AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪಲ್ಲವಿಗಿತ್ತು ಶಂಕರ್​ ನಾಗ್ ಜೊತೆ ಕೆಲಸ ಮಾಡೋ ಆಸೆ

ಸಾಯಿ ಪಲ್ಲವಿ ಅವರು ಇತ್ತೀಚಿಗಿನ ಹೀರೋಯಿನ್. ಸಾಯಿ ಪಲ್ಲವಿ ಜನಿಸುವುದಕ್ಕೂ ಎರಡು ವರ್ಷ ಮೊದಲೇ ಶಂಕರ್ ನಾಗ್ ನಿಧನ ಹೊಂದಿದ್ದರು. ಆದಾಗ್ಯೂ ಶಂಕರ್ ನಾಗ್ ಅವರ ಕೆಲಸಗಳಿಂದ ಸಾಯಿ ಪಲ್ಲವಿ ಅವರು ಪ್ರಭಾವಿತರಾಗಿದ್ದಾರೆ ಅನ್ನೋದು ವಿಶೇಷ.

ಸಾಯಿ ಪಲ್ಲವಿಗಿತ್ತು ಶಂಕರ್​ ನಾಗ್ ಜೊತೆ ಕೆಲಸ ಮಾಡೋ ಆಸೆ
ಸಾಯಿ ಪಲ್ಲವಿ-ಶಂಕರ್ ನಾಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 31, 2024 | 9:59 AM

Share

ಶಂಕರ್ ನಾಗ್ ಅವರು ಇಂದು ನಮ್ಮ ಜೊತೆಗೆ ಇಲ್ಲ. ಅವರು ಶ್ರೇಷ್ಠ ನಿರ್ದೇಶಕ, ನಟ ಹಾಗೂ ನಿರ್ಮಾಪಕ ಆಗಿದ್ದರು. ಅವರು ಅಪಘಾತದಲ್ಲಿ ನಿಧನ ಹೊಂದಿದ್ದು ನಿಜಕ್ಕೂ ಬೇಸರದ ವಿಚಾರ. ಅವರ ಜೊತೆ ಕೆಲಸ ಮಾಡಬೇಕು ಎಂಬುದು ಹಲವರ ಆಸೆ ಆಗಿತ್ತು. ಆದರೆ, ಅನೇಕರಿಗೆ ಇದು ಸಾಧ್ಯವಾಗಿಲ್ಲ. ಈಗಿನ ಜರನೇಷನ್​ನವರು ಕೂಡ ಈ ರೀತಿಯ ಕನಸು ಕಂಡಿದ್ದರು. ಸಾಯಿ ಪಲ್ಲವಿ ಅವರು ಕೂಡ ಈ ಸಾಲಿಗೆ ಸೇರುತ್ತಾರೆ.

ಸಾಯಿ ಪಲ್ಲವಿ ಅವರು ಇತ್ತೀಚಿಗಿನ ಹೀರೋಯಿನ್. ಸಾಯಿ ಪಲ್ಲವಿ ಜನಿಸುವುದಕ್ಕೂ ಎರಡು ವರ್ಷ ಮೊದಲೇ ಶಂಕರ್ ನಾಗ್ ನಿಧನ ಹೊಂದಿದ್ದರು. ಆದಾಗ್ಯೂ ಶಂಕರ್ ನಾಗ್ ಅವರ ಕೆಲಸಗಳಿಂದ ಸಾಯಿ ಪಲ್ಲವಿ ಅವರು ಪ್ರಭಾವಿತರಾಗಿದ್ದಾರೆ. ಅವರು ಈ ಮೊದಲು ಈ ವಿಚಾರವನ್ನು ಹೇಳಿಕೊಂಡಿದ್ದರು. ಅವರ ನಟನೆಯ ‘ಗಾರ್ಗಿ’ ಚಿತ್ರ ಕನ್ನಡಕ್ಕೂ ಡಬ್ ಆಗಿತ್ತು. ಇದರ ಪ್ರಚಾರಕ್ಕಾಗಿ ಅವರು ಆ್ಯಂಕರ್ ಅನುಶ್ರೀ ಅವರ ಚಾನೆಲ್​ಗೆ ಬಂದಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದರು. ಆಗ ಶಂಕರ್ ನಾಗ್ ಅವರನ್ನು ನೆನಪಿಸಿಕೊಂಡಿದ್ದರು.

‘ಕನ್ನಡದಲ್ಲಿ ಯಾರ ಜೊತೆಗೆ ಕೆಲಸ ಮಾಡಬೇಕು ಎನ್ನುವ ಆಸೆ ಇದೆ’ ಎಂದು ಅನುಶ್ರೀ ಅವರು ಸಾಯಿ ಪಲ್ಲವಿ ಅವರಿಗೆ ಕೇಳಿದರು. ‘ಶಂಕರ್ ನಾಗ್ ಬದುಕಿದ್ದರೆ ಅವರ ಜೊತೆ ಕೆಲಸ ಮಾಡುತ್ತಿದ್ದೆ’ ಎಂದಿದ್ದರು. ಈ ಮೂಲಕ ಶಂಕರ್ ನಾಗ್ ಮೇಲಿನ ಪ್ರೀತಿಯನ್ನು ಅವರು ವ್ಯಕ್ತಪಡಿಸಿದ್ದರು.

View this post on Instagram

A post shared by ARJUN 💫 (@arjun1_editzz)

ಇದನ್ನೂ ಓದಿ: ಶಂಕರ್ ನಾಗ್ ತಾಕತ್ತು ಎಂಥದ್ದು? ‘ಜನ್ಮ ಜನ್ಮದ’ ಕಥೆ ವಿವರಿಸಿದ ರೋಹಿತ್ ಶ್ರೀನಾಥ್

2022ರಲ್ಲಿ ಅವರು ನಟನೆಯ ‘ಗಾರ್ಗಿ’ ಬಳಿಕ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಸದ್ಯ ಅವರು ‘ಅಮರನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.      ಈ ಚಿತ್ರ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಹಿಂದಿಯ ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್​ಗೆ ಸಖತ್ ನಿರೀಕ್ಷೆ ಇದೆ. ಈ ಚಿತ್ರ 2025ರ ಅಂತ್ಯಕ್ಕೆ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:56 am, Sat, 31 August 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ