AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್​ಗೆ ಮತ್ತೆ ಲವ್‌ ಆಗಿದ್ಯಂತೆ!

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಮತ್ತೆ ಲವ್‌ ಆಗಿದ್ಯಂತೆ. ಇಂಥಾದ್ದೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ. ಬಣ್ಣದ ಬದುಕಿನಲ್ಲಿ ಜೊತೆಯಾಟದ ಈ ಜೋಡಿ. ನಿಜಜೀವನದಲ್ಲೂ ಒಂದಾಗಿ ಮಾದರಿಯಾಗಿದೆ. ಈ ಮುದ್ದಾದ ಜೋಡಿಗೆ ಎರಡು ಮುದ್ದು ಮುದ್ದಾದ ಮಕ್ಕಳಿವೆ. ಆದ್ರೂ ರಾಧಿಕಾ ಪಂಡಿತ್‌ ಮತ್ತೆ ಲವ್‌ನಲ್ಲಿ ಬಿದ್ದಿದ್ದಾರಂತೆ. ರಾಧಿಕಾ ಪಂಡಿತ್‌ಗೆ ಮತ್ತೆ ಲವ್ವಾಗಿರೋದು ಯಾರ ಮೇಲೆ ಗೊತ್ತಾ. ಅದು ಬೇರಾರೂ ಅಲ್ಲ ತನ್ನ […]

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್​ಗೆ ಮತ್ತೆ ಲವ್‌ ಆಗಿದ್ಯಂತೆ!
ಸಾಧು ಶ್ರೀನಾಥ್​
|

Updated on:Nov 28, 2019 | 8:06 AM

Share

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಮತ್ತೆ ಲವ್‌ ಆಗಿದ್ಯಂತೆ. ಇಂಥಾದ್ದೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ. ಬಣ್ಣದ ಬದುಕಿನಲ್ಲಿ ಜೊತೆಯಾಟದ ಈ ಜೋಡಿ. ನಿಜಜೀವನದಲ್ಲೂ ಒಂದಾಗಿ ಮಾದರಿಯಾಗಿದೆ. ಈ ಮುದ್ದಾದ ಜೋಡಿಗೆ ಎರಡು ಮುದ್ದು ಮುದ್ದಾದ ಮಕ್ಕಳಿವೆ. ಆದ್ರೂ ರಾಧಿಕಾ ಪಂಡಿತ್‌ ಮತ್ತೆ ಲವ್‌ನಲ್ಲಿ ಬಿದ್ದಿದ್ದಾರಂತೆ.

ರಾಧಿಕಾ ಪಂಡಿತ್‌ಗೆ ಮತ್ತೆ ಲವ್ವಾಗಿರೋದು ಯಾರ ಮೇಲೆ ಗೊತ್ತಾ. ಅದು ಬೇರಾರೂ ಅಲ್ಲ ತನ್ನ ಪತಿ ರಾಕಿ ಬಾಯ್ ಮೇಲೆ. ಇದಕ್ಕೆ ಕಾರಣ ರಾಕಿಂಗ್‌ ಸ್ಟಾರ್‌ ಯಶ್ ಹೊಸ ಏರ್‌ ಸ್ಟೈಲ್‌. ಸ್ಯಾಂಡಲ್‌ವುಡ್‌ನ ಸ್ಟೈಲಿಶ್‌ ಸ್ಟಾರ್‌ ಯಶ್‌ ತಮ್ಮ ಸ್ಟೈಲ್‌ ಜೊತೆಗೆ ಹೇರ್‌ ಸ್ಟೈಲ್‌ನಿಂದಲೂ ಹೆಚ್ಚು ಗಮನ ಸೆಳೆಯುತ್ತಾರೆ. ಸದ್ಯ ತಮ್ಮ ಹೇರ್‌ ಸ್ಟೈಲ್‌ ಸೀಕ್ರೆಟ್‌ ರಿವೀಲ್ ಮಾಡಿರೋ ಯಶ್‌, ಸೋಷಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನ ಅಪ್‌ಲೋಡ್‌ ಮಾಡಿದ್ದಾರೆ.

ಯಶ್‌ರ ಈ ಹೊಸ ಹೇರ್‌ ಸ್ಟೈಲ್‌ ಹಿಂದಿರೋ ಕೈಚಳಕ ಯಾರದ್ದು ಅನ್ನೋದನ್ನ ರಿವೀಲ್‌ ಮಾಡಿದ್ದಾರೆ. ಡಿಸೈನರ್‌ ಸಾನಿಯಾ ಸರ್ದಾರಿಯಾ ಅದ್ಭುತವಾದ ಹೇರ್‌ ಸ್ಟೈಲಿಸ್ಟ್ ಅಂತ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಯಶ್‌ ಹಂಚಿಕೊಂಡಿರೋ ಫೋಟೋಗಳು ಸಿಕ್ಕಾಪಟ್ಟೆ ಸ್ಟೈಲಿಶ್‌ ಆಗಿವೆ.

ಹಾಗಾಗಿ ಆ ಫೋಟೋಗಳಿಗೆ ರಾಧಿಕಾ ಕಮೆಂಟ್‌ ಮಾಡಿದ್ದು, ನಾನು ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದಿದ್ದೇನೆ ಅಂತ ಕಾಮೆಂಟ್‌ ಮಾಡಿದ್ದಾರೆ. ಯಶ್‌ ಫೋಟೋ ಜೊತೆಗೆ ರಾಧಿಕಾ ಪಂಡಿತ್‌ ಕಾಮೆಂಟ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಫುಲ್‌ ವೈರಲ್ ಆಗಿವೆ.

Published On - 8:05 am, Thu, 28 November 19

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ