ಹಲ್ಲೆಯ ವಿಡಿಯೋ, ಸಿಸಿಟಿವಿ ದೃಶ್ಯ; ದರ್ಶನ್ ವಿರುದ್ಧ ಸಿಕ್ಕ ಪ್ರಬಲ ಸಾಕ್ಷಿಗಳೇನು?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ ಈಗ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಕೇಸ್​ನ ತನಿಖೆ ಕೊನೇ ಹಂತಕ್ಕೆ ಬಂದಿದೆ. ಬೆಂಗಳೂರು ಪೊಲೀಸರು ಇನ್ನು ಎರಡೇ ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಿದ್ದಾರೆ. ಅವರ ವಿರುದ್ಧ ಪ್ರಮುಖ ಸಾಕ್ಷಿಗಳು ಸಿಕ್ಕಿವೆ.

ಹಲ್ಲೆಯ ವಿಡಿಯೋ, ಸಿಸಿಟಿವಿ ದೃಶ್ಯ; ದರ್ಶನ್ ವಿರುದ್ಧ ಸಿಕ್ಕ ಪ್ರಬಲ ಸಾಕ್ಷಿಗಳೇನು?
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 04, 2024 | 8:00 AM

ನಟ ದರ್ಶನ್​ಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣ ಕಂಟಕವಾಗಿದೆ. ಈಗಾಗಲೇ ಅವರು ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲ್​ಗೆ ಶಿಫ್ಟ್ ಆಗಿದ್ದಾರೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಕಾಡಿದೆ. ಈ ಮಧ್ಯೆ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 4) ಅಥವಾ ನಾಳೆ (ಸೆಪ್ಟೆಂಬರ್ 5) ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ. ಈ ಮಧ್ಯೆ ದರ್ಶನ್ ವಿರುದ್ಧವಾಗಿ ಪ್ರಬಲ ಸಾಕ್ಷಿಗಳೇ ಲಭ್ಯವಾಗಿವೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದು, ಅವರನ್ನು ಹತ್ಯೆ ಮಾಡಿ, ಬೇರೆಯವರನ್ನು ಕೇಸ್​ನಲ್ಲಿ ಸರೆಂಡರ್ ಮಾಡಿಸೋ ತನಕ ಪ್ರತಿ ಹಂತದಲ್ಲಿ ದರ್ಶನ್ ಪಾತ್ರದ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ, ದರ್ಶನ್ ಪಾತ್ರದ ಬಗ್ಗೆ ಸಾಕ್ಷ್ಯಗಳ ಸಮೇತ ಚಾರ್ಜ್​ಶೀಟ್​ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಹಾಗಾದರೆ ದರ್ಶನ್ ವಿರುದ್ಧ ಸಿಕ್ಕಿರುವ ಸಾಕ್ಷ್ಯಗಳು ಏನು? ಆ ಬಗ್ಗೆ ಇಲ್ಲಿದೆ ವಿವರ.

  1. ಪವನ್​ಗೆ ಹೇಳಿ ಚಿತ್ರದುರ್ಗದಿಂದ ರೇಣುಕಾಸ್ವಾಮಿ ಕರೆಸಿದ್ದು ದರ್ಶನ್ ಅನ್ನೋದು ಗೊತ್ತಾಗಿದೆ. ಪವನ್ ಸೂಚನೆಯಂತೆ ರಾಘವೇಂದ್ರ, ರೇಣುಕಾಸ್ವಾಮಿ ಕಿಡ್ನಾಪ್ ಮಾಡಿಸಿದ್ದರು.
  2. ದರ್ಶನ್ ಬಟ್ಟೆಯ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಪತ್ತೆ ಆಗಿವೆ. ಇದು ಪ್ರಮುಖ ಸಾಕ್ಷಿ ಆಗಲಿದೆ.
  3. ಪಬ್​ನಲ್ಲಿ ಕುಳಿತಿದ್ದು, ನಂತರ ಪವಿತ್ರಾ ಮನೆಗೆ ಹೋಗಿದ್ದ ದೃಶ್ಯಗಳು ಲಭ್ಯವಾಗಿವೆ. ಪವಿತ್ರಾರ ಕರೆದುಕೊಂಡು ಪಟ್ಟಣಗೆರೆ ಶೆಡ್​ಗೆ ದರ್ಶನ್ ಹೊಗಿದ್ದರು. ಶೆಡ್​ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಆ ಬಳಿಕ ದರ್ಶನ್​ ಪಬ್​ಗೆ ಬಂದಿದ್ದ ಬಗ್ಗೆ ಸಾಕ್ಷಿ ಇದೆ.
  4. ಪಬ್​ನಲ್ಲಿ ಇರುವಾಗ ರೇಣುಕಾಸ್ವಾಮಿ ಫೋಟೋ ದರ್ಶನ್​ಗೆ ಬಂದಿತ್ತು. ಆ ಬಳಿಕ ದರ್ಶನ್ ಮತ್ತೆ ಪಬ್​ನಿಂದ ಪಟ್ಟಣಗೆರೆ ಶೆಡ್​ಗೆ ಹೋಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ. ಆ ಬಳಿಕ RR ನಗರ ಮನೆಗೆ ಬಂದು ಬಟ್ಟೆ ಬದಲಿಸಿದ್ದರು ದರ್ಶನ್.
  5. ಬೆಳಿಗ್ಗೆ ಬನಶಂಕರಿಯ ವಿಜಯಲಕ್ಷ್ಮಿ ಮನೆಗೆ ಹೋಗಿದ್ದರು. ವಿಜಯಲಕ್ಷ್ಮಿ ಮನೆಯಲ್ಲಿ ಪೂಜೆಯಲ್ಲಿ ಭಾಗಿಯಾಗಿದ್ದರು. ವಿಜಯಲಕ್ಷ್ಮಿ ಮನೆಯಲ್ಲಿ  ದರ್ಶನ್ ಶೂ ಬಿಟ್ಟು ಹೋಗಿದ್ದರು. ನಂತರ ಮೈಸೂರಿನ ಫಾರ್ಮ್ ಹೌಸ್​ಗೆ ಹೋಗಿ ಅಲ್ಲಿಂದ ಹೋಟೆಲ್​ಗೆ ತೆರಳಿದ್ದರು. ಇದಕ್ಕೂ ಸಾಕ್ಷಿ ಸಿಕ್ಕಿದೆ.
  6. ಹೋಟೆಲ್​ನಿಂದ ಶೂಟಿಂಗ್​ಗೆ ಹೋಗಿದ್ದರು. ಆ ಬಳಿಕ ಮತ್ತೆ ಹೋಟೆಲ್​ಗೆ ಬಂದಿದ್ದರು. ದರ್ಶನ್ ಓಡಾಟದ ಸಿಸಿಟಿವಿ, ಟವರ್ ಲೊಕೇಷನ್ ತನಿಖೆಯಲ್ಲಿ ಸಿಕ್ಕಿವೆ.
  7. ಸಿಸಿಟಿವಿ ದೃಶ್ಯಗಳಿಗೂ ಟವರ್ ಲೊಕೇಷನ್​ಗಳೀಗೂ ಮ್ಯಾಚ್ ಆಗಿದೆ. ಪ್ರತಿ ಹಂತದಲ್ಲೂ ದರ್ಶನ್ ನೋಡಿದ್ದ ಐ ವಿಟ್ನೇಸ್ ಹೇಳಿಕೆಗಳು. ನಟ ಚಿಕ್ಕಣ್ಣ ಸೇರಿದಂತೆ ಅನೇಕ ಸಾಕ್ಷಿಗಳ ಹೇಳಿಕೆಗಳು ಉಲ್ಲೇಖ ಮಾಡಲಾಗಿದೆ.
  8. ದರ್ಶನ್ ವಿರುದ್ಧ ಆರೋಪಿಯೊಬ್ಬ ಹೇಳಿಕೆ ನೀಡಿದ್ದಾನೆ. ಪ್ರದೋಶ್ ಮೊಬೈಲ್​ನಲ್ಲಿ ಘಟನೆಗೆ ಸಂಬಂಧಿಸಿದ ವಿಡಿಯೋ ಇತ್ತು. ಫೋನ್ ಕಾಲ್, ಚಾಟಿಂಗ್​ನಲ್ಲಿ ಸಂಚಿನ ಬಗ್ಗೆ ಮಾಹಿತಿ ಸಿಕ್ಕಿದೆ. ಸರೆಂಡರ್ ಮಾಡಿಸಲು ಮನವೊಲಿಸಿದ್ದು, ಹಣ ಕೊಟ್ಟಿದ್ದು ದೃಢವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.