AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ ಮೇಲಿದ್ದ ಪ್ರೀತಿಯಿಂದ ಜನ ನನ್ನ ಆಯ್ಕೆ ಮಾಡಿದ್ದಾರೆ, ಅದನ್ನು ಉಳಿಸಿಕೊಂಡು ಹೋಗುತ್ತೇನೆ: ಸುಮಲತಾ ಅಂಬರೀಷ್

ಇಂದು (ಮೇ.29) ಅಂಬರೀಷ್​ 69ನೇ ಜನ್ಮದಿನ. ಈ ವಿಶೇಷ ದಿನದಂದು ಸುಮಲತಾ ಅಂಬರೀಷ್​ ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಷ್​ ಸಮಾಧಿಗೆ ನಮನ ಸಲ್ಲಿಸಿದರು.

ಅಂಬರೀಷ್​ ಮೇಲಿದ್ದ ಪ್ರೀತಿಯಿಂದ ಜನ ನನ್ನ ಆಯ್ಕೆ ಮಾಡಿದ್ದಾರೆ, ಅದನ್ನು ಉಳಿಸಿಕೊಂಡು ಹೋಗುತ್ತೇನೆ: ಸುಮಲತಾ ಅಂಬರೀಷ್
ಸುಮಲತಾ ಅಂಬರೀಷ್​ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: May 29, 2021 | 3:39 PM

Share

ಅಂಬರೀಷ್​ ಮಾಡಿರುವ ಕೆಲಸ ಮತ್ತು ಅವರ ಮೇಲಿರುವ ಪ್ರೀತಿಯಿಂದ ಜನರು ನನ್ನನ್ನು ಸಂಸದೆಯಾಗಿ ಆಯ್ಕೆ ಮಾಡಿದ್ದಾರೆ. ಆ ಪ್ರೀತಿ ಮತ್ತು ವಿಶ್ವಾಸವನ್ನು ನಾನು ಉಳಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​ ಹೇಳಿದ್ದಾರೆ.

ಇಂದು (ಮೇ.29) ಅಂಬರೀಷ್​ 69ನೇ ಜನ್ಮದಿನ. ಈ ವಿಶೇಷ ದಿನದಂದು ಸುಮಲತಾ ಅಂಬರೀಷ್​ ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಷ್​ ಸಮಾಧಿಗೆ ನಮನ ಸಲ್ಲಿಸಿದರು. ನಂತರ ಅಂಬರೀಷ್​ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನ ಕೆರೆ ಗ್ರಾಮಕ್ಕೆ ತೆರಳಿ ಅಲ್ಲಿ ಜನಪರ ಕೆಲಸ ಮಾಡಿದರು. ಈ ವೇಳೆ ಮಾತನಾಡಿದ ಸುಮಲತಾ, ‘ಅಂಬಿ ನಡೆದು ಬಂದ ದಾರಿ, ಅವರು ನಡೆದುಕೊಳ್ಳುತ್ತಿದ್ದ ಸ್ವಭಾವ, ಶತ್ರುಗಳು ಕಷ್ಟದಲ್ಲಿದ್ದಾಗ ನೆರವು ನೀಡುತ್ತಿದ್ದ ಗುಣ ಅಪರೂಪ. ಅದುವೇ ನನಗೆ ಸ್ಫೂರ್ತಿ, ಅದೇ ನನ್ನ ಶಕ್ತಿ’ ಎಂದಿದ್ದಾರೆ.

‘ಅಂಬರೀಷ್​ ಇದ್ದಾಗ ಜನ್ಮದಿನದಂದು ಕರ್ನಾಟಕದ ಮೂಲೆ ಮೂಲೆಯಿಂದಲೂ ಜನ ಬೆಂಗಳೂರಿನ ಮನೆ ಬಳಿಗೆ ಬರುತ್ತಿದ್ದರು. ಅವರು ತೀರಿ ಹೋದ ನಂತರ ಚುನಾವಣೆ ಸಮಯದಲ್ಲಿ ಪ್ರತೀ ವರ್ಷ ಅಂಬಿ ಹುಟ್ಟುಹಬ್ಬವನ್ನು ಮಂಡ್ಯದಲ್ಲೇ ಆಚರಿಸುತ್ತೇನೆ ಎಂದಿದ್ದೆ. ಅದೇ ರೀತಿ ಎರಡು ವರ್ಷಗಳಿಂದ ಮಂಡ್ಯದಲ್ಲೇ ಅವರ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಕೊವಿಡ್ ಇರುವುದರಿಂದ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸೋದು ಬೇಡ ಎಂದು ಮನವಿ ಮಾಡಿಕೊಂಡಿದ್ದೆ. ಆ ಮನವಿಗೆ ಅಭಿಮಾನಿಗಳು ಸ್ಪಂದಿಸಿದ್ದು, ಜನರಿಗೆ ಅವರ ಕೈಲಾದಷ್ಟು ಸಹಾಯವಾಗುವ ಕೆಲಸ ಮಾಡುತ್ತಿದ್ದಾರೆ’ ಎಂದು ಖುಷಿಪಟ್ಟರು.

’ಜನ ನನ್ನನ್ನು ಸಂಸದೆಯಾಗಿ ಆಯ್ಕೆ ಮಾಡಿದ್ದಾರೆ ಎಂದರೆ ಅಂಬರೀಷ್​ ಮಾಡಿರುವ ಕೆಲಸದಿಂದ‌. ಅವರ ಮೇಲಿನ ಪ್ರೀತಿಯಿಂದ. ಆ ಪ್ರೀತಿಯನ್ನು ನಾನು ಉಳಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ. ಅಂಬರೀಷ್ ಅವರಿಂದಲೇ ನಾನು’ ಎಂದು ಸುಮಲತಾ ಹೇಳಿದರು.

ಇದನ್ನೂ ಓದಿ: ಅಂಬರೀಷ್​ ಎಲ್ಲಿಯೂ ಹೋಗಿಲ್ಲ, ಅವರು ನಮ್ಮ ಜತೆಯೇ ಇದ್ದಾರೆ; ಸುಮಲತಾ ಭಾವುಕ ನುಡಿ

ಅಂಬರೀಶ್​ ಜನ್ಮದಿನ; ಕಂಠೀರವ ಸ್ಟುಡಿಯೋದಲ್ಲಿ ‘ರೆಬೆಲ್​ ಸ್ಟಾರ್​’ ಸಮಾಧಿಗೆ ಸುಮಲತಾ, ಅಭಿಷೇಕ್​ ಪೂಜೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ