AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ.

‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್
ಖುಷ್ಬೂ
ರಾಜೇಶ್ ದುಗ್ಗುಮನೆ
|

Updated on: Jun 01, 2024 | 7:06 AM

Share

ನಟಿ ಖುಷ್ಬೂ ಸುಂದರ್ (Khushbu Sundar) ಅವರು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಬೇಡಿಕೆಯ ನಟಿ ಆಗಿದ್ದರು. ಅವರು ಈಗ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅಪರೂಪಕ್ಕೊಂದು ಸಿನಿಮಾ ಮಾಡುತ್ತಾರೆ. ಆದರೆ, ಅವರು ಚಿತ್ರರಂಗದ ಜೊತೆ ನಂಟು ಕಳೆದುಕೊಂಡಿಲ್ಲ. ಅವರು ಸಿನಿಮಾ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರ ನಿರ್ಮಾಣದ ‘ಅರನ್​ಮನೈ 4’ ಚಿತ್ರ 100 ಕೋಟಿ ರೂಪಾಯಿ ಗಳಿಸಿದೆ. ಅವರಿಗೆ ‘ಡಾರ್ಲಿಂಗ್ಸ್’, ‘ಬಧಾಯಿ ಹೋ’, ‘ಕ್ರ್ಯೂ’ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡುವ ಆಸೆ ಇದೆ.

‘ನಾನು ಮಹಿಳಾ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತೇನೆ ಎನ್ನುವ ನಿರ್ಮಾಪಕಿ ನಾನಲ್ಲ. ಡಾರ್ಲಿಂಗ್ಸ್, ಕ್ರ್ಯೂ ರೀತಿಯ ಸಿನಿಮಾಗಳನ್ನು ಮಾಡಲು ನನಗೆ ಆಸೆ ಇದೆ. ಆದರೆ, ದಕ್ಷಿಣದಲ್ಲಿ ಈ ರೀತಿಯ ಮಲ್ಟಿಪ್ಲೆಕ್ಸ್ ಆಡಿಯನ್ಸ್​ಗಳು ಹುಟ್ಟಿಕೊಂಡಿಲ್ಲ. ಅದಕ್ಕೆ ಸಮಯ ಬೇಕು. ಬಧಾಯಿ ಹೋ ತಮಿಳಿಗೆ ರಿಮೇಕ್ ಮಾಡಲಾಯಿತು. ಆದರೆ, ಅದು ಗೆದ್ದಿಲ್ಲ’ ಎಂದಿದ್ದಾರೆ ಅವರು.  ಈ ಮೂಲಕ ಈ ರೀತಿಯ ಸಿನಿಮಾಗಳಿಗೆ ಬೇಡಿಕೆ ಇಲ್ಲ ಎಂದಿದ್ದಾರೆ.

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ. ಹಾರರ್​, ಕಾಮಿಡಿ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ.

ಖುಷ್ಬೂ ಸುಂದರ್ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ದಿ ಬರ್ನಿಂಗ್ ಟ್ರೇನ್’ ಚಿತ್ರದಲ್ಲಿ ಅವರು ನಟಿಸಿದರು. ಇದು ಹಿಂದಿ ಸಿನಿಮಾ. ಆ ಬಳಿಕ ಅವರು ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರಿಗೆ ಕನ್ನಡದಲ್ಲೂ ದೊಡ್ಡ ಹೆಸರಿದೆ.

ಇದನ್ನೂ ಓದಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್: ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದ ಖುಷ್ಬೂ ಸುಂದರ್

‘ಸಿನಿಮಾಗಳನ್ನು ಮಾಡುವ ವಿಧಾನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಹೀರೋಗಳಿಂದ ಬಿಸ್ನೆಸ್ ಆಗುತ್ತದೆ ಎನ್ನುವ ಮನಸ್ಥಿತಿ ಇನ್ನೂ ಇದೆ. ಇದರ ಜೊತೆಗೆ ನಟಿಯರು ಕೂಡ ಪ್ರಮುಖ ಪಾತ್ರ ವಹಿಸಿ ಮಿರಾಕಲ್​​ಗಳನ್ನು ಮಾಡಬಹುದು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!