AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ

ನಟ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಭೇಟಿ ಮಾಡಿದ್ದಾರೆ. ನಟಿ ಸೋನಲ್​ ಮಾಂಥೆರೋ ಜೊತೆ ಹಸೆಮಣೆ ಏರಲು ಸಜ್ಜಾಗಿರುವ ತರುಣ್​ ಸುಧೀರ್​ ಅವರು ಮದುವೆಯ ದಿನಾಂಕದ ಬಗ್ಗೆ ದರ್ಶನ್​ ಜತೆ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಮದುವೆ ಡೇಟ್​ ಬದಲಾಗುವುದು ಬೇಡ ಅಂತ ದರ್ಶನ್​ ಹೇಳಿರುವುದಾಗಿ ತರುಣ್​ ಮಾಹಿತಿ ನೀಡಿದ್ದಾರೆ.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ
ತರುಣ್​ ಸುಧೀರ್​, ದರ್ಶನ್​
ರಾಮು, ಆನೇಕಲ್​
| Edited By: |

Updated on: Jul 19, 2024 | 2:56 PM

Share

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನಿರ್ದೇಶಕ ತರುಣ್​ ಸುಧೀರ್​ ಇಂದು (ಜುಲೈ 19) ಭೇಟಿ ಆಗಿದ್ದಾರೆ. ದರ್ಶನ್​ ಅರೆಸ್ಟ್​ ಆದ ಬಳಿಕ ಇದೇ ಮೊದಲ ಬಾರಿಗೆ ತರುಣ್​ ಬಂದು ನೋಡಿದ್ದಾರೆ. ಇಬ್ಬರ ನಡುವೆ ಹಲವು ವರ್ಷಗಳಿಂದ ಆತ್ಮೀಯತೆ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ತರುಣ್​ ಸುಧೀರ್​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಹೇಳಿದ್ದಾರೆ. ಪರಪ್ಪನ ಅಗ್ರಹಾರದಿಂದ ಹೊರಬಂದ ಬಳಿಕ ತರುಣ್​ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

‘ದರ್ಶನ್​ ಅವರಿಗೆ ಸ್ವಲ್ಪ ಹುಷಾರಿರಲಿಲ್ಲ. ವಾತಾವರಣ ಬದಲಾವಣೆಯಿಂದ ಆ ರೀತಿ ಆಗಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನನ್ನನ್ನು ಯಾವಾಗಲೂ ನಗುತ್ತ ಮಾತನಾಡಿಸುವ ರೀತಿಯೇ ಇಂದು ಕೂಡ ಮಾತಾಡಿದರು. ಅವರಿಗೆ ಹೋಲಿಸಿದರೆ ನಾವೇ ವೀಕ್ ಆಗಿದ್ದೇವೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಆರಾಮಾಗಿದ್ದೇನೆ ಮಗನೆ ಅಂತ ಹೇಳಿದ್ರು’ ಎಂದಿದ್ದಾರೆ ತರುಣ್​ ಸುಧೀರ್​.

ಇದನ್ನೂ ಓದಿ: ದರ್ಶನ್ ಯಾಕೆ ಜೈಲಿನಲ್ಲೇ ಇರಬೇಕು? ಪೊಲೀಸರು ನೀಡಿದ 30 ಕಾರಣಗಳು ಇಲ್ಲಿವೆ..

‘ನನ್ನ ಮದುವೆ ಬಗ್ಗೆ ದರ್ಶನ್​ ಅವರಿಗೆ ಮೊದಲೇ ಗೊತ್ತಿತ್ತು. ಈ ವಿಚಾರದಲ್ಲಿ ನನಗೆ ಮೊದಲಿನಿಂದಲೂ ತೊಳಲಾಟ ಇತ್ತು. ಯಾವುದೇ ಕಾರಣಕ್ಕೂ ಮದುವೆ ದಿನಾಂಕ ಬದಲಾಯಿಸಬೇಡ ಅಂತ ಅವರು ಹೇಳಿದ್ದಾರೆ. ‘ನಾನು ಬಂದೇ ಬರ್ತೀನಿ’ ಎನ್ನುವ ನಂಬಿಕೆ ಅವರಲ್ಲಿ ಇದೆ. ದರ್ಶನ್​ ಏನೂ ತಪ್ಪು ಮಾಡಿಲ್ಲ ಎಂಬ ನಂಬಿಕೆಯಲ್ಲೇ ನಾವು ಕೂಡ ಇದ್ದೇವೆ. ಹಾಗೆಯೇ ಆಗಲಿ ಅಂತ ಪ್ರಾರ್ಥಿಸುತ್ತೇವೆ’ ಎಂದಿದ್ದಾರೆ ತರುಣ್​.

‘ನನ್ನ ಮದುವೆಗೆ ಬರಲು ವಿಶೇಷ ಅನುಮತಿ ಇದೆಯೋ ಇಲ್ಲವೋ ಎಂಬ ನನಗೆ ತಿಳಿದಿಲ್ಲ. ಮದುವೆ ದಿನಾಂಕಕ್ಕೂ ಮೊದಲೇ ದರ್ಶನ್​ ಅವರು ಹೊರಗೆ ಬರುತ್ತಾರೆ ಎಂಬ ನಂಬಿಕೆ ನನಗೆ ಇದೆ. ಇಂದು ಆಮಂತ್ರಣ ಪತ್ರಿಕೆ ನೀಡಲು ಸಾಧ್ಯವಾಗಿಲ್ಲ. ಯಾಕೆಂದರೆ ಜೈಲಿನ ಒಳಗೆ ಏನನ್ನೂ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ’ ಎಂದು ತರುಣ್​ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!