AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸಿನಿಮಾಗೆ ಬೆಂಬಲ ನೀಡಿಲ್ಲ ಅಂದ್ರೂ ಸುದ್ದಿಯಲ್ಲಿ ಇರ್ತೀನಿ’; ಸುದೀಪ್ ಹೀಗೆ ಹೇಳಿದ್ದು ಏಕೆ?

‘ಸುದೀಪ್ ಕನ್ನಡ ಸಿನಿಮಾಗೆ ಸಾಕಷ್ಟು ಬೆಂಬಲ ನೀಡುತ್ತಾರೆ. ಇಡೀ ಚಿತ್ರರಂಗವನ್ನು ಅವರು ಫ್ಯಾಮಿಲಿ ರೀತಿ ನೋಡುತ್ತಾರೆ’ ಎಂದರು ಆ್ಯಂಕರ್. ಇದಕ್ಕೆ ಸುದೀಪ್ ತಕ್ಷಣಕ್ಕೆ ಉತ್ತರಿಸಿದರು.

‘ನಾನು ಸಿನಿಮಾಗೆ ಬೆಂಬಲ ನೀಡಿಲ್ಲ ಅಂದ್ರೂ ಸುದ್ದಿಯಲ್ಲಿ ಇರ್ತೀನಿ’; ಸುದೀಪ್ ಹೀಗೆ ಹೇಳಿದ್ದು ಏಕೆ?
ಕಿಚ್ಚ ಸುದೀಪ್
TV9 Web
| Edited By: |

Updated on:Apr 21, 2022 | 4:38 PM

Share

‘ಕೆಜಿಎಫ್: ಚಾಪ್ಟರ್​ 2’ ಸಿನಿಮಾ (KGF:Chapter 2) ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಬಾಲಿವುಡ್ (Bollywood)​ ಮಂದಿಯಿಂದಲೂ ಮೆಚ್ಚುಗೆ ಹರಿದು ಬಂದಿದೆ. ಹಿಂದಿಯಲ್ಲಿ ಅತಿ ವೇಗದಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಕೆಜಿಎಫ್ 2’ ಚಿತ್ರ ಭಾಜನವಾಗಿದೆ. ಈ ಚಿತ್ರದ ಗೆಲುವನ್ನು ಸ್ಯಾಂಡಲ್​ವುಡ್​ನ ಅನೇಕರು ಸಂಭ್ರಮಿಸಿಲ್ಲ, ಬದಲಿಗೆ ಈ ಬಗ್ಗೆ ಮೌನ ತಾಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದ ಬಗ್ಗೆ ಸುದೀಪ್ (Kichcha Sudeep) ಪರೊಕ್ಷವಾಗಿ ಮಾತನಾಡಿದ್ದಾರೆ.

ಜಗ್ಗೇಶ್ ಹಾಗೂ ವಿಜಯ್ ಪ್ರಸಾದ್ ಕಾಂಬಿನೇಷನ್​ನ ‘ತೋತಾಪುರಿ’ ಸಿನಿಮಾ ಹಾಡಿನ ಮೂಲಕ ಸಾಕಷ್ಟು ಕುತೂಹಲ ಹುಟ್ಟುಹಾಕಿತ್ತು. ಈಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಟ್ರೇಲರ್ ರಿಲೀಸ್ ಮಾಡಿದರು. ಈ ಕಾರ್ಯಕ್ರಮದ ವೇದಿಕೆ ಏರಿದ್ದರು ಸುದೀಪ್. ಈ ವೇಳೆ ಆ್ಯಂಕರ್ ಹೇಳಿದ ಒಂದು ವಿಚಾರಕ್ಕೆ ಸುದೀಪ್ ಉತ್ತರ ನೀಡಿದರು.

‘ಸುದೀಪ್ ಕನ್ನಡ ಸಿನಿಮಾಗೆ ಸಾಕಷ್ಟು ಬೆಂಬಲ ನೀಡುತ್ತಾರೆ. ಇಡೀ ಚಿತ್ರರಂಗವನ್ನು ಅವರು ಫ್ಯಾಮಿಲಿ ರೀತಿ ನೋಡುತ್ತಾರೆ’ ಎಂದರು ಆ್ಯಂಕರ್. ಇದಕ್ಕೆ ಸುದೀಪ್ ತಕ್ಷಣಕ್ಕೆ ಉತ್ತರಿಸಿದರು. ‘ಸಿನಿಮಾಗೆ ಸಪೋರ್ಟ್ ಮಾಡಿಲ್ಲ ಅಂದ್ರೂ ನಾನು ಸುದ್ದಿಯಲ್ಲಿ ಇರ್ತೀನಿ’ ಎಂದರು. ‘ಕೆಜಿಎಫ್ 2’ ಬಗ್ಗೆ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ‘ಕನ್ನಡದ ಚಿತ್ರ ಇಷ್ಟು ದೊಡ್ಡ ಯಶಸ್ಸು ಕಂಡರೂ ಸುದೀಪ್ ಮೌನ ವಹಿಸಿದ್ದು ಸರಿ ಅಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಿದೆ. ಕೆಲ ಮಾಧ್ಯಮಗಳು ಈ ಬಗ್ಗೆ ವರದಿ ಕೂಡ ಮಾಡಿವೆ. ಇನ್ನು, ‘ಕೆಜಿಎಫ್’ ವಿಚಾರದಲ್ಲಿ ಅವರು ಮಾತನಾಡಿದ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರವಾಗಿಯೇ ಸುದೀಪ್ ಹೀಗೆ ಹೇಳಿದ್ದಾರೆ ಎನ್ನಲಾಗುತ್ತಿದೆ.

‘ತೋತಾಪುರಿ’ ಮಾವಿನಕಾಯಿ ವಿಚಾರ ಇಟ್ಟುಕೊಂಡು ಸುದೀಪ್​ಗೆ ಪ್ರಶ್ನೆ ಮಾಡಲಾಯಿತು, ‘ಉಪ್ಪು, ಖಾರ, ಸಿಹಿ, ತೋತಾಪುರಿಯ ಹುಳಿ. ಈ ನಾಲ್ಕು ಗುಣದಲ್ಲಿ ಸುದೀಪ್​ ಯಾರಾಗಿರ್ತಾರೆ’ ಎಂದು ಕೇಳಲಾಯಿತು. ಇದಕ್ಕೆ ಸುದೀಪ್ ಖಡಕ್ ಉತ್ತರ ನೀಡಿದರು. ‘ಎಲ್ಲರಿಗೂ ಒಂದೊಂದು ರೀತಿ ಕಾಣುತ್ತೇನೆ. ಜಗ್ಗೇಶ್​ ಅವರಿಗೆ ಒಂದು ರೀತಿ ಕಾಣುವ ನಾನು, ಉಳಿದವರಿಗೆ ಮತ್ತೊಂದು ರೀತಿ ಕಾಣಬಹುದು. ನಾನು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಾಲಿಗೆ ನಿಮ್ಮದು’ ಎಂದರು ಸುದೀಪ್.

ಇದನ್ನೂ ಓದಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಮೊದಲಿಗ ಸುದೀಪ್​ ಎಂದ ನಟ ಜಗ್ಗೇಶ್

Fact Check: ‘ಕೆಜಿಎಫ್ 2’ ಬಗ್ಗೆ ಸುದೀಪ್​ ರಿಯಾಕ್ಷನ್ ನೀಡಿದ್ದಾರೆ ಎಂಬ ವಿಡಿಯೋದ ಅಸಲಿಯತ್ತೇನು?

Published On - 4:37 pm, Thu, 21 April 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ