AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸಿನಿಮಾಗೆ ಬೆಂಬಲ ನೀಡಿಲ್ಲ ಅಂದ್ರೂ ಸುದ್ದಿಯಲ್ಲಿ ಇರ್ತೀನಿ’; ಸುದೀಪ್ ಹೀಗೆ ಹೇಳಿದ್ದು ಏಕೆ?

‘ಸುದೀಪ್ ಕನ್ನಡ ಸಿನಿಮಾಗೆ ಸಾಕಷ್ಟು ಬೆಂಬಲ ನೀಡುತ್ತಾರೆ. ಇಡೀ ಚಿತ್ರರಂಗವನ್ನು ಅವರು ಫ್ಯಾಮಿಲಿ ರೀತಿ ನೋಡುತ್ತಾರೆ’ ಎಂದರು ಆ್ಯಂಕರ್. ಇದಕ್ಕೆ ಸುದೀಪ್ ತಕ್ಷಣಕ್ಕೆ ಉತ್ತರಿಸಿದರು.

‘ನಾನು ಸಿನಿಮಾಗೆ ಬೆಂಬಲ ನೀಡಿಲ್ಲ ಅಂದ್ರೂ ಸುದ್ದಿಯಲ್ಲಿ ಇರ್ತೀನಿ’; ಸುದೀಪ್ ಹೀಗೆ ಹೇಳಿದ್ದು ಏಕೆ?
ಕಿಚ್ಚ ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 21, 2022 | 4:38 PM

Share

‘ಕೆಜಿಎಫ್: ಚಾಪ್ಟರ್​ 2’ ಸಿನಿಮಾ (KGF:Chapter 2) ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಬಾಲಿವುಡ್ (Bollywood)​ ಮಂದಿಯಿಂದಲೂ ಮೆಚ್ಚುಗೆ ಹರಿದು ಬಂದಿದೆ. ಹಿಂದಿಯಲ್ಲಿ ಅತಿ ವೇಗದಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಕೆಜಿಎಫ್ 2’ ಚಿತ್ರ ಭಾಜನವಾಗಿದೆ. ಈ ಚಿತ್ರದ ಗೆಲುವನ್ನು ಸ್ಯಾಂಡಲ್​ವುಡ್​ನ ಅನೇಕರು ಸಂಭ್ರಮಿಸಿಲ್ಲ, ಬದಲಿಗೆ ಈ ಬಗ್ಗೆ ಮೌನ ತಾಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದ ಬಗ್ಗೆ ಸುದೀಪ್ (Kichcha Sudeep) ಪರೊಕ್ಷವಾಗಿ ಮಾತನಾಡಿದ್ದಾರೆ.

ಜಗ್ಗೇಶ್ ಹಾಗೂ ವಿಜಯ್ ಪ್ರಸಾದ್ ಕಾಂಬಿನೇಷನ್​ನ ‘ತೋತಾಪುರಿ’ ಸಿನಿಮಾ ಹಾಡಿನ ಮೂಲಕ ಸಾಕಷ್ಟು ಕುತೂಹಲ ಹುಟ್ಟುಹಾಕಿತ್ತು. ಈಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಟ್ರೇಲರ್ ರಿಲೀಸ್ ಮಾಡಿದರು. ಈ ಕಾರ್ಯಕ್ರಮದ ವೇದಿಕೆ ಏರಿದ್ದರು ಸುದೀಪ್. ಈ ವೇಳೆ ಆ್ಯಂಕರ್ ಹೇಳಿದ ಒಂದು ವಿಚಾರಕ್ಕೆ ಸುದೀಪ್ ಉತ್ತರ ನೀಡಿದರು.

‘ಸುದೀಪ್ ಕನ್ನಡ ಸಿನಿಮಾಗೆ ಸಾಕಷ್ಟು ಬೆಂಬಲ ನೀಡುತ್ತಾರೆ. ಇಡೀ ಚಿತ್ರರಂಗವನ್ನು ಅವರು ಫ್ಯಾಮಿಲಿ ರೀತಿ ನೋಡುತ್ತಾರೆ’ ಎಂದರು ಆ್ಯಂಕರ್. ಇದಕ್ಕೆ ಸುದೀಪ್ ತಕ್ಷಣಕ್ಕೆ ಉತ್ತರಿಸಿದರು. ‘ಸಿನಿಮಾಗೆ ಸಪೋರ್ಟ್ ಮಾಡಿಲ್ಲ ಅಂದ್ರೂ ನಾನು ಸುದ್ದಿಯಲ್ಲಿ ಇರ್ತೀನಿ’ ಎಂದರು. ‘ಕೆಜಿಎಫ್ 2’ ಬಗ್ಗೆ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ‘ಕನ್ನಡದ ಚಿತ್ರ ಇಷ್ಟು ದೊಡ್ಡ ಯಶಸ್ಸು ಕಂಡರೂ ಸುದೀಪ್ ಮೌನ ವಹಿಸಿದ್ದು ಸರಿ ಅಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಿದೆ. ಕೆಲ ಮಾಧ್ಯಮಗಳು ಈ ಬಗ್ಗೆ ವರದಿ ಕೂಡ ಮಾಡಿವೆ. ಇನ್ನು, ‘ಕೆಜಿಎಫ್’ ವಿಚಾರದಲ್ಲಿ ಅವರು ಮಾತನಾಡಿದ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರವಾಗಿಯೇ ಸುದೀಪ್ ಹೀಗೆ ಹೇಳಿದ್ದಾರೆ ಎನ್ನಲಾಗುತ್ತಿದೆ.

‘ತೋತಾಪುರಿ’ ಮಾವಿನಕಾಯಿ ವಿಚಾರ ಇಟ್ಟುಕೊಂಡು ಸುದೀಪ್​ಗೆ ಪ್ರಶ್ನೆ ಮಾಡಲಾಯಿತು, ‘ಉಪ್ಪು, ಖಾರ, ಸಿಹಿ, ತೋತಾಪುರಿಯ ಹುಳಿ. ಈ ನಾಲ್ಕು ಗುಣದಲ್ಲಿ ಸುದೀಪ್​ ಯಾರಾಗಿರ್ತಾರೆ’ ಎಂದು ಕೇಳಲಾಯಿತು. ಇದಕ್ಕೆ ಸುದೀಪ್ ಖಡಕ್ ಉತ್ತರ ನೀಡಿದರು. ‘ಎಲ್ಲರಿಗೂ ಒಂದೊಂದು ರೀತಿ ಕಾಣುತ್ತೇನೆ. ಜಗ್ಗೇಶ್​ ಅವರಿಗೆ ಒಂದು ರೀತಿ ಕಾಣುವ ನಾನು, ಉಳಿದವರಿಗೆ ಮತ್ತೊಂದು ರೀತಿ ಕಾಣಬಹುದು. ನಾನು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಾಲಿಗೆ ನಿಮ್ಮದು’ ಎಂದರು ಸುದೀಪ್.

ಇದನ್ನೂ ಓದಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಮೊದಲಿಗ ಸುದೀಪ್​ ಎಂದ ನಟ ಜಗ್ಗೇಶ್

Fact Check: ‘ಕೆಜಿಎಫ್ 2’ ಬಗ್ಗೆ ಸುದೀಪ್​ ರಿಯಾಕ್ಷನ್ ನೀಡಿದ್ದಾರೆ ಎಂಬ ವಿಡಿಯೋದ ಅಸಲಿಯತ್ತೇನು?

Published On - 4:37 pm, Thu, 21 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ