AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ರೈತರ ಮರೆಯಲ್ಲ, ವರ್ತೂರು ಮುದ್ದೆ ತಿನ್ನೋ ರೈತ ಅಲ್ಲ ಅಂತ ಗೊತ್ತು’; ಸುದೀಪ್

ಸುದೀಪ್ ಅವರ ಕಡೆಯಿಂದ ಊಟ ಸಿಕ್ಕಿದೆ. ಇದನ್ನು ತಿಂದು ಮನೆ ಮಂದಿ ಸಖತ್ ಖುಷಿಪಟ್ಟಿದ್ದಾರೆ. ಇದರ ಮಧ್ಯೆ ವರ್ತೂರು ಸಂತೋಷ್ ಬೇಸರ ಮಾಡಿಕೊಂಡರು. ಅವರನ್ನು ಚಿಯರ್​ಅಪ್ ಮಾಡಿದ್ದಾರೆ ಸುದೀಪ್.

‘ನಾವು ರೈತರ ಮರೆಯಲ್ಲ, ವರ್ತೂರು ಮುದ್ದೆ ತಿನ್ನೋ ರೈತ ಅಲ್ಲ ಅಂತ ಗೊತ್ತು’; ಸುದೀಪ್
ಸುದೀಪ್​-ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Dec 16, 2023 | 7:08 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಸಖತ್ ಸರ್​ಪ್ರೈಸ್ ಇತ್ತು. ಸ್ಪರ್ಧಿಗಳು ಹಸಿದುಕೊಂಡಿದ್ದಾಗ ಸುದೀಪ್ ಕಡೆಯಿಂದ ಲೆಟರ್ ಬಂತು. ಆ ಬಳಿಕ ಊಟ ಕೂಡ ಬಂತು. ಇದನ್ನು ಮನೆಯವರು ನೋಡಿ ಸಖತ್​ ಸರ್​ಪ್ರೈಸ್​ಗೆ ಒಳಗಾದರು. ಆ ಬಳಿಕ ಸುದೀಪ್ (Sudeep) ಅವರು ಮನೆಯವರ ಜೊತೆ ಮಾತನಾಡಿದ್ದಾರೆ. ಈ ಎಪಿಸೋಡ್ ಎಲ್ಲರ ಗಮನ ಸೆಳೆದಿದೆ. ಸುದೀಪ್ ಮಾಡಿದ ಅಡುಗೆ ತಿಂದು ಮನೆ ಮಂದಿ ಒಮ್ಮೆ ಭಾವುಕರಾಗಿದ್ದಾರೆ. ವರ್ತೂರು ಸಂತೋಷ್​ ಅವರ ಕಾಲನ್ನು ಸುದೀಪ್ ಎಳೆದಿದ್ದಾರೆ.

ಬಿಗ್ ಬಾಸ್​ನಲ್ಲಿ ಸ್ಪರ್ಧಿಗಳಿಗೆ ಶಾಕ್ ಮೇಲೆ ಶಾಕ್ ಸಿಗುತ್ತಾ ಇರುತ್ತದೆ. ಇದರ ಜೊತೆಗೆ ಸರ್​ಪ್ರೈಸ್ ಕೂಡ ಸಿಗುತ್ತದೆ. ಈ ಬಾರಿ ಸ್ಪರ್ಧಿಗಳಿಗೆ ಸಿಕ್ಕ ಸರ್​ಪ್ರೈಸ್ ಸ್ವಲ್ಪ ದೊಡ್ಡದೇ ಇತ್ತು. ಸುದೀಪ್ ಅವರು ಪ್ರತೀ ಸೀಸನ್​ನಲ್ಲಿ ಸ್ಪರ್ಧಿಗಳಿಗೆ ಅಡುಗೆ ಮಾಡಿ ಕಳುಹಿಸುತ್ತಾರೆ. ಈ ಬಾರಿಯೂ ಹಾಗೆಯೇ ಆಗಿದೆ. ಸುದೀಪ್ ಅವರ ಕಡೆಯಿಂದ ಊಟ ಸಿಕ್ಕಿದೆ. ಇದನ್ನು ತಿಂದು ಮನೆ ಮಂದಿ ಸಖತ್ ಖುಷಿಪಟ್ಟಿದ್ದಾರೆ. ಇದರ ಮಧ್ಯೆ ವರ್ತೂರು ಸಂತೋಷ್ ಬೇಸರ ಮಾಡಿಕೊಂಡರು. ಅವರನ್ನು ಚಿಯರ್​ಅಪ್ ಮಾಡಿದ್ದಾರೆ ಸುದೀಪ್.

ಎಲ್ಲರ ಹೆಸರನ್ನೂ ಕರೆದು ಸುದೀಪ್ ಮಾತನಾಡಿದರು. ಸುದೀಪ್ ಎಲ್ಲವನ್ನೂ ಹೇಳಿದ ಬಳಿಕ ವರ್ತೂರು ಸಂತೋಷ್​​ಗೆ ತಮ್ಮ ಹೆಸರನ್ನು ಕರೆದೇ ಇಲ್ಲ ಎನ್ನುವ ಅನುಮಾನ ಮೂಡಿತು. ‘ನನ್ನ ಹೆಸರನ್ನು ಸುದೀಪ್ ಕರೆದೇ ಇಲ್ಲ’ ಎಂದು ಬೇಸರ ಮಾಡಿಕೊಂಡರು. ‘ವರ್ತೂರು ಅವರೇ’ ಎಂದರು ಸುದೀಪ್. ‘ನಾವು ರೈತರನ್ನು ಮರೆಯಲ್ಲ. ಮುದ್ದೆ ಕಳುಹಿಸಿಲ್ಲ ಎಂದು ಬೇಸರಗೊಳ್ಳಬೇಡಿ. ನೀವು ಮುದ್ದೆ ತಿನ್ನೋ ರೈತ ಅಲ್ಲ ಅನ್ನೋದು ನನಗೆ ಗೊತ್ತು’ ಎಂದರು ಸುದೀಪ್. ಇದನ್ನು ಕೇಳಿ ಮನೆ ಮಂದಿ ನಕ್ಕರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಸಂಪೂರ್ಣ ಸೈಲೆಂಟ್ ಆದ ಡ್ರೋನ್ ಪ್ರತಾಪ್; ಇದು ಸುದೀಪ್​ ಪಾಠದ ಎಫೆಕ್ಟ್​

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಶುಕ್ರವಾರ (ಡಿಸೆಂಬರ್ 15) ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್​ನ ಯಾವಾಗ ಬೇಕಾದರೂ ನೋಡಬಹುದು. ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?