AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ.

‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್
ಖುಷ್ಬೂ
ರಾಜೇಶ್ ದುಗ್ಗುಮನೆ
|

Updated on: Jun 01, 2024 | 7:06 AM

Share

ನಟಿ ಖುಷ್ಬೂ ಸುಂದರ್ (Khushbu Sundar) ಅವರು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಬೇಡಿಕೆಯ ನಟಿ ಆಗಿದ್ದರು. ಅವರು ಈಗ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅಪರೂಪಕ್ಕೊಂದು ಸಿನಿಮಾ ಮಾಡುತ್ತಾರೆ. ಆದರೆ, ಅವರು ಚಿತ್ರರಂಗದ ಜೊತೆ ನಂಟು ಕಳೆದುಕೊಂಡಿಲ್ಲ. ಅವರು ಸಿನಿಮಾ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರ ನಿರ್ಮಾಣದ ‘ಅರನ್​ಮನೈ 4’ ಚಿತ್ರ 100 ಕೋಟಿ ರೂಪಾಯಿ ಗಳಿಸಿದೆ. ಅವರಿಗೆ ‘ಡಾರ್ಲಿಂಗ್ಸ್’, ‘ಬಧಾಯಿ ಹೋ’, ‘ಕ್ರ್ಯೂ’ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡುವ ಆಸೆ ಇದೆ.

‘ನಾನು ಮಹಿಳಾ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತೇನೆ ಎನ್ನುವ ನಿರ್ಮಾಪಕಿ ನಾನಲ್ಲ. ಡಾರ್ಲಿಂಗ್ಸ್, ಕ್ರ್ಯೂ ರೀತಿಯ ಸಿನಿಮಾಗಳನ್ನು ಮಾಡಲು ನನಗೆ ಆಸೆ ಇದೆ. ಆದರೆ, ದಕ್ಷಿಣದಲ್ಲಿ ಈ ರೀತಿಯ ಮಲ್ಟಿಪ್ಲೆಕ್ಸ್ ಆಡಿಯನ್ಸ್​ಗಳು ಹುಟ್ಟಿಕೊಂಡಿಲ್ಲ. ಅದಕ್ಕೆ ಸಮಯ ಬೇಕು. ಬಧಾಯಿ ಹೋ ತಮಿಳಿಗೆ ರಿಮೇಕ್ ಮಾಡಲಾಯಿತು. ಆದರೆ, ಅದು ಗೆದ್ದಿಲ್ಲ’ ಎಂದಿದ್ದಾರೆ ಅವರು.  ಈ ಮೂಲಕ ಈ ರೀತಿಯ ಸಿನಿಮಾಗಳಿಗೆ ಬೇಡಿಕೆ ಇಲ್ಲ ಎಂದಿದ್ದಾರೆ.

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ. ಹಾರರ್​, ಕಾಮಿಡಿ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ.

ಖುಷ್ಬೂ ಸುಂದರ್ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ದಿ ಬರ್ನಿಂಗ್ ಟ್ರೇನ್’ ಚಿತ್ರದಲ್ಲಿ ಅವರು ನಟಿಸಿದರು. ಇದು ಹಿಂದಿ ಸಿನಿಮಾ. ಆ ಬಳಿಕ ಅವರು ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರಿಗೆ ಕನ್ನಡದಲ್ಲೂ ದೊಡ್ಡ ಹೆಸರಿದೆ.

ಇದನ್ನೂ ಓದಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್: ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದ ಖುಷ್ಬೂ ಸುಂದರ್

‘ಸಿನಿಮಾಗಳನ್ನು ಮಾಡುವ ವಿಧಾನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಹೀರೋಗಳಿಂದ ಬಿಸ್ನೆಸ್ ಆಗುತ್ತದೆ ಎನ್ನುವ ಮನಸ್ಥಿತಿ ಇನ್ನೂ ಇದೆ. ಇದರ ಜೊತೆಗೆ ನಟಿಯರು ಕೂಡ ಪ್ರಮುಖ ಪಾತ್ರ ವಹಿಸಿ ಮಿರಾಕಲ್​​ಗಳನ್ನು ಮಾಡಬಹುದು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ