Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashika Aannand: ಭೀಕರ ಅಪಘಾತ, ಗೆಳೆತಿಯ ಸಾವು: ನೋವು ತೋಡಿಕೊಂಡ ನಟಿ ಯಶಿಕಾ

ದಯವಿಟ್ಟು ನೀನು ನನ್ನನ್ನು ಕ್ಷಮಿಸಿಬಿಡು. ನಿನ್ನ ಸಾವಿಗೆ ಕಾರಣವಾಗಿ ಇಡೀ ಕುಂಟುಬವನ್ನು ನಾನು ಸಂಕಷ್ಟಕ್ಕೆ ತಳ್ಳಿದೆ. ಪ್ರತಿ ಕ್ಷಣ ಕೂಡ ನಾನು ನಿನ್ನ ಮಿಸ್ ಮಾಡಿಕೊಳ್ಳಲಿದ್ದೇನೆ.

Yashika Aannand: ಭೀಕರ ಅಪಘಾತ, ಗೆಳೆತಿಯ ಸಾವು: ನೋವು ತೋಡಿಕೊಂಡ ನಟಿ ಯಶಿಕಾ
Yashika Aannand
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 03, 2021 | 9:41 PM

ಅದು ಜುಲೈ 25, ತಮಿಳುನಾಡಿನ ಮಹಾಬಲಿಪುರಂ ಬಳಿ ಕಾರೊಂದು ಭೀಕರ ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಮೂವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ, ಅವರಲ್ಲಿರುವ ಒಬ್ಬರು ಕಾಲಿವುಡ್ ನಟಿ ಯಶಿಕಾ ಆನಂದ್ ಎಂಬುದು ಸ್ಪಷ್ಟವಾಗಿತ್ತು. ಈ ಆಘಾತಕಾರಿ ಸುದ್ದಿ ಕೇಳಿ ಇಡೀ ಕಾಲಿವುಡ್​ ಸಿನಿ ಪ್ರಿಯರು ದಂಗಾಗಿದ್ದರು. ಇದರ ಬೆನ್ನಲ್ಲೇ ಕಾರಿನಲ್ಲಿದ್ದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ ಎಂಬ ಆಘಾತಕಾರಿ ಸುದ್ದಿಯೊಂದು ಅಪ್ಪಳಿಸಿತ್ತು. ಅದಾಗ್ಯೂ ನಟಿ ಹಾಗೂ ಇನ್ನೊಬ್ಬಳು ಫ್ರೆಂಡ್ ಅದೃಷ್ಟವಶಾತ್ ಪಾರಾಗಿದ್ದರು. ಅಲ್ಲದೆ ಇವರಿಬ್ಬರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಯಶಿಕಾ ಆನಂದ್ ಕೊಂಚ ಚೇತರಿಸಿಕೊಂಡಿದ್ದಾರೆ. ಆದರೆ ಆ ಭೀಕರ ಅಪಘಾತದ ಭೀತಿಯಿಂದ ಇನ್ನೂ ಹೊರಬಂದಿಲ್ಲ. ಅದರಲ್ಲೂ ಈ ಅಪಘಾತದಲ್ಲಿ ತನ್ನ ಸ್ನೇಹಿತೆ ಪಾವನಿ ಮೃತಪಟ್ಟಿರುವುದು ಕೇಳಿ ಖಿನ್ನತೆಗೆ ಒಳಗಾಗಿದ್ದಾರೆ. ಈ ದುರಂತದ ಬಗ್ಗೆಗಿನ ನನ್ನ ನೋವನ್ನು ಸುದೀರ್ಘ ಬರಹ ಮೂಲಕ ಸೋಷಿಯಲ್ ಮೀಡಿಯಾ ಮೂಲಕ ಯಶಿಕಾ ಬಿಚ್ಚಿಟ್ಟಿದ್ದಾರೆ. ಆ ಬರಹದ ಸಾರಾಂಶ ಹೀಗಿದೆ.

ಗೆಳೆತಿ ಪಾವನಿಯನ್ನು ನೆನೆಯುತ್ತಾ, ಜೀವಪೂರ್ತಿ ನಾನು ಪಶ್ಚಾತಾಪ ಪಡುವಂತಾಗಿದೆ. ನನಗೆ ಈಗ ಏನಾಗುತ್ತಿದೆ ಎಂದು ಸಹ ಹೇಳಲಾಗುತ್ತಿಲ್ಲ. ನಾನು ಇನ್ನೂ ಬದುಕಿರುವುದಕ್ಕೆ ಜೀವನಪರ್ಯಂತೆ ಪಶ್ಚಾತಾಪ ಪಡುತ್ತಿರುವೆ. ನನ್ನನ್ನು ಬದುಕಿಸಿದ ಆ ದೇವರಿಗೆ  ಧನ್ಯವಾದ ಹೇಳಬೇಕಾ ಅಥವಾ ನನ್ನ ಗೆಳೆತಿಯನ್ನು ಕಿತ್ತುಕೊಂಡಿದ್ದಕ್ಕೆ ದ್ವೇಷಿಸಬೇಕಾ? ಒಂದೂ ಕೂಡ ಅರ್ಥವಾಗುತ್ತಿಲ್ಲ.

ನನ್ನ ಪಾವನಿಯನ್ನು ನಾನು ತುಂಬಾ ಮಿಸ್ ಮಾಡಿಕೊಳ್ತೀನಿ. ದಯವಿಟ್ಟು ನೀನು ನನ್ನನ್ನು ಕ್ಷಮಿಸಿಬಿಡು. ನಿನ್ನ ಸಾವಿಗೆ ಕಾರಣವಾಗಿ ಇಡೀ ಕುಂಟುಬವನ್ನು ನಾನು ಸಂಕಷ್ಟಕ್ಕೆ ತಳ್ಳಿದೆ. ಪ್ರತಿ ಕ್ಷಣ ಕೂಡ ನಾನು ನಿನ್ನ ಮಿಸ್ ಮಾಡಿಕೊಳ್ಳಲಿದ್ದೇನೆ. ಬದುಕಿಳಿದಿರುವುದಕ್ಕೆ ಕೊನೆತನಕ ಪಶ್ಚಾತಾಪ ಪಡಲಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ. ನೀನು ಮತ್ತೆ ನನ್ನ ಬಳಿಗೆ ಹಿಂತಿರುಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ !! ಒಂದು ದಿನ ನಿಮ್ಮ ಕುಟುಂಬ ಕೂಡ ನನ್ನನ್ನು ಕ್ಷಮಿಸುತ್ತದೆ ಎಂದು ಭಾವಿಸುತ್ತೇವೆ! ನಿನ್ನ ನೆನಪಿನಲ್ಲೇ ನಾನು ಎಂದೆಂದಿಗೂ ಕಾಲ ಕಳೆಯುತ್ತೇನೆ ಎಂದು ಯಶಿಕಾ ತನ್ನ ಮನದ ಯಾತನೆಯನ್ನು ಹಂಚಿಕೊಂಡಿದ್ದಾರೆ.

ಇದೇ ವೇಳೆ ಕುಡಿದು ಕಾರು ಓಡಿಸಿದ್ದಾರೆ ಎಂಬ ಆರೋಪಕ್ಕೂ ಯಶಿಕಾ ಪ್ರತಿಕ್ರಿಯಿಸಿದ್ದು, ನಾವು ಯಾರು ಕುಡಿದು ಗಾಡಿ ಓಡಿಸಿರಲಿಲ್ಲ ಎಂದು ಪೊಲೀಸರೇ ಅಧಿಕೃತವಾಗಿ ಹೇಳಿದ್ದಾರೆ. ಹೀಗಿದ್ದು ಕೂಡ, ಕೆಲವರು ನಮ್ಮ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ತಮಗೆ ತೋಚಿದಂತೆ ಮಾತನಾಡ್ತಿದ್ದಾರೆ. ಸದ್ಯದ ನನ್ನ ಪರಿಸ್ಥಿತಿ ಏನೂ ಅಂತ ಕೂಡ ಇವರಿಗೆಲ್ಲಾ ಗೊತ್ತಿಲ್ಲ. ನನ್ನ ಬಲಗಾಲು ಮುರಿತಕ್ಕೊಳಗಾಗಿ ಸರ್ಜರಿ ಮಾಡಲಾಗಿದೆ.

ಇನ್ನು 5 ತಿಂಗಳುಗಳ ಕಾಲ ನನಗೆ ನಡೆಯಲು, ನಿಲ್ಲಲು ಆಗುವುದಿಲ್ಲ. ದಿನವಿಡೀ ಹಾಸಿಗೆಯಲ್ಲೇ ಇರಬೇಕು. ಅಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿಕೊಳ್ಳಬೇಕು. ಮಲಗಿದ್ದಲಿಂದ ತಿರುಗಲು ಕೂಡ ಸಾಧ್ಯವಾಗುತ್ತಿಲ್ಲ. ಇವೆಲ್ಲವೂ ಸೂಕ್ಷ್ಮ ವಿಚಾರ. ಇನ್ಮುಂದೆ ಸುಳ್ಳು ಸುದ್ದಿ ಹಬ್ಬಿಸುವ ಮುನ್ನ ಸ್ವಲ್ಪನಾದರೂ ಮಾನವೀಯತೆ ತೋರಿಸುತ್ತೀರಿ ಎಂದು ಭಾವಿಸುವೆ. ಅದೃಷ್ಟವಶಾತ್ ನನ್ನ ಮುಖಕ್ಕೆ ಯಾವುದೇ ಗಾಯವಾಗಿಲ್ಲ. ಇದನ್ನು ಪುನರ್ಜನ್ಮ ಎಂದೇ ಹೇಳಬಹುದು. ಆದರೆ ದೈಹಿಕ ಮತ್ತು ಮಾನಸಿಕ ಗಾಯಗಳನ್ನು ಮಾಡುವ ಮೂಲಕ ದೇವರು ನನಗೆ ಶಿಕ್ಷೆ ನೀಡಿದ್ದಾನೆ. ನಾನು ಕಳೆದುಕೊಂಡಿರುವುದ ಮುಂದೆ ಇದೆಲ್ಲಾ ಏನೂ ಅಲ್ಲ ಎಂದು ಯಶಿಕಾ ತಮ್ಮ ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: India vs England: ಯಾರಾಗಲಿದ್ದಾರೆ ಆರಂಭಿಕ: ಟೀಮ್ ಇಂಡಿಯಾ ಮುಂದಿದೆ 4 ಆಯ್ಕೆ

ಇದನ್ನೂ ಓದಿ: IPL 2021: ಐಪಿಎಲ್ ಅಭಿಮಾನಿಗಳಿಗೆ ಗುಡ್​ ನ್ಯೂಸ್: 12 ಆಟಗಾರರು ಕಣಕ್ಕಿಳಿಯುವುದು ಖಚಿತ

ಇದನ್ನೂ ಓದಿ: 108mp ಕ್ಯಾಮೆರಾ ಜೊತೆ ಸೂಪರ್ ಆಫರ್: ಅತೀ ಕಡಿಮೆ ಬೆಲೆಗೆ 5G ಸ್ಮಾರ್ಟ್​ಫೋನ್

(I will forever feel guilty to be alive: Yashika Aannand mourns best friend)

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ