AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ

ನಟ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಭೇಟಿ ಮಾಡಿದ್ದಾರೆ. ನಟಿ ಸೋನಲ್​ ಮಾಂಥೆರೋ ಜೊತೆ ಹಸೆಮಣೆ ಏರಲು ಸಜ್ಜಾಗಿರುವ ತರುಣ್​ ಸುಧೀರ್​ ಅವರು ಮದುವೆಯ ದಿನಾಂಕದ ಬಗ್ಗೆ ದರ್ಶನ್​ ಜತೆ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಮದುವೆ ಡೇಟ್​ ಬದಲಾಗುವುದು ಬೇಡ ಅಂತ ದರ್ಶನ್​ ಹೇಳಿರುವುದಾಗಿ ತರುಣ್​ ಮಾಹಿತಿ ನೀಡಿದ್ದಾರೆ.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ
ತರುಣ್​ ಸುಧೀರ್​, ದರ್ಶನ್​
ರಾಮು, ಆನೇಕಲ್​
| Edited By: |

Updated on: Jul 19, 2024 | 2:56 PM

Share

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನಿರ್ದೇಶಕ ತರುಣ್​ ಸುಧೀರ್​ ಇಂದು (ಜುಲೈ 19) ಭೇಟಿ ಆಗಿದ್ದಾರೆ. ದರ್ಶನ್​ ಅರೆಸ್ಟ್​ ಆದ ಬಳಿಕ ಇದೇ ಮೊದಲ ಬಾರಿಗೆ ತರುಣ್​ ಬಂದು ನೋಡಿದ್ದಾರೆ. ಇಬ್ಬರ ನಡುವೆ ಹಲವು ವರ್ಷಗಳಿಂದ ಆತ್ಮೀಯತೆ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ತರುಣ್​ ಸುಧೀರ್​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಹೇಳಿದ್ದಾರೆ. ಪರಪ್ಪನ ಅಗ್ರಹಾರದಿಂದ ಹೊರಬಂದ ಬಳಿಕ ತರುಣ್​ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

‘ದರ್ಶನ್​ ಅವರಿಗೆ ಸ್ವಲ್ಪ ಹುಷಾರಿರಲಿಲ್ಲ. ವಾತಾವರಣ ಬದಲಾವಣೆಯಿಂದ ಆ ರೀತಿ ಆಗಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನನ್ನನ್ನು ಯಾವಾಗಲೂ ನಗುತ್ತ ಮಾತನಾಡಿಸುವ ರೀತಿಯೇ ಇಂದು ಕೂಡ ಮಾತಾಡಿದರು. ಅವರಿಗೆ ಹೋಲಿಸಿದರೆ ನಾವೇ ವೀಕ್ ಆಗಿದ್ದೇವೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಆರಾಮಾಗಿದ್ದೇನೆ ಮಗನೆ ಅಂತ ಹೇಳಿದ್ರು’ ಎಂದಿದ್ದಾರೆ ತರುಣ್​ ಸುಧೀರ್​.

ಇದನ್ನೂ ಓದಿ: ದರ್ಶನ್ ಯಾಕೆ ಜೈಲಿನಲ್ಲೇ ಇರಬೇಕು? ಪೊಲೀಸರು ನೀಡಿದ 30 ಕಾರಣಗಳು ಇಲ್ಲಿವೆ..

‘ನನ್ನ ಮದುವೆ ಬಗ್ಗೆ ದರ್ಶನ್​ ಅವರಿಗೆ ಮೊದಲೇ ಗೊತ್ತಿತ್ತು. ಈ ವಿಚಾರದಲ್ಲಿ ನನಗೆ ಮೊದಲಿನಿಂದಲೂ ತೊಳಲಾಟ ಇತ್ತು. ಯಾವುದೇ ಕಾರಣಕ್ಕೂ ಮದುವೆ ದಿನಾಂಕ ಬದಲಾಯಿಸಬೇಡ ಅಂತ ಅವರು ಹೇಳಿದ್ದಾರೆ. ‘ನಾನು ಬಂದೇ ಬರ್ತೀನಿ’ ಎನ್ನುವ ನಂಬಿಕೆ ಅವರಲ್ಲಿ ಇದೆ. ದರ್ಶನ್​ ಏನೂ ತಪ್ಪು ಮಾಡಿಲ್ಲ ಎಂಬ ನಂಬಿಕೆಯಲ್ಲೇ ನಾವು ಕೂಡ ಇದ್ದೇವೆ. ಹಾಗೆಯೇ ಆಗಲಿ ಅಂತ ಪ್ರಾರ್ಥಿಸುತ್ತೇವೆ’ ಎಂದಿದ್ದಾರೆ ತರುಣ್​.

‘ನನ್ನ ಮದುವೆಗೆ ಬರಲು ವಿಶೇಷ ಅನುಮತಿ ಇದೆಯೋ ಇಲ್ಲವೋ ಎಂಬ ನನಗೆ ತಿಳಿದಿಲ್ಲ. ಮದುವೆ ದಿನಾಂಕಕ್ಕೂ ಮೊದಲೇ ದರ್ಶನ್​ ಅವರು ಹೊರಗೆ ಬರುತ್ತಾರೆ ಎಂಬ ನಂಬಿಕೆ ನನಗೆ ಇದೆ. ಇಂದು ಆಮಂತ್ರಣ ಪತ್ರಿಕೆ ನೀಡಲು ಸಾಧ್ಯವಾಗಿಲ್ಲ. ಯಾಕೆಂದರೆ ಜೈಲಿನ ಒಳಗೆ ಏನನ್ನೂ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ’ ಎಂದು ತರುಣ್​ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?