AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಆಕಾಶವಾಣಿ ಬೆಂಗಳೂರು ನಿಲಯ’; ಡಿಫರೆಂಟ್​ ಶೀರ್ಷಿಕೆಯಲ್ಲಿ ಹೀಗೊಂದು ಕನ್ನಡ ಸಿನಿಮಾ

ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೂ ಈ ಸಿನಿಮಾ ಕಥೆಗೂ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಚಿತ್ರತಂಡ ಒತ್ತಿಹೇಳುತ್ತಿದೆ. ನಿಖಿತಾ ಸ್ವಾಮಿ ಮತ್ತು ರಣವೀರ್​ ಪಾಟೀಲ್ ಮುಖ್ಯಪಾತ್ರದಲ್ಲಿ ನಟಿಸಿದ್ದು, ಎಂ. ಹರಿಕೃಷ್ಣ ನಿರ್ದೇಶನ ಮಾಡಿದ್ದಾರೆ.

‘ಇದು ಆಕಾಶವಾಣಿ ಬೆಂಗಳೂರು ನಿಲಯ’; ಡಿಫರೆಂಟ್​ ಶೀರ್ಷಿಕೆಯಲ್ಲಿ ಹೀಗೊಂದು ಕನ್ನಡ ಸಿನಿಮಾ
‘ಇದು ಆಕಾಶವಾಣಿ ಬೆಂಗಳೂರು ನಿಲಯ’ ಚಿತ್ರದ ಪೋಸ್ಟರ್​
TV9 Web
| Edited By: |

Updated on: Oct 08, 2021 | 9:58 AM

Share

ಡಿಫರೆಂಟ್​ ಶೀರ್ಷಿಕೆಗಳನ್ನು ಆಯ್ಕೆ ಮಾಡಿಕೊಳ್ಳುವ ಸಿನಿಮಾಗಳು ಥಟ್​ ಅಂತ ಗಮನ ಸೆಳೆಯುತ್ತವೆ. ಹಾಗಾಗಿ ಒಳ್ಳೆಯ ಟೈಟಲ್​ ಸಲುವಾಗಿ ನಿರ್ದೇಶಕರು ಸಿಕ್ಕಾಪಟ್ಟೆ ತಲೆ ಕೆಡಿಸಿಕೊಳ್ಳುತ್ತಾರೆ. ಸಿನಿಮಾ ಹೆಸರಿಗಾಗಿ ಜಗಳಗಳು ಆದ ಉದಾಹರಣೆ ಕೂಡ ಬಹಳಷ್ಟು ಇವೆ. ಅಂಥ ಯಾವುದೇ ಕಿರಿಕ್​ ಇಲ್ಲದೆಯೂ ಹೊಸಬರ ತಂಡಕ್ಕೆ ಒಂದು ಡಿಫರೆಂಟ್​ ಟೈಟಲ್​ ಸಿಕ್ಕಿದೆ. ‘ಇದು ಆಕಾಶವಾಣಿ ಬೆಂಗಳೂರು ನಿಲಯ’ ಎಂಬ ಶೀರ್ಷಿಕೆಯಲ್ಲಿ ಸಿನಿಮಾ ಮೂಡಿಬಂದಿದೆ. ಇಂದು (ಅ.8) ಆ ಸಿನಿಮಾದ ಬಿಡುಗಡೆ. ಹಾರರ್​ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿಖಿತಾ ಸ್ವಾಮಿ ಮತ್ತು ರಣವೀರ್​ ಪಾಟೀಲ್ ಪ್ರಮುಖ ಪಾತ್ರ ನಿಭಾಯಿಸಿದ್ದಾರೆ.

ಶೀರ್ಷಿಕೆ ಹೀಗಿದೆ ಎಂದಮಾತ್ರಕ್ಕೆ ಇದು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸಂಬಂಧಿಸಿದ ಕಥೆ ಅಂತ ಭಾವಿಸುವಂತಿಲ್ಲ. ಈ ಸಿನಿ​ಮಾದಲ್ಲಿ ಕಥಾನಾಯಕನ ಹೆಸರು ಆಕಾಶ್​, ಕಥಾನಾಯಕಿ ಹೆಸರು ವಾಣಿ. ಅಲ್ಲದೇ ಈ ಚಿತ್ರದಲ್ಲಿ ಆಗಾಗ ಆಕಾಶವಾಣಿಯ ಸಿಗ್ನೇಚರ್​ ಟ್ಯೂನ್​ ಕೂಡ ಪ್ಲೇ ಆಗುತ್ತದೆ. ಕಥೆಯಲ್ಲಿ ರೇಡಿಯೋ ಕೂಡ ಪ್ರಮುಖ ಪಾತ್ರ ವಹಿಸಲಿದೆಯಂತೆ. ಈ ಎಲ್ಲ ಕಾರಣಗಳಿಂದ ‘ಇದು ಆಕಾಶವಾಣಿ ಬೆಂಗಳೂರು ನಿಲಯ’ ಎಂದು ಶೀರ್ಷಿಕೆ ಇಡಲಾಗಿದೆ.

ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೂ ಈ ಸಿನಿಮಾ ಕಥೆಗೂ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಚಿತ್ರತಂಡ ಒತ್ತಿಹೇಳುತ್ತಿದೆ. ಸುಚೇಂದ್ರ ಪ್ರಸಾದ್​, ನಾಗೇಂದ್ರ ಶಾ, ನಾರಾಯಣ ಸ್ವಾಮಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಮುಂತಾದವರು ನಟಿಸಿದ್ದಾರೆ. ಎಂ. ಹರಿಕೃಷ್ಣ ನಿರ್ದೇಶನ ಮಾಡಿದ್ದು, ಎ.ಟಿ. ರವೀಶ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಪವನ್​ ಗೌಡ ಸಂಕಲನ ಮಾಡಿದ್ದಾರೆ. ಶಿವಾನಂದ ಬಿ. ನಿರ್ಮಾಣ ಮಾಡಿದ್ದಾರೆ.

‘ಬೆಂಗಳೂರಿಗೆ ಬಂದು ಸೇಡು ತೀರಿಸಿಕೊಳ್ಳುವ ಹಳ್ಳಿ ಹುಡುಗಿ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ’ ಎಂದು ಪಾತ್ರ ಪರಿಚಯ ಮಾಡಿಕೊಳ್ಳುತ್ತಾರೆ ನಿಖಿತಾ ಸ್ವಾಮಿ. ಈ ಚಿತ್ರದ ಮೇಲೆ ಅವರ ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ. ರಣವೀರ್​ ಪಾಟೀಲ್​ ನಿಭಾಯಿಸಿರು ಪಾತ್ರಕ್ಕೆ ಹಲವು ಗೆಟಪ್​ಗಳಿವೆ.

(‘ಇದು ಆಕಾಶವಾಣಿ ಬೆಂಗಳೂರು ನಿಲಯ’ ಚಿತ್ರದ ಟ್ರೇಲರ್​)

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅನುಮತಿ ಸಿಕ್ಕ ಬಳಿಕ ಹಲವು ಚಿತ್ರಗಳು ಬಿಡುಗಡೆ ಆಗುತ್ತಿವೆ. ಆ ಪೈಕಿ ‘ಇದು ಆಕಾಶವಾಣಿ ಬೆಂಗಳೂರು ನಿಲಯ’ ಕೂಡ ಒಂದು. ಬ್ಯಾಕ್​      ಟು ಬ್ಯಾಕ್​ ಸ್ಟಾರ್​ ಸಿನಿಮಾಗಳು ತೆರೆಕಾಣಲು ರೆಡಿ ಆಗಿವೆ. ಅದರ ನಡುವೆಯೂ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ‘ಇದು ಆಕಾಶವಾಣಿ ಬೆಂಗಳೂರು ನಿಲಯ’ ಚಿತ್ರ ರಿಲೀಸ್​ ಆಗಿದೆ.

ಇದನ್ನೂ ಓದಿ:

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್