AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ.

ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್
ಇಬ್ಬನಿ ತಬ್ಬಿದ ಇಳೆಯಲಿ-ಗೋಟ್
ರಾಜೇಶ್ ದುಗ್ಗುಮನೆ
|

Updated on: Sep 05, 2024 | 11:47 AM

Share

ಸದ್ಯ ಎಲ್ಲ ಕಡೆಗಳಲ್ಲಿ ಸಿನಿಮಾ ಸುಗ್ಗಿ ನಡೆಯುತ್ತಿದೆ. ಒಂದಾದ ಬಳಿಕ ಒಂದರಂತೆ ಸ್ಟಾರ್ ಹೀರೋಗಳ ಸಿನಿಮಾಗಳು ಹಾಗೂ ಹೊಸಬರ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ಕಳೆದ ವಾರ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ರಿಲೀಸ್ ಆಯಿತು. ಈ ವಾರ ರಕ್ಷಿತ್ ಶೆಟ್ಟಿ ನಿರ್ಮಾಣದ ಸಿನಿಮಾ ಬಿಡುಗಡೆ ಆಗಿದೆ. ಪರಭಾಷೆಗಳನ್ನೂ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ದಳಪತಿ ವಿಜಯ್ ನಟನೆಯ ‘GOAT’ ಬಿಡುಗಡೆ ಕಂಡಿದೆ.

‘ಇಬ್ಬನಿ ತಬ್ಬಿದ ಇಳೆಯಲಿ’

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ, ಜಿಎಸ್ ಗುಪ್ತಾ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಹೊಸಬರ ತಂಡಕ್ಕೆ ರಕ್ಷಿತ್ ಬೆಂಬಲ ನೀಡಿದ್ದು ಶ್ಲಾಘನೀಯ.

ಮತ್ಯಾವ ಸಿನಿಮಾ

‘ಎ ಡೇ ಇನ್ ಡಾಲರ್ಸ್​ ಪೇಟೆ’ ಚಿತ್ರ ಸೆಪ್ಟೆಂಬರ್ 6ರಂದು ರಿಲೀಸ್ ಆಗುತ್ತಿದೆ. ಪೃಥ್ವಿ ಅಂಬರ್, ಸೌಮ್ಯಾ ಜಗನ್​ಮೂರ್ತಿ, ಕುಶಾಲ್ ಮೊದಲಾದವರು ನಟಿಸಿದ್ದಾರೆ. ಸೆಪ್ಟೆಂಬರ್ 6ರಂದು ‘ಅನ್ನ’ ಹೆಸರಿನ ಸಿನಿಮಾ ರಿಲೀಸ್ ಆಗುತ್ತಿದೆ. ಮಕ್ಕಳ ಸಿನಿಮಾ ಇದಾಗಿದೆ. ನಂದನ್ ಜಿಎಂ, ಸಂಪತ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸಿನಿಮಾಗಳಲ್ಲಿ ಆಸ್ಥಾನ ಕಲಾವಿದರು ಯಾರು? 

ತಮಿಳಿನಲ್ಲಿ

ತಮಿಳಿನ ‘ದಿ ಗ್ರೇಟೆಸ್ಟ್​ ಆಫ್ ಆಲ್ ಟೈಮ್’ ಸಿನಿಮಾ ಸೆಪ್ಟೆಂಬರ್ 5ರಂದು ಬಿಡುಗಡೆ ಕಂಡಿದೆ. ದಳಪತಿ ವಿಜಯ್ ನಟನೆಯ ಈ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ