AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ

ನಟ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಭೇಟಿ ಮಾಡಿದ್ದಾರೆ. ನಟಿ ಸೋನಲ್​ ಮಾಂಥೆರೋ ಜೊತೆ ಹಸೆಮಣೆ ಏರಲು ಸಜ್ಜಾಗಿರುವ ತರುಣ್​ ಸುಧೀರ್​ ಅವರು ಮದುವೆಯ ದಿನಾಂಕದ ಬಗ್ಗೆ ದರ್ಶನ್​ ಜತೆ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಮದುವೆ ಡೇಟ್​ ಬದಲಾಗುವುದು ಬೇಡ ಅಂತ ದರ್ಶನ್​ ಹೇಳಿರುವುದಾಗಿ ತರುಣ್​ ಮಾಹಿತಿ ನೀಡಿದ್ದಾರೆ.

‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ
ತರುಣ್​ ಸುಧೀರ್​, ದರ್ಶನ್​
ರಾಮು, ಆನೇಕಲ್​
| Edited By: |

Updated on: Jul 19, 2024 | 2:56 PM

Share

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನಿರ್ದೇಶಕ ತರುಣ್​ ಸುಧೀರ್​ ಇಂದು (ಜುಲೈ 19) ಭೇಟಿ ಆಗಿದ್ದಾರೆ. ದರ್ಶನ್​ ಅರೆಸ್ಟ್​ ಆದ ಬಳಿಕ ಇದೇ ಮೊದಲ ಬಾರಿಗೆ ತರುಣ್​ ಬಂದು ನೋಡಿದ್ದಾರೆ. ಇಬ್ಬರ ನಡುವೆ ಹಲವು ವರ್ಷಗಳಿಂದ ಆತ್ಮೀಯತೆ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ತರುಣ್​ ಸುಧೀರ್​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಹೇಳಿದ್ದಾರೆ. ಪರಪ್ಪನ ಅಗ್ರಹಾರದಿಂದ ಹೊರಬಂದ ಬಳಿಕ ತರುಣ್​ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

‘ದರ್ಶನ್​ ಅವರಿಗೆ ಸ್ವಲ್ಪ ಹುಷಾರಿರಲಿಲ್ಲ. ವಾತಾವರಣ ಬದಲಾವಣೆಯಿಂದ ಆ ರೀತಿ ಆಗಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನನ್ನನ್ನು ಯಾವಾಗಲೂ ನಗುತ್ತ ಮಾತನಾಡಿಸುವ ರೀತಿಯೇ ಇಂದು ಕೂಡ ಮಾತಾಡಿದರು. ಅವರಿಗೆ ಹೋಲಿಸಿದರೆ ನಾವೇ ವೀಕ್ ಆಗಿದ್ದೇವೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಆರಾಮಾಗಿದ್ದೇನೆ ಮಗನೆ ಅಂತ ಹೇಳಿದ್ರು’ ಎಂದಿದ್ದಾರೆ ತರುಣ್​ ಸುಧೀರ್​.

ಇದನ್ನೂ ಓದಿ: ದರ್ಶನ್ ಯಾಕೆ ಜೈಲಿನಲ್ಲೇ ಇರಬೇಕು? ಪೊಲೀಸರು ನೀಡಿದ 30 ಕಾರಣಗಳು ಇಲ್ಲಿವೆ..

‘ನನ್ನ ಮದುವೆ ಬಗ್ಗೆ ದರ್ಶನ್​ ಅವರಿಗೆ ಮೊದಲೇ ಗೊತ್ತಿತ್ತು. ಈ ವಿಚಾರದಲ್ಲಿ ನನಗೆ ಮೊದಲಿನಿಂದಲೂ ತೊಳಲಾಟ ಇತ್ತು. ಯಾವುದೇ ಕಾರಣಕ್ಕೂ ಮದುವೆ ದಿನಾಂಕ ಬದಲಾಯಿಸಬೇಡ ಅಂತ ಅವರು ಹೇಳಿದ್ದಾರೆ. ‘ನಾನು ಬಂದೇ ಬರ್ತೀನಿ’ ಎನ್ನುವ ನಂಬಿಕೆ ಅವರಲ್ಲಿ ಇದೆ. ದರ್ಶನ್​ ಏನೂ ತಪ್ಪು ಮಾಡಿಲ್ಲ ಎಂಬ ನಂಬಿಕೆಯಲ್ಲೇ ನಾವು ಕೂಡ ಇದ್ದೇವೆ. ಹಾಗೆಯೇ ಆಗಲಿ ಅಂತ ಪ್ರಾರ್ಥಿಸುತ್ತೇವೆ’ ಎಂದಿದ್ದಾರೆ ತರುಣ್​.

‘ನನ್ನ ಮದುವೆಗೆ ಬರಲು ವಿಶೇಷ ಅನುಮತಿ ಇದೆಯೋ ಇಲ್ಲವೋ ಎಂಬ ನನಗೆ ತಿಳಿದಿಲ್ಲ. ಮದುವೆ ದಿನಾಂಕಕ್ಕೂ ಮೊದಲೇ ದರ್ಶನ್​ ಅವರು ಹೊರಗೆ ಬರುತ್ತಾರೆ ಎಂಬ ನಂಬಿಕೆ ನನಗೆ ಇದೆ. ಇಂದು ಆಮಂತ್ರಣ ಪತ್ರಿಕೆ ನೀಡಲು ಸಾಧ್ಯವಾಗಿಲ್ಲ. ಯಾಕೆಂದರೆ ಜೈಲಿನ ಒಳಗೆ ಏನನ್ನೂ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ’ ಎಂದು ತರುಣ್​ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ