AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು

Kichcha Sudeep About Controversy: ಕಿಚ್ಚ ಸುದೀಪ್ ಅವರು ಹುಬ್ಬಳ್ಳಿ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಅದು ಪೈರಸಿ ಬಗ್ಗೆಯಾಗಿತ್ತು, ದರ್ಶನ್ ಅಭಿಮಾನಿಗಳ ಬಗ್ಗೆ ಅಲ್ಲ ಎಂದಿದ್ದಾರೆ. ದರ್ಶನ್ ಬಗ್ಗೆ ಎಂದಿಗೂ ಕೆಟ್ಟದಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ. ‘ನಮ್ಮಿಬ್ಬರ ಮಧ್ಯೆ ಸಾವಿರ ಇರಬಹುದು, ಅದು ನಮ್ಮಿಬ್ಬರ ಮಧ್ಯೆ ಇರೋ ವಿಷಯ’ ಎಂದರು ಕಿಚ್ಚ.

‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 24, 2025 | 7:03 AM

Share

ಕಿಚ್ಚ ಸುದೀಪ್ (Sudeep) ಅವರು ಇತ್ತೀಚೆಗೆ ಹುಬ್ಬಳ್ಳಿ ಈವೆಂಟ್​​ನಲ್ಲಿ ನೀಡಿದ ಹೇಳಿಕೆ ಚರ್ಚೆಯನ್ನು ಹುಟ್ಟುಹಾಕಿದೆ. ಅವರು ನಿಜಕ್ಕೂ ಮಾತನಾಡಿದ್ದು ಯಾವ ವಿಷಯದ ಬಗ್ಗೆ ಎಂಬ ಚರ್ಚೆ ನಡೆಯಿತು. ಆ ಬಳಿಕ ಅವರು ಇದು ಪೈರಸಿ ಬಗ್ಗೆ ನೀಡಿದ ಹೇಳಿಕೆ ಎಂದು ಸ್ಪಷ್ಟಪಡಿಸಿದರು. ಆದರೆ, ಕೆಲವರು ಇದು ದರ್ಶನ್ ಅಭಿಮಾನಿಗಳ ಬಗ್ಗೆ ನೀಡಿದ ಹೇಳಿಕೆ ಎಂದುಕೊಂಡಿದ್ದಾರೆ. ಈ ವಿಷಯದ ಕುರಿತು ಸುದೀಪ್ ಮಾತನಾಡಿದ್ದಾರೆ.

‘ನನಗೆ ವಾರ್ ಇಷ್ಟ ಇಲ್ಲ. ಯಾರು ಏನೇ ಹೇಳಿದ್ದರು ಅಲ್ಲಿಯೇ ಹೋಗಿ ನೀವು ಯಾರಿಗೆ ಹೇಳಿದ್ದು ಎಂದು ಕೇಳಬೇಕು. ನಾನು ಯಾರಿಗೆ ಹೇಳಿದ್ದು ಎಂದು ಸ್ಪಷ್ಟಪಡಿಸಿದ್ದೇನೆ. ಅವರು ಹೇಳಿದ್ದು ಯಾರಿಗೆ ಎಂದು ಸ್ಪಷ್ಟಪಡಿಸಲಿ’ ಎಂದು ಕಿಚ್ಚ ಸುದೀಪ್ ಅವರು ನೇರವಾಗಿ ಹೇಳಿದರು.

ದರ್ಶನ್ ಹಾಗೂ ಸುದೀಪ್ ಮೊದಲು ಗೆಳೆಯರಾಗಿದ್ದವರು. ಆ ಬಳಿಕ ಬೇರೆ ಆದರು. ಇವರು ಬೇರೆ ಆಗಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಇಬ್ಬರ ಮಧ್ಯೆ ಬಿರುಕಂತೂ ಇದೆ. ಹಾಗಂದ ಮಾತ್ರಕ್ಕೆ ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ ಎನ್ನುತ್ತಾರೆ ಸುದೀಪ್. ‘ಇತಿಹಾಸ ಕೆದಕಿ ನೋಡಿ. ಆ ವ್ಯಕ್ತಿ ಬಗ್ಗೆ ನಾನು ಎಂದಾದರೂ ಕೆಟ್ಟದಾಗಿ ಮಾತನಾಡಿದ್ದು ಇದ್ದರೆ ತೋರಿಸಿ’ ಎಂದು ಸವಾಲು ಹಾಕಿದರು ಸುದೀಪ್.

‘ಆಗಲೇ ಕೆಟ್ಟದಾಗಿ ಮಾತನಾಡಿಲ್ಲ ಎಂದರೆ ಈಗೇಕೆ ಮಾತನಾಡುತ್ತೇನೆ. ನಂದು ಬೇರೆ ಕಡೆ ಇದೆ. ಏನೇನೋ ಮಾತನಾಡಿಕೊಂಡು ಇರೋಕೆ ನಾನು ದಡ್ಡ ಅಲ್ಲ. ನಾನು ಅಂದು ಕಾಫಿ ಮಾತ್ರ ಕುಡಿದಿದ್ದೆ’ ಎಂದರು ಸುದೀಪ್.

ಇದನ್ನೂ ಓದಿ: ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ? ಉತ್ತರ ನೀಡಿದ ಕಿಚ್ಚ ಸುದೀಪ್

‘ಆಗು ಹೋಗುಗಳ ಬಗ್ಗೆ ನನಗೆ ನೋವಿದೆ. ಹಾಗಾಗಬಾರದಿತ್ತು ಎಂಬುದನ್ನು ನಾನು ಅನೇಕ ಬಾರಿ ಹೇಳಿದ್ದೇನೆ. ಅವರ ಅಭಿಮಾನಿಗಳ ನೋವಿನಲ್ಲಾದ್ದಾರೆ ಎಂಬುದು ಗೊತ್ತು. ಆ ವಿಷಯ ಕೆದಬೇಡಿ ಎಂದು ನಾನು ಹೇಳಿದ್ದೇನೆ. ಆ ಅಭಿಮಾನಿಗಳು ಇದನ್ನು ಹೊಗಳಿದ್ದರು. ನಮ್ಮ ಫ್ಯಾನ್ಸ್ ಅವರನ್ನು ಇಷ್ಟಪಡೋದು, ಅವರ ಫ್ಯಾನ್ಸ್ ನಮ್ಮನ್ನು ಇಷ್ಟಪಡೋದು ಸಹಿಸದೇ ಇರುವ ಗುಂಪು ಈ ರೀತಿ ಮಾಡುತ್ತಿದೆ. ನಾವು ಒಂದಾಗೋದು ಬೇರೆಯವರಿಗೆ ಇಷ್ಟ ಇಲ್ಲದೆ ಇರಬಹುದು. ನಟರಾಗಿ ನಾವು ಕಿತ್ತಾಡಿಲ್ಲ. ನಮ್ಮಿಬ್ಬರ ಮಧ್ಯೆ ಸಾವಿರ ಇರಬಹುದು, ಅದು ನಮ್ಮಿಬ್ಬರ ಮಧ್ಯೆ ಇರೋ ವಿಷಯ’ ಎಂದರು ಕಿಚ್ಚ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Wed, 24 December 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?