AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​
ಯಶ್​ - ರಾಧಿಕಾ ಪಂಡಿತ್​ ಕುಟುಂಬ
ರಾಜೇಶ್ ದುಗ್ಗುಮನೆ
|

Updated on: Jun 20, 2021 | 5:47 PM

Share

ಇಂದು ಫಾದರ್ಸ್​ ಡೇ. ಈ ವಿಶೇಷ ದಿನದಂದು ಬಹುತೇಕ ಸೆಲೆಬ್ರಿಟಿಗಳು ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ತಮ್ಮ ಪತಿ ಬಗ್ಗೆ ವಿಶೇಷ ಮಾತುಗಳನ್ನು ಆಡಿದ್ದಾರೆ. ಅಷ್ಟಕ್ಕೂ ಫಾದರ್ಸ್​ ಡೇ ದಿನ ಪತಿಯ ಬಗ್ಗೆ ರಾಧಿಕಾ ಬರೆದುಕೊಂಡಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು. ಇನ್ನು, ಲಾಕ್​ಡೌನ್​ ಸಂದರ್ಭದಲ್ಲಿ ಯಶ್​ ಸಂಪೂರ್ಣ ಸಮಯವನ್ನು ಮಕ್ಕಳು ಹಾಗೂ ಪತ್ನಿ ರಾಧಿಕಾ ಜತೆ ಕಳೆದಿದ್ದಾರೆ. ವೃತ್ತಿ ಜೀವನದ ಜತೆಜತೆಗೆ ಕುಟುಂಬಕ್ಕೂ ಯಶ್​ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಿದ್ದಾರೆ.

ಇಂದು ವಿಶ್ವ ತಂದೆಯರ ದಿನ. ಈ ವಿಶೇಷ ದಿನದಂದು ಯಶ್​ ಮಕ್ಕಳ ಜತೆ ಇರುವ ಫೋಟೋ ಹಂಚಿಕೊಂಡಿರುವ ರಾಧಿಕಾ, ‘ಯಶ್​ ಉತ್ತಮ ಬಾಯ್​ಫ್ರೆಂಡ್​, ಅದಕ್ಕಿಂತ ಹೆಚ್ಚಾಗಿ ಉತ್ತಮ ಗಂಡ ಕೂಡ ಹೌದು. ಆದರೆ, ಯಶ್​ ಬೆಸ್ಟ್​ ವರ್ಷನ್​ ಕಂಡಿದ್ದು ತಂದೆಯಾಗಿ. ಲವ್​ ಯು. ಅದ್ಭುತ ತಂದೆಯರಿಗೆ ಫಾದರ್ಸ್​ ಡೇ ಶುಭಾಶಯಗಳು’ ಎಂದಿದ್ದಾರೆ.

ಇಂದು ಸಾಕಷ್ಟು ಸೆಲೆಬ್ರಿಟಿಗಳು ತಂದೆಯನ್ನು ನೆನೆದಿದ್ದಾರೆ. ನಟ ಜಗ್ಗೇಶ್​, ಪುನೀತ್​ ರಾಜ್​ಕುಮಾರ್, ಪ್ರಣಿತಾ, ಸೃಜನ್​ ಲೋಕೇಶ್​, ರಕ್ಷಿತಾ, ಸುಧಾರಾಣಿ ಸೇರಿ ಹಲವು ಸೆಲೆಬ್ರಿಟಿಗಳು ತಮ್ಮ ತಂದೆಯೇ ತನಗೆ ಮಾದರಿ ಎಂದು ಹೆಮ್ಮೆಯಿಂದ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್

ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ