Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ ಮೇಲಿದ್ದ ಪ್ರೀತಿಯಿಂದ ಜನ ನನ್ನ ಆಯ್ಕೆ ಮಾಡಿದ್ದಾರೆ, ಅದನ್ನು ಉಳಿಸಿಕೊಂಡು ಹೋಗುತ್ತೇನೆ: ಸುಮಲತಾ ಅಂಬರೀಷ್

ಇಂದು (ಮೇ.29) ಅಂಬರೀಷ್​ 69ನೇ ಜನ್ಮದಿನ. ಈ ವಿಶೇಷ ದಿನದಂದು ಸುಮಲತಾ ಅಂಬರೀಷ್​ ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಷ್​ ಸಮಾಧಿಗೆ ನಮನ ಸಲ್ಲಿಸಿದರು.

ಅಂಬರೀಷ್​ ಮೇಲಿದ್ದ ಪ್ರೀತಿಯಿಂದ ಜನ ನನ್ನ ಆಯ್ಕೆ ಮಾಡಿದ್ದಾರೆ, ಅದನ್ನು ಉಳಿಸಿಕೊಂಡು ಹೋಗುತ್ತೇನೆ: ಸುಮಲತಾ ಅಂಬರೀಷ್
ಸುಮಲತಾ ಅಂಬರೀಷ್​ (ಸಂಗ್ರಹ ಚಿತ್ರ)
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 29, 2021 | 3:39 PM

ಅಂಬರೀಷ್​ ಮಾಡಿರುವ ಕೆಲಸ ಮತ್ತು ಅವರ ಮೇಲಿರುವ ಪ್ರೀತಿಯಿಂದ ಜನರು ನನ್ನನ್ನು ಸಂಸದೆಯಾಗಿ ಆಯ್ಕೆ ಮಾಡಿದ್ದಾರೆ. ಆ ಪ್ರೀತಿ ಮತ್ತು ವಿಶ್ವಾಸವನ್ನು ನಾನು ಉಳಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​ ಹೇಳಿದ್ದಾರೆ.

ಇಂದು (ಮೇ.29) ಅಂಬರೀಷ್​ 69ನೇ ಜನ್ಮದಿನ. ಈ ವಿಶೇಷ ದಿನದಂದು ಸುಮಲತಾ ಅಂಬರೀಷ್​ ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಷ್​ ಸಮಾಧಿಗೆ ನಮನ ಸಲ್ಲಿಸಿದರು. ನಂತರ ಅಂಬರೀಷ್​ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನ ಕೆರೆ ಗ್ರಾಮಕ್ಕೆ ತೆರಳಿ ಅಲ್ಲಿ ಜನಪರ ಕೆಲಸ ಮಾಡಿದರು. ಈ ವೇಳೆ ಮಾತನಾಡಿದ ಸುಮಲತಾ, ‘ಅಂಬಿ ನಡೆದು ಬಂದ ದಾರಿ, ಅವರು ನಡೆದುಕೊಳ್ಳುತ್ತಿದ್ದ ಸ್ವಭಾವ, ಶತ್ರುಗಳು ಕಷ್ಟದಲ್ಲಿದ್ದಾಗ ನೆರವು ನೀಡುತ್ತಿದ್ದ ಗುಣ ಅಪರೂಪ. ಅದುವೇ ನನಗೆ ಸ್ಫೂರ್ತಿ, ಅದೇ ನನ್ನ ಶಕ್ತಿ’ ಎಂದಿದ್ದಾರೆ.

‘ಅಂಬರೀಷ್​ ಇದ್ದಾಗ ಜನ್ಮದಿನದಂದು ಕರ್ನಾಟಕದ ಮೂಲೆ ಮೂಲೆಯಿಂದಲೂ ಜನ ಬೆಂಗಳೂರಿನ ಮನೆ ಬಳಿಗೆ ಬರುತ್ತಿದ್ದರು. ಅವರು ತೀರಿ ಹೋದ ನಂತರ ಚುನಾವಣೆ ಸಮಯದಲ್ಲಿ ಪ್ರತೀ ವರ್ಷ ಅಂಬಿ ಹುಟ್ಟುಹಬ್ಬವನ್ನು ಮಂಡ್ಯದಲ್ಲೇ ಆಚರಿಸುತ್ತೇನೆ ಎಂದಿದ್ದೆ. ಅದೇ ರೀತಿ ಎರಡು ವರ್ಷಗಳಿಂದ ಮಂಡ್ಯದಲ್ಲೇ ಅವರ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಕೊವಿಡ್ ಇರುವುದರಿಂದ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸೋದು ಬೇಡ ಎಂದು ಮನವಿ ಮಾಡಿಕೊಂಡಿದ್ದೆ. ಆ ಮನವಿಗೆ ಅಭಿಮಾನಿಗಳು ಸ್ಪಂದಿಸಿದ್ದು, ಜನರಿಗೆ ಅವರ ಕೈಲಾದಷ್ಟು ಸಹಾಯವಾಗುವ ಕೆಲಸ ಮಾಡುತ್ತಿದ್ದಾರೆ’ ಎಂದು ಖುಷಿಪಟ್ಟರು.

’ಜನ ನನ್ನನ್ನು ಸಂಸದೆಯಾಗಿ ಆಯ್ಕೆ ಮಾಡಿದ್ದಾರೆ ಎಂದರೆ ಅಂಬರೀಷ್​ ಮಾಡಿರುವ ಕೆಲಸದಿಂದ‌. ಅವರ ಮೇಲಿನ ಪ್ರೀತಿಯಿಂದ. ಆ ಪ್ರೀತಿಯನ್ನು ನಾನು ಉಳಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ. ಅಂಬರೀಷ್ ಅವರಿಂದಲೇ ನಾನು’ ಎಂದು ಸುಮಲತಾ ಹೇಳಿದರು.

ಇದನ್ನೂ ಓದಿ: ಅಂಬರೀಷ್​ ಎಲ್ಲಿಯೂ ಹೋಗಿಲ್ಲ, ಅವರು ನಮ್ಮ ಜತೆಯೇ ಇದ್ದಾರೆ; ಸುಮಲತಾ ಭಾವುಕ ನುಡಿ

ಅಂಬರೀಶ್​ ಜನ್ಮದಿನ; ಕಂಠೀರವ ಸ್ಟುಡಿಯೋದಲ್ಲಿ ‘ರೆಬೆಲ್​ ಸ್ಟಾರ್​’ ಸಮಾಧಿಗೆ ಸುಮಲತಾ, ಅಭಿಷೇಕ್​ ಪೂಜೆ

ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ