AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹಾಡಿದ್ರೆ ಪಿಬಿ ಶ್ರೀನಿವಾಸ್​ಗೆ ಆಫರ್ ಸಿಗಲ್ಲ’ ಎಂದಿದ್ದ ರಾಜ್​ಕುಮಾರ್; ಅಣ್ಣಾವ್ರ ಒಳ್ಳೆ ಮನಸ್ಸಿನ ಬಗ್ಗೆ ಇಳಯರಾಜ ಅಪರೂಪದ ಮಾತು

ರಾಜ್​ಕುಮಾರ್ ಅವರು ‘ಯಾರೇ ಕೂಗಾಡಲಿ..’ ಹಾಡನ್ನು ಹಾಡಿದ್ದರು. ಈ ಹಾಡನ್ನು ರಾಜ್​ಕುಮಾರ್ ಅವರ ಬಳಿ ಹಾಡಿಸೋ ಆಲೋಚನೆ ಯಾರಿಗೂ ಇರಲಿಲ್ಲ. ಈ ಆಲೋಚನೆ ಮೊದಲು ಬಂದಿದ್ದು ಇಳಯರಾಜ ಹಾಗೂ ಜಿಕೆ ವೆಂಕಟೇಶ್ ಅವರಿಗೆ.

‘ನಾನು ಹಾಡಿದ್ರೆ ಪಿಬಿ ಶ್ರೀನಿವಾಸ್​ಗೆ ಆಫರ್ ಸಿಗಲ್ಲ’ ಎಂದಿದ್ದ ರಾಜ್​ಕುಮಾರ್; ಅಣ್ಣಾವ್ರ ಒಳ್ಳೆ ಮನಸ್ಸಿನ ಬಗ್ಗೆ ಇಳಯರಾಜ ಅಪರೂಪದ ಮಾತು
‘ನಾನು ಹಾಡಿದ್ರೆ ಪಿಬಿ ಶ್ರೀನಿವಾಸ್​ಗೆ ಆಫರ್ ಸಿಗಲ್ಲ’ ಎಂದಿದ್ದ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Oct 17, 2024 | 12:10 PM

Share

ರಾಜ್​ಕುಮಾರ್ ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಅವರು ಮೊದಲ ಹಾಡಿದ್ದು ಎಂದರೆ ಅದು ‘ಸಂಪತ್ತಿಗೆ ಸವಾಲ್’ ಚಿತ್ರದ ‘ಯಾರೇ ಕೂಗಾಡಲಿ..’ ಹಾಡನ್ನು. ರಾಜ್​ಕುಮಾರ್ ಅವರು ಗಾಯಕ ಆಗಲು ಕಾರಣವಾಗಿದ್ದು ಇಳಯರಾಜ ಅವರು ಅನ್ನೋದು ವಿಶೇಷ. ಈ ಬಗ್ಗೆ ಇಳಯರಾಜ ಇತ್ತೀಚೆಗೆ ಹೇಳಿಕೊಂಡಿದ್ದರು. ಮೈಸೂರು ದಸರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು.

‘ಸಂಪತ್ತಿಗೆ ಸವಾಲ್’ ಚಿತ್ರಕ್ಕೆ ಜಿಕೆ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದರು. ನಾನು ಅವರಿಗೆ ಸಹಾಯಕನಾಗಿದ್ದೆ. ಆಗ ರಾಜ್​ಕುಮಾರ್ ಸಿನಿಮಾಗಳು ಎಂದಾಗ ಪಿಬಿ ಶ್ರೀನಿವಾಸ್ ಹಾಡುತ್ತಿದ್ದರು. ಈ ಸಿನಿಮಾದ ಹಾಡನ್ನು ಹೊಸ ಧ್ವನಿ ಬೇಕು ಎಂದು ನಾನು ಜಿಕೆ ವೆಂಟಕೇಶ್ ಹತ್ತಿರ ಹೇಳಿದೆ’ ಎಂದು ಅಂದಿನ ಘಟನೆ ವಿವರಿಸಿದರು ಇಳಯರಾಜ.

‘ಜಿಕೆ ವೆಂಕಟೇಶ್ ಅವರು ಎಸ್​ಪಿ ಬಾಲಸುಬ್ರಹ್ಮಣ್ಯ ಹೆಸರು ಹೇಳಿದರು. ಬೇಡ ಎಂದೆ. ಆ ಬಳಿಕ ರಾಜ್​ಕುಮಾರ್ ಅವರ ಹತ್ತಿರವೇ ಹಾಡಿಸಿದರೆ ಹೇಗೆ ಎಂದು ಜಿಕೆವಿ ಕೇಳಿದರು. ರಾಜ್​ಕುಮಾರ್ ಹಾಡ್ತಾರಾ ಎಂದು ಪ್ರಶ್ನೆ ಮಾಡಿದೆ. ಹೌದು, ಅವರ ಧ್ವನಿ ಉತ್ತಮವಾಗಿದೆ. ಅವರು ರಂಗಭೂಮಿಯಿಂದ ಬಂದವರು ಎಂದು ಜಿಕೆವಿ ಹೇಳಿದರು. ಅವರೇ ಹಾಡಿದರೆ ಉತ್ತಮ ಎಂದು ನಿರ್ಧರಿಸಲಾಯಿತು’ ಎಂದಿದ್ದಾರೆ ರಾಜ್​ಕುಮಾರ್.

‘ಈ ವಿಚಾರವನ್ನು ರಾಜ್​ಕುಮಾರ್ ಬಳಿ ಹೇಳಲಾಯಿತು. ಈ ಹಾಡನ್ನು ಪಿಬಿ ಶ್ರೀನಿವಾಸ್ ಅವರೇ ಹಾಡಲಿ ಬಿಟ್ಟುಬಿಡಲಿ, ಇದರಿಂದ ಅವರ ಜೀವನ ನಡೆಯುತ್ತಿದೆ ಎಂದು ರಾಜ್​ಕುಮಾರ್ ಹೇಳಿದ್ದರು. ಅವರ ಒಳ್ಳೆಯತನ ಎಷ್ಟಿತ್ತು ನೋಡಿ’ ಎಂದಿದ್ದಾರೆ ಇಳಯರಾಜ. ತಾವು ಹಾಡಿದರೆ ಪಿಬಿಎಸ್​ಗೆ ಆಫರ್​ಗಳು ಇರುವುದಿಲ್ಲವಲ್ಲ ಎನ್ನುವ ಬೇಸರ ರಾಜ್​ಕುಮಾರ್​ಗೆ ಕಾಡಿತ್ತು.

ಇದನ್ನೂ ಓದಿ: ‘ನಾನು ಎಮ್ಮೆ ಕಾದವನು ಎಂಎ ಮಾಡಿದವನಲ್ಲ, ನನಗೇಕೆ ಡಾಕ್ಟರೇಟ್’ ಎಂದು ಕೇಳಿದ್ದ ರಾಜ್​ಕುಮಾರ್

‘ಜಿಕೆವಿ ಅವರ ಬಳಿ ಹಾಡಿ ತೋರಿಸಿ ಎಂದರು ರಾಜ್​ಕುಮಾರ್. ಹಾಡಿ ತೋರಿಸಿದಾಗ ಅವರು ಖುಷಿಪಟ್ಟರು. ನಾನೇ ಹಾಡುತ್ತೇನೆ ಎಂದರು. ರಾಜ್​ಕುಮಾರ್ ಅಣ್ಣ ಅವರ ಬಳಿ ಮೊದಲು ಹಾಡಿಸಿದ್ದು ನಾನೇ’ ಎಂದರು ಇಳಯರಾಜ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:10 pm, Thu, 17 October 24

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು