AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​
ಯಶ್​ - ರಾಧಿಕಾ ಪಂಡಿತ್​ ಕುಟುಂಬ
ರಾಜೇಶ್ ದುಗ್ಗುಮನೆ
|

Updated on: Jun 20, 2021 | 5:47 PM

Share

ಇಂದು ಫಾದರ್ಸ್​ ಡೇ. ಈ ವಿಶೇಷ ದಿನದಂದು ಬಹುತೇಕ ಸೆಲೆಬ್ರಿಟಿಗಳು ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ತಮ್ಮ ಪತಿ ಬಗ್ಗೆ ವಿಶೇಷ ಮಾತುಗಳನ್ನು ಆಡಿದ್ದಾರೆ. ಅಷ್ಟಕ್ಕೂ ಫಾದರ್ಸ್​ ಡೇ ದಿನ ಪತಿಯ ಬಗ್ಗೆ ರಾಧಿಕಾ ಬರೆದುಕೊಂಡಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು. ಇನ್ನು, ಲಾಕ್​ಡೌನ್​ ಸಂದರ್ಭದಲ್ಲಿ ಯಶ್​ ಸಂಪೂರ್ಣ ಸಮಯವನ್ನು ಮಕ್ಕಳು ಹಾಗೂ ಪತ್ನಿ ರಾಧಿಕಾ ಜತೆ ಕಳೆದಿದ್ದಾರೆ. ವೃತ್ತಿ ಜೀವನದ ಜತೆಜತೆಗೆ ಕುಟುಂಬಕ್ಕೂ ಯಶ್​ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಿದ್ದಾರೆ.

ಇಂದು ವಿಶ್ವ ತಂದೆಯರ ದಿನ. ಈ ವಿಶೇಷ ದಿನದಂದು ಯಶ್​ ಮಕ್ಕಳ ಜತೆ ಇರುವ ಫೋಟೋ ಹಂಚಿಕೊಂಡಿರುವ ರಾಧಿಕಾ, ‘ಯಶ್​ ಉತ್ತಮ ಬಾಯ್​ಫ್ರೆಂಡ್​, ಅದಕ್ಕಿಂತ ಹೆಚ್ಚಾಗಿ ಉತ್ತಮ ಗಂಡ ಕೂಡ ಹೌದು. ಆದರೆ, ಯಶ್​ ಬೆಸ್ಟ್​ ವರ್ಷನ್​ ಕಂಡಿದ್ದು ತಂದೆಯಾಗಿ. ಲವ್​ ಯು. ಅದ್ಭುತ ತಂದೆಯರಿಗೆ ಫಾದರ್ಸ್​ ಡೇ ಶುಭಾಶಯಗಳು’ ಎಂದಿದ್ದಾರೆ.

ಇಂದು ಸಾಕಷ್ಟು ಸೆಲೆಬ್ರಿಟಿಗಳು ತಂದೆಯನ್ನು ನೆನೆದಿದ್ದಾರೆ. ನಟ ಜಗ್ಗೇಶ್​, ಪುನೀತ್​ ರಾಜ್​ಕುಮಾರ್, ಪ್ರಣಿತಾ, ಸೃಜನ್​ ಲೋಕೇಶ್​, ರಕ್ಷಿತಾ, ಸುಧಾರಾಣಿ ಸೇರಿ ಹಲವು ಸೆಲೆಬ್ರಿಟಿಗಳು ತಮ್ಮ ತಂದೆಯೇ ತನಗೆ ಮಾದರಿ ಎಂದು ಹೆಮ್ಮೆಯಿಂದ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್

ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Follow Us
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ