AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ

ನಟ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಭೇಟಿ ಮಾಡಿದ್ದಾರೆ. ನಟಿ ಸೋನಲ್​ ಮಾಂಥೆರೋ ಜೊತೆ ಹಸೆಮಣೆ ಏರಲು ಸಜ್ಜಾಗಿರುವ ತರುಣ್​ ಸುಧೀರ್​ ಅವರು ಮದುವೆಯ ದಿನಾಂಕದ ಬಗ್ಗೆ ದರ್ಶನ್​ ಜತೆ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಮದುವೆ ಡೇಟ್​ ಬದಲಾಗುವುದು ಬೇಡ ಅಂತ ದರ್ಶನ್​ ಹೇಳಿರುವುದಾಗಿ ತರುಣ್​ ಮಾಹಿತಿ ನೀಡಿದ್ದಾರೆ.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ
ತರುಣ್​ ಸುಧೀರ್​, ದರ್ಶನ್​
ರಾಮು, ಆನೇಕಲ್​
| Edited By: |

Updated on: Jul 19, 2024 | 2:56 PM

Share

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನಿರ್ದೇಶಕ ತರುಣ್​ ಸುಧೀರ್​ ಇಂದು (ಜುಲೈ 19) ಭೇಟಿ ಆಗಿದ್ದಾರೆ. ದರ್ಶನ್​ ಅರೆಸ್ಟ್​ ಆದ ಬಳಿಕ ಇದೇ ಮೊದಲ ಬಾರಿಗೆ ತರುಣ್​ ಬಂದು ನೋಡಿದ್ದಾರೆ. ಇಬ್ಬರ ನಡುವೆ ಹಲವು ವರ್ಷಗಳಿಂದ ಆತ್ಮೀಯತೆ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ತರುಣ್​ ಸುಧೀರ್​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಹೇಳಿದ್ದಾರೆ. ಪರಪ್ಪನ ಅಗ್ರಹಾರದಿಂದ ಹೊರಬಂದ ಬಳಿಕ ತರುಣ್​ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

‘ದರ್ಶನ್​ ಅವರಿಗೆ ಸ್ವಲ್ಪ ಹುಷಾರಿರಲಿಲ್ಲ. ವಾತಾವರಣ ಬದಲಾವಣೆಯಿಂದ ಆ ರೀತಿ ಆಗಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನನ್ನನ್ನು ಯಾವಾಗಲೂ ನಗುತ್ತ ಮಾತನಾಡಿಸುವ ರೀತಿಯೇ ಇಂದು ಕೂಡ ಮಾತಾಡಿದರು. ಅವರಿಗೆ ಹೋಲಿಸಿದರೆ ನಾವೇ ವೀಕ್ ಆಗಿದ್ದೇವೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಆರಾಮಾಗಿದ್ದೇನೆ ಮಗನೆ ಅಂತ ಹೇಳಿದ್ರು’ ಎಂದಿದ್ದಾರೆ ತರುಣ್​ ಸುಧೀರ್​.

ಇದನ್ನೂ ಓದಿ: ದರ್ಶನ್ ಯಾಕೆ ಜೈಲಿನಲ್ಲೇ ಇರಬೇಕು? ಪೊಲೀಸರು ನೀಡಿದ 30 ಕಾರಣಗಳು ಇಲ್ಲಿವೆ..

‘ನನ್ನ ಮದುವೆ ಬಗ್ಗೆ ದರ್ಶನ್​ ಅವರಿಗೆ ಮೊದಲೇ ಗೊತ್ತಿತ್ತು. ಈ ವಿಚಾರದಲ್ಲಿ ನನಗೆ ಮೊದಲಿನಿಂದಲೂ ತೊಳಲಾಟ ಇತ್ತು. ಯಾವುದೇ ಕಾರಣಕ್ಕೂ ಮದುವೆ ದಿನಾಂಕ ಬದಲಾಯಿಸಬೇಡ ಅಂತ ಅವರು ಹೇಳಿದ್ದಾರೆ. ‘ನಾನು ಬಂದೇ ಬರ್ತೀನಿ’ ಎನ್ನುವ ನಂಬಿಕೆ ಅವರಲ್ಲಿ ಇದೆ. ದರ್ಶನ್​ ಏನೂ ತಪ್ಪು ಮಾಡಿಲ್ಲ ಎಂಬ ನಂಬಿಕೆಯಲ್ಲೇ ನಾವು ಕೂಡ ಇದ್ದೇವೆ. ಹಾಗೆಯೇ ಆಗಲಿ ಅಂತ ಪ್ರಾರ್ಥಿಸುತ್ತೇವೆ’ ಎಂದಿದ್ದಾರೆ ತರುಣ್​.

‘ನನ್ನ ಮದುವೆಗೆ ಬರಲು ವಿಶೇಷ ಅನುಮತಿ ಇದೆಯೋ ಇಲ್ಲವೋ ಎಂಬ ನನಗೆ ತಿಳಿದಿಲ್ಲ. ಮದುವೆ ದಿನಾಂಕಕ್ಕೂ ಮೊದಲೇ ದರ್ಶನ್​ ಅವರು ಹೊರಗೆ ಬರುತ್ತಾರೆ ಎಂಬ ನಂಬಿಕೆ ನನಗೆ ಇದೆ. ಇಂದು ಆಮಂತ್ರಣ ಪತ್ರಿಕೆ ನೀಡಲು ಸಾಧ್ಯವಾಗಿಲ್ಲ. ಯಾಕೆಂದರೆ ಜೈಲಿನ ಒಳಗೆ ಏನನ್ನೂ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ’ ಎಂದು ತರುಣ್​ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ