Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡೂ ಕಥೆ ಕೇಳುತ್ತೇನೆ, ನನ್ನ ನಿರ್ಧಾರಕ್ಕೆ ಇಬ್ಬರೂ ಬದ್ಧರಾಗಬೇಕು’; ಕುಮಾರ್ ಭೇಟಿ ಬಳಿಕ ಪ್ರತಿಕ್ರಿಯಿಸಿದ ರವಿಚಂದ್ರನ್

‘ಕುಮಾರ್ ಅವರು ಎಲ್ಲವನ್ನೂ ಹೇಳಿದ್ದಾರೆ. ಪರಿಸ್ಥಿತಿ ತಣ್ಣಗಾಗಬೇಕು. ಸುದೀಪ್ ಹತ್ತಿರ ನಾನು ಮಾತಾಡಬೇಕಿದೆ. ಎರಡೂ ಕಥೆಯನ್ನು ಕೇಳುತ್ತೇನೆ’ ಎಂದಿದ್ದಾರೆ ರವಿಚಂದ್ರನ್.

‘ಎರಡೂ ಕಥೆ ಕೇಳುತ್ತೇನೆ, ನನ್ನ ನಿರ್ಧಾರಕ್ಕೆ ಇಬ್ಬರೂ ಬದ್ಧರಾಗಬೇಕು’; ಕುಮಾರ್ ಭೇಟಿ ಬಳಿಕ ಪ್ರತಿಕ್ರಿಯಿಸಿದ ರವಿಚಂದ್ರನ್
ರವಿಚಂದ್ರನ್, ಸುದೀಪ್, ಕುಮಾರ್
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on:Jul 19, 2023 | 2:13 PM

ಕಿಚ್ಚ ಸುದೀಪ್ (Sudeep) ಅವರಿಂದ ಮೋಸ ಆಗಿದೆ ಎಂದು ಎಂಎನ್​ ಕುಮಾರ್ ಅವರು ಫಿಲ್ಮ್​ ಚೇಂಬರ್​​ಗೆ ದೂರು ನೀಡಿದ್ದರು. ಸುದ್ದಿಗೋಷ್ಠಿ ಕರೆದು ಈ ವಿಚಾರದ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಚಾರವಾಗಿ ಸುದೀಪ್ ಅವರು ಕುಮಾರ್ ವಿರುದ್ಧ ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಈ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಹಿರಿಯ ನಟರಾದ ರವಿಚಂದ್ರನ್ (Ravchandran) ಹಾಗೂ ಶಿವರಾಜ್​ಕುಮಾರ್ ಮುಂದಾಗಿದ್ದಾರೆ. ಇದರ ಭಾಗವಾಗಿ ಕುಮಾರ್ ಅವರನ್ನು ರವಿಚಂದ್ರನ್ ಅವರು ಭೇಟಿ ಮಾಡಿದ್ದಾರೆ. ಬೆಂಗಳೂರಿನ ರವಿಚಂದ್ರನ್ ನಿವಾಸದಲ್ಲಿ ಈ ಭೇಟಿ ನಡೆದಿದೆ.

ಭೇಟಿ ಬಳಿಕ ರವಿಚಂದ್ರನ್ ಅವರು ಮಾಧ್ಯಮದವರ ಜೊತೆ ಮಾತನಾಡಿದ್ದಾರೆ. ‘ಕುಮಾರ್ ಅವರು ಎಲ್ಲವನ್ನೂ ಹೇಳಿದ್ದಾರೆ. ಪರಿಸ್ಥಿತಿ ತಣ್ಣಗಾಗಬೇಕು. ಸುದೀಪ್ ಹತ್ತಿರ ನಾನು ಮಾತಾಡಬೇಕಿದೆ. ಎರಡೂ ಕಥೆಯನ್ನು ಕೇಳುತ್ತೇನೆ. ನನ್ನ ನಿರ್ಧಾರಕ್ಕೆ ಇಬ್ಬರೂ ಬದ್ಧರಾಗಬೇಕು. ಇದು 20 ವರ್ಷಗಳ ಕಥೆಯಂತೆ ಕಾಣುತ್ತಿದೆ’ ಎಂದು ರವಿಚಂದ್ರನ್ ಹೇಳಿದ್ದಾರೆ.

‘ಸುದೀಪ್ ಆದಷ್ಟು ಬೇಗ ಸಿಕ್ತಾರೆ. ಅವರ ಜೊತೆಗೂ ಮಾತನಾಡುತ್ತೇನೆ. ಈಗಾಗಲೇ ಇಬ್ಬರೂ ನೊಂದಿದ್ದಾರೆ. ಚಿತ್ರರಂಗದಲ್ಲಿ ನಾವು ಸರಿಯಾಗಬೇಕು. ಒಕ್ಕೂಟದಲ್ಲಿ ಒಗ್ಗಟ್ಟಿರಬೇಕು. ಈ ಸಮಸ್ಯೆಯನ್ನು ಬಗೆಹರಿಸೋಕೆ ನಾನು ಪ್ರಯತ್ನ ಮಾಡುತ್ತೇನೆ. ಪರಿಹಾರ ಹುಡುಕಲೂ ಪ್ರಯತ್ನಿಸುತ್ತೇನೆ. ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದನ್ನು ಮೊದಲು ಬಿಡಬೇಕು’ ಎಂದು ರವಿಚಂದ್ರನ್ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ರವಿಚಂದ್ರನ್​ಗೆ ದಾಖಲೆಗಳನ್ನು ನೀಡಿದ್ರಾ ನಿರ್ಮಾಪಕ ಎಂಎನ್​ ಕುಮಾರ್?

2014ರಲ್ಲಿ ರಿಲೀಸ್ ಆದ ‘ಮಾಣಿಕ್ಯ’ ಸಿನಿಮಾದಲ್ಲಿ ರವಿಚಂದ್ರನ್ ಹಾಗೂ ಸುದೀಪ್ ಒಟ್ಟಾಗಿ ನಟಿಸಿದ್ದರು. ‘ಹೆಬ್ಬುಲಿ’ ಚಿತ್ರದಲ್ಲೂ ಇವರ ಕೆಮಿಸ್ಟ್ರಿ ಕೆಲಸ ಮಾಡಿತ್ತು. ಹೀಗಾಗಿ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ‘ಸುದೀಪ್ ನನಗೆ ಮಾಣಿಕ್ಯ ಚಿತ್ರದಿಂದ ತುಂಬಾ ಕ್ಲೋಸ್ ಆದರು. ಕುಮಾರ್ ಮುಂಚೆಯಿಂದ ಗೊತ್ತು. ದಾಖಲೆಗಳನ್ನು ನಾನು ಮೊದಲು ನೋಡ್ತೀನಿ. ಆಮೇಲೆ ಸುದೀಪ್ ಹತ್ರ ಮಾತಾಡ್ತೀನಿ’ ಎಂದಿದ್ದಾರೆ ರವಿಚಂದ್ರನ್.

ಧರಣಿ ಹಿಂಪಡೆದ ಕುಮಾರ್

ಕುಮಾರ್ ಅವರು ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ನಡೆಸುತ್ತಿದ್ದರು. ರವಿಚಂದ್ರನ್ ಭೇಟಿ ಬಳಿಕ ಈ ಧರಣಿ ಹಿಂಪಡೆದಿದ್ದಾರೆ. ‘ನಾನು ಬಹಿರಂಗವಾಗಿ ದಾಖಲೆಗಳನ್ನು ಕೊಡುವುದಿಲ್ಲ. ಹಿರಿಯರ ಮಾತಿಗೆ ಬೆಲೆ ಕೊಡಬೇಕು. ಹೀಗಾಗಿ ಧರಣಿ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುತ್ತೇನೆ’ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:57 pm, Wed, 19 July 23

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ