆಲಗು ನಟರೊಂದಿಗೆ ಪ್ಯಾನ್​ ಇಂಡಿಯಾ ಚಿತ್ರ ಮಾಡೋಣ ಬನ್ನಿ ಎಂದು ಅವಕಾಶ ನೀಡಿದ್ದಾರೆ. ಈ ಚಿತ್ರಗಳು ಮುಗಿದ ನಂತರ ನಾನು ಮತ್ತೆ ಕನ್ನಡದಲ್ಲಿ ಚಿತ್ರಗಳನ್ನು ಮಾಡುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:29 pm, Thu, 17 November 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ