‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ

ನಟ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಭೇಟಿ ಮಾಡಿದ್ದಾರೆ. ನಟಿ ಸೋನಲ್​ ಮಾಂಥೆರೋ ಜೊತೆ ಹಸೆಮಣೆ ಏರಲು ಸಜ್ಜಾಗಿರುವ ತರುಣ್​ ಸುಧೀರ್​ ಅವರು ಮದುವೆಯ ದಿನಾಂಕದ ಬಗ್ಗೆ ದರ್ಶನ್​ ಜತೆ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಮದುವೆ ಡೇಟ್​ ಬದಲಾಗುವುದು ಬೇಡ ಅಂತ ದರ್ಶನ್​ ಹೇಳಿರುವುದಾಗಿ ತರುಣ್​ ಮಾಹಿತಿ ನೀಡಿದ್ದಾರೆ.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ
ತರುಣ್​ ಸುಧೀರ್​, ದರ್ಶನ್​
Follow us
| Updated By: ಮದನ್​ ಕುಮಾರ್​

Updated on: Jul 19, 2024 | 2:56 PM

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನಿರ್ದೇಶಕ ತರುಣ್​ ಸುಧೀರ್​ ಇಂದು (ಜುಲೈ 19) ಭೇಟಿ ಆಗಿದ್ದಾರೆ. ದರ್ಶನ್​ ಅರೆಸ್ಟ್​ ಆದ ಬಳಿಕ ಇದೇ ಮೊದಲ ಬಾರಿಗೆ ತರುಣ್​ ಬಂದು ನೋಡಿದ್ದಾರೆ. ಇಬ್ಬರ ನಡುವೆ ಹಲವು ವರ್ಷಗಳಿಂದ ಆತ್ಮೀಯತೆ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ತರುಣ್​ ಸುಧೀರ್​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಹೇಳಿದ್ದಾರೆ. ಪರಪ್ಪನ ಅಗ್ರಹಾರದಿಂದ ಹೊರಬಂದ ಬಳಿಕ ತರುಣ್​ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

‘ದರ್ಶನ್​ ಅವರಿಗೆ ಸ್ವಲ್ಪ ಹುಷಾರಿರಲಿಲ್ಲ. ವಾತಾವರಣ ಬದಲಾವಣೆಯಿಂದ ಆ ರೀತಿ ಆಗಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನನ್ನನ್ನು ಯಾವಾಗಲೂ ನಗುತ್ತ ಮಾತನಾಡಿಸುವ ರೀತಿಯೇ ಇಂದು ಕೂಡ ಮಾತಾಡಿದರು. ಅವರಿಗೆ ಹೋಲಿಸಿದರೆ ನಾವೇ ವೀಕ್ ಆಗಿದ್ದೇವೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಆರಾಮಾಗಿದ್ದೇನೆ ಮಗನೆ ಅಂತ ಹೇಳಿದ್ರು’ ಎಂದಿದ್ದಾರೆ ತರುಣ್​ ಸುಧೀರ್​.

ಇದನ್ನೂ ಓದಿ: ದರ್ಶನ್ ಯಾಕೆ ಜೈಲಿನಲ್ಲೇ ಇರಬೇಕು? ಪೊಲೀಸರು ನೀಡಿದ 30 ಕಾರಣಗಳು ಇಲ್ಲಿವೆ..

‘ನನ್ನ ಮದುವೆ ಬಗ್ಗೆ ದರ್ಶನ್​ ಅವರಿಗೆ ಮೊದಲೇ ಗೊತ್ತಿತ್ತು. ಈ ವಿಚಾರದಲ್ಲಿ ನನಗೆ ಮೊದಲಿನಿಂದಲೂ ತೊಳಲಾಟ ಇತ್ತು. ಯಾವುದೇ ಕಾರಣಕ್ಕೂ ಮದುವೆ ದಿನಾಂಕ ಬದಲಾಯಿಸಬೇಡ ಅಂತ ಅವರು ಹೇಳಿದ್ದಾರೆ. ‘ನಾನು ಬಂದೇ ಬರ್ತೀನಿ’ ಎನ್ನುವ ನಂಬಿಕೆ ಅವರಲ್ಲಿ ಇದೆ. ದರ್ಶನ್​ ಏನೂ ತಪ್ಪು ಮಾಡಿಲ್ಲ ಎಂಬ ನಂಬಿಕೆಯಲ್ಲೇ ನಾವು ಕೂಡ ಇದ್ದೇವೆ. ಹಾಗೆಯೇ ಆಗಲಿ ಅಂತ ಪ್ರಾರ್ಥಿಸುತ್ತೇವೆ’ ಎಂದಿದ್ದಾರೆ ತರುಣ್​.

‘ನನ್ನ ಮದುವೆಗೆ ಬರಲು ವಿಶೇಷ ಅನುಮತಿ ಇದೆಯೋ ಇಲ್ಲವೋ ಎಂಬ ನನಗೆ ತಿಳಿದಿಲ್ಲ. ಮದುವೆ ದಿನಾಂಕಕ್ಕೂ ಮೊದಲೇ ದರ್ಶನ್​ ಅವರು ಹೊರಗೆ ಬರುತ್ತಾರೆ ಎಂಬ ನಂಬಿಕೆ ನನಗೆ ಇದೆ. ಇಂದು ಆಮಂತ್ರಣ ಪತ್ರಿಕೆ ನೀಡಲು ಸಾಧ್ಯವಾಗಿಲ್ಲ. ಯಾಕೆಂದರೆ ಜೈಲಿನ ಒಳಗೆ ಏನನ್ನೂ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ’ ಎಂದು ತರುಣ್​ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.