AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್​ಗೆ ಮತ್ತೆ ಲವ್‌ ಆಗಿದ್ಯಂತೆ!

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಮತ್ತೆ ಲವ್‌ ಆಗಿದ್ಯಂತೆ. ಇಂಥಾದ್ದೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ. ಬಣ್ಣದ ಬದುಕಿನಲ್ಲಿ ಜೊತೆಯಾಟದ ಈ ಜೋಡಿ. ನಿಜಜೀವನದಲ್ಲೂ ಒಂದಾಗಿ ಮಾದರಿಯಾಗಿದೆ. ಈ ಮುದ್ದಾದ ಜೋಡಿಗೆ ಎರಡು ಮುದ್ದು ಮುದ್ದಾದ ಮಕ್ಕಳಿವೆ. ಆದ್ರೂ ರಾಧಿಕಾ ಪಂಡಿತ್‌ ಮತ್ತೆ ಲವ್‌ನಲ್ಲಿ ಬಿದ್ದಿದ್ದಾರಂತೆ. ರಾಧಿಕಾ ಪಂಡಿತ್‌ಗೆ ಮತ್ತೆ ಲವ್ವಾಗಿರೋದು ಯಾರ ಮೇಲೆ ಗೊತ್ತಾ. ಅದು ಬೇರಾರೂ ಅಲ್ಲ ತನ್ನ […]

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್​ಗೆ ಮತ್ತೆ ಲವ್‌ ಆಗಿದ್ಯಂತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 28, 2019 | 8:06 AM

Share

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಮತ್ತೆ ಲವ್‌ ಆಗಿದ್ಯಂತೆ. ಇಂಥಾದ್ದೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ. ಬಣ್ಣದ ಬದುಕಿನಲ್ಲಿ ಜೊತೆಯಾಟದ ಈ ಜೋಡಿ. ನಿಜಜೀವನದಲ್ಲೂ ಒಂದಾಗಿ ಮಾದರಿಯಾಗಿದೆ. ಈ ಮುದ್ದಾದ ಜೋಡಿಗೆ ಎರಡು ಮುದ್ದು ಮುದ್ದಾದ ಮಕ್ಕಳಿವೆ. ಆದ್ರೂ ರಾಧಿಕಾ ಪಂಡಿತ್‌ ಮತ್ತೆ ಲವ್‌ನಲ್ಲಿ ಬಿದ್ದಿದ್ದಾರಂತೆ.

ರಾಧಿಕಾ ಪಂಡಿತ್‌ಗೆ ಮತ್ತೆ ಲವ್ವಾಗಿರೋದು ಯಾರ ಮೇಲೆ ಗೊತ್ತಾ. ಅದು ಬೇರಾರೂ ಅಲ್ಲ ತನ್ನ ಪತಿ ರಾಕಿ ಬಾಯ್ ಮೇಲೆ. ಇದಕ್ಕೆ ಕಾರಣ ರಾಕಿಂಗ್‌ ಸ್ಟಾರ್‌ ಯಶ್ ಹೊಸ ಏರ್‌ ಸ್ಟೈಲ್‌. ಸ್ಯಾಂಡಲ್‌ವುಡ್‌ನ ಸ್ಟೈಲಿಶ್‌ ಸ್ಟಾರ್‌ ಯಶ್‌ ತಮ್ಮ ಸ್ಟೈಲ್‌ ಜೊತೆಗೆ ಹೇರ್‌ ಸ್ಟೈಲ್‌ನಿಂದಲೂ ಹೆಚ್ಚು ಗಮನ ಸೆಳೆಯುತ್ತಾರೆ. ಸದ್ಯ ತಮ್ಮ ಹೇರ್‌ ಸ್ಟೈಲ್‌ ಸೀಕ್ರೆಟ್‌ ರಿವೀಲ್ ಮಾಡಿರೋ ಯಶ್‌, ಸೋಷಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನ ಅಪ್‌ಲೋಡ್‌ ಮಾಡಿದ್ದಾರೆ.

ಯಶ್‌ರ ಈ ಹೊಸ ಹೇರ್‌ ಸ್ಟೈಲ್‌ ಹಿಂದಿರೋ ಕೈಚಳಕ ಯಾರದ್ದು ಅನ್ನೋದನ್ನ ರಿವೀಲ್‌ ಮಾಡಿದ್ದಾರೆ. ಡಿಸೈನರ್‌ ಸಾನಿಯಾ ಸರ್ದಾರಿಯಾ ಅದ್ಭುತವಾದ ಹೇರ್‌ ಸ್ಟೈಲಿಸ್ಟ್ ಅಂತ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಯಶ್‌ ಹಂಚಿಕೊಂಡಿರೋ ಫೋಟೋಗಳು ಸಿಕ್ಕಾಪಟ್ಟೆ ಸ್ಟೈಲಿಶ್‌ ಆಗಿವೆ.

ಹಾಗಾಗಿ ಆ ಫೋಟೋಗಳಿಗೆ ರಾಧಿಕಾ ಕಮೆಂಟ್‌ ಮಾಡಿದ್ದು, ನಾನು ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದಿದ್ದೇನೆ ಅಂತ ಕಾಮೆಂಟ್‌ ಮಾಡಿದ್ದಾರೆ. ಯಶ್‌ ಫೋಟೋ ಜೊತೆಗೆ ರಾಧಿಕಾ ಪಂಡಿತ್‌ ಕಾಮೆಂಟ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಫುಲ್‌ ವೈರಲ್ ಆಗಿವೆ.

Published On - 8:05 am, Thu, 28 November 19

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ