AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ.

‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್
ಖುಷ್ಬೂ
ರಾಜೇಶ್ ದುಗ್ಗುಮನೆ
|

Updated on: Jun 01, 2024 | 7:06 AM

Share

ನಟಿ ಖುಷ್ಬೂ ಸುಂದರ್ (Khushbu Sundar) ಅವರು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಬೇಡಿಕೆಯ ನಟಿ ಆಗಿದ್ದರು. ಅವರು ಈಗ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅಪರೂಪಕ್ಕೊಂದು ಸಿನಿಮಾ ಮಾಡುತ್ತಾರೆ. ಆದರೆ, ಅವರು ಚಿತ್ರರಂಗದ ಜೊತೆ ನಂಟು ಕಳೆದುಕೊಂಡಿಲ್ಲ. ಅವರು ಸಿನಿಮಾ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರ ನಿರ್ಮಾಣದ ‘ಅರನ್​ಮನೈ 4’ ಚಿತ್ರ 100 ಕೋಟಿ ರೂಪಾಯಿ ಗಳಿಸಿದೆ. ಅವರಿಗೆ ‘ಡಾರ್ಲಿಂಗ್ಸ್’, ‘ಬಧಾಯಿ ಹೋ’, ‘ಕ್ರ್ಯೂ’ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡುವ ಆಸೆ ಇದೆ.

‘ನಾನು ಮಹಿಳಾ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತೇನೆ ಎನ್ನುವ ನಿರ್ಮಾಪಕಿ ನಾನಲ್ಲ. ಡಾರ್ಲಿಂಗ್ಸ್, ಕ್ರ್ಯೂ ರೀತಿಯ ಸಿನಿಮಾಗಳನ್ನು ಮಾಡಲು ನನಗೆ ಆಸೆ ಇದೆ. ಆದರೆ, ದಕ್ಷಿಣದಲ್ಲಿ ಈ ರೀತಿಯ ಮಲ್ಟಿಪ್ಲೆಕ್ಸ್ ಆಡಿಯನ್ಸ್​ಗಳು ಹುಟ್ಟಿಕೊಂಡಿಲ್ಲ. ಅದಕ್ಕೆ ಸಮಯ ಬೇಕು. ಬಧಾಯಿ ಹೋ ತಮಿಳಿಗೆ ರಿಮೇಕ್ ಮಾಡಲಾಯಿತು. ಆದರೆ, ಅದು ಗೆದ್ದಿಲ್ಲ’ ಎಂದಿದ್ದಾರೆ ಅವರು.  ಈ ಮೂಲಕ ಈ ರೀತಿಯ ಸಿನಿಮಾಗಳಿಗೆ ಬೇಡಿಕೆ ಇಲ್ಲ ಎಂದಿದ್ದಾರೆ.

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ. ಹಾರರ್​, ಕಾಮಿಡಿ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ.

ಖುಷ್ಬೂ ಸುಂದರ್ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ದಿ ಬರ್ನಿಂಗ್ ಟ್ರೇನ್’ ಚಿತ್ರದಲ್ಲಿ ಅವರು ನಟಿಸಿದರು. ಇದು ಹಿಂದಿ ಸಿನಿಮಾ. ಆ ಬಳಿಕ ಅವರು ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರಿಗೆ ಕನ್ನಡದಲ್ಲೂ ದೊಡ್ಡ ಹೆಸರಿದೆ.

ಇದನ್ನೂ ಓದಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್: ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದ ಖುಷ್ಬೂ ಸುಂದರ್

‘ಸಿನಿಮಾಗಳನ್ನು ಮಾಡುವ ವಿಧಾನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಹೀರೋಗಳಿಂದ ಬಿಸ್ನೆಸ್ ಆಗುತ್ತದೆ ಎನ್ನುವ ಮನಸ್ಥಿತಿ ಇನ್ನೂ ಇದೆ. ಇದರ ಜೊತೆಗೆ ನಟಿಯರು ಕೂಡ ಪ್ರಮುಖ ಪಾತ್ರ ವಹಿಸಿ ಮಿರಾಕಲ್​​ಗಳನ್ನು ಮಾಡಬಹುದು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್