ಭಾವ ಲೋಕಕ್ಕೆ ಕರೆದೊಯ್ಯುವ ‘ಹೇಳು ಗೆಳತಿ’ ಹಾಡು

ರಕ್ಷಿತ್ ಶೆಟ್ಟಿ ಅರ್ಪಿಸುತ್ತಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ‘ಹೇಳು ಗೆಳತಿ’ ಹಾಡು ಬಿಡುಗಡೆ ಆಗಿದ್ದು, ರೆಟ್ರೊ ಶೈಲಿಯಲ್ಲಿ ಚಿತ್ರಿತವಾಗಿರುವ ಈ ಹಾಡು ಕೇಳುಗರನ್ನು ಭಾವಲೋಕಕ್ಕೆ ಕರೆದೊಯ್ಯುತ್ತಿದೆ.

ಭಾವ ಲೋಕಕ್ಕೆ ಕರೆದೊಯ್ಯುವ ‘ಹೇಳು ಗೆಳತಿ’ ಹಾಡು
Follow us
ಮಂಜುನಾಥ ಸಿ.
|

Updated on: Jul 31, 2024 | 9:48 PM

ಕನ್ನಡ ಸಿನಿಮಾಗಳಲ್ಲಿ ಒಳ್ಳೆಯ ಹಾಡುಗಳು ಬರುತ್ತಿಲ್ಲ ಎಂಬುದು ಸಂಗೀತ ಪ್ರೇಮಿಗಳು ಬಹು ಸಮಯದ ದೂರು. ಇದು ಬಹುತೇಕ ನಿಜವೂ ಹೌದು. ಆದರೆ ಈ ಕೊರತೆಯನ್ನು ನೀಗಿಸುವ ಸುಂದರವಾದ ಹಾಡೊಂದು ಕನ್ನಡ ಸಿನಿಮಾ ‘ಇಬ್ಬನಿ ತಬ್ಬಿದ ಇಳೆಯಲಿ’ದಲ್ಲಿದೆ. ‘ಹೇಳು ಗೆಳತಿ’ ಎಂಬ ಈ ಮಧುರವಾದ ಹಾಡು ಕೇಳುಗರನ್ನು ಯಾವುದೋ ಲೋಕಕ್ಕೆ ಕರೆದುಕೊಂಡು ಹೊತ್ತೊಯ್ಯುವಂತಿದೆ. ಹಾಡು ಕೆಲವು ದಿನದ ಹಿಂದಷ್ಟೆ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಿದ್ದು, ಹಾಡಿನ ಮಧುರತೆಯ ಜೊತೆಗೆ ಕೆಲವು ಅತ್ಯುತ್ತಮ ದೃಶ್ಯಗಳನ್ನು ಸಹ ಚಿತ್ರತಂಡ ಕಟ್ಟಿಕೊಟ್ಟಿದೆ.

ವಿಹಾನ್, ಅಂಕಿತಾ ಅಮರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಹಾಡೊಂದು ತಿಂಗಳ ಹಿಂದೆ ಬಿಡುಗಡೆ ಆಗಿತ್ತು. ಆ ಹಾಡು ಸಹ ಸಖತ್ ಗಮನ ಸೆಳೆದಿತ್ತು. ಈಗ ಬಿಡುಗಡೆ ಆಗಿರುವ ‘ಹೇಳು ಗೆಳತಿ’ ಹಾಡಂತೂ ಕೇಳುಗರಿಂದ ಭರಪೂರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ‘ಹೇಳು ಗೆಳತಿ’ ಹಾಡನ್ನು ರೆಟ್ರೋ ಹಿನ್ನೆಲೆಯಲ್ಲಿ ರೆಟ್ರೊ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗಿದ್ದು, ಹಾಡಿನಲ್ಲಿಯೇ ಒಂದು ಸಣ್ಣ ತ್ರಿಕೋನ ಪ್ರೇಮಕತೆಯನ್ನು ಸಹ ಹೇಳಲಾಗಿದೆ. ಹಾಡಿನ ಚಿತ್ರೀಕರಣವೂ ಅದ್ಭುತವಾಗಿದೆ. ರೆಟ್ರೋ ಕಾಲದಲ್ಲಿ ಕೂತು ಭಾವಗೀತೆಯೊಂದನ್ನು ಕೇಳುತ್ತಿರುವ ಅನುಭವವಾಗುತ್ತದೆ.

‘ಹೇಳು ಗೆಳತಿ’ ಹಾಡನ್ನು ನಾಗಾರ್ಜುನ ಶರ್ಮಾ ಬರೆದಿದ್ದಾರೆ. ಹಾಡು ಕೆಎಸ್​ಎನ್​ ಅವರ ಹಾಡುಗಳನ್ನು ನೆನಪಿಸುವಂತಿದೆ. ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಹಾಡಿಗೆ ದೀಕ್ಷಿತ್ ಕುಮಾರ್ ಕೊರಿಯೋಗ್ರಫಿ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ನಿಧಾನಕ್ಕೆ ಟ್ರೆಂಡ್ ಆಗುತ್ತಿದೆ ಈ ಮಧುರವಾದ ಹಾಡು. ಈ ಹಾಡು ಬಹು ದಿನಗಳ ವರೆಗೆ ಪ್ರೇಕ್ಷಕರಿಗೆ ನೆನಪಿನಲ್ಲಿ ಉಳಿಯುವ ಗುಣವನ್ನು ಹೊಂದಿದೆ. ಹಾಡಿನಲ್ಲಿ ನಾಯಕ, ನಾಯಕಿಯರ ಅಭಿನಯವೂ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:ರಕ್ಷಿತ್ ಶೆಟ್ಟಿ ವಿರುದ್ಧದ ಕೇಸ್; ಮಾತಿನ ಮೂಲಕವೇ ಬಗೆಹರಿಯಲಿದೆ ಕೇಸ್?

ಕಿರಿಕ್ ಪಾರ್ಟಿ ಹಾಗೂ ಅವನ್ನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ ಬರಹಗಾರರ ತಂಡದ ಸದಸ್ಯರಲ್ಲಿ ಒಬ್ಬರು. ಹಾಗೂ ಕಥಾಸಂಗಮ ಸಿನಿಮಾದ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ಸಿನಿಮಾ ನಿರ್ದೇಶಕರಾಗುತ್ತಿದ್ದಾರೆ. ಚಂದ್ರಜಿತ್ ಬೆಳಿಯಪ್ಪ ಅವರ ಸಿನಿಮಾ ರಕ್ಷಿತ್ ಶೆಟ್ಟಿ ಅವರ ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಮೂಡಿ ಬರುತ್ತಿದ್ದು, ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಈ ಚಿತ್ರಕ್ಕಿದೆ. ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ