AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆಯ ವಿಡಿಯೋ, ಸಿಸಿಟಿವಿ ದೃಶ್ಯ; ದರ್ಶನ್ ವಿರುದ್ಧ ಸಿಕ್ಕ ಪ್ರಬಲ ಸಾಕ್ಷಿಗಳೇನು?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ ಈಗ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಕೇಸ್​ನ ತನಿಖೆ ಕೊನೇ ಹಂತಕ್ಕೆ ಬಂದಿದೆ. ಬೆಂಗಳೂರು ಪೊಲೀಸರು ಇನ್ನು ಎರಡೇ ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಿದ್ದಾರೆ. ಅವರ ವಿರುದ್ಧ ಪ್ರಮುಖ ಸಾಕ್ಷಿಗಳು ಸಿಕ್ಕಿವೆ.

ಹಲ್ಲೆಯ ವಿಡಿಯೋ, ಸಿಸಿಟಿವಿ ದೃಶ್ಯ; ದರ್ಶನ್ ವಿರುದ್ಧ ಸಿಕ್ಕ ಪ್ರಬಲ ಸಾಕ್ಷಿಗಳೇನು?
ದರ್ಶನ್
Kiran HV
| Edited By: |

Updated on: Sep 04, 2024 | 8:00 AM

Share

ನಟ ದರ್ಶನ್​ಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣ ಕಂಟಕವಾಗಿದೆ. ಈಗಾಗಲೇ ಅವರು ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲ್​ಗೆ ಶಿಫ್ಟ್ ಆಗಿದ್ದಾರೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಕಾಡಿದೆ. ಈ ಮಧ್ಯೆ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 4) ಅಥವಾ ನಾಳೆ (ಸೆಪ್ಟೆಂಬರ್ 5) ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ. ಈ ಮಧ್ಯೆ ದರ್ಶನ್ ವಿರುದ್ಧವಾಗಿ ಪ್ರಬಲ ಸಾಕ್ಷಿಗಳೇ ಲಭ್ಯವಾಗಿವೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದು, ಅವರನ್ನು ಹತ್ಯೆ ಮಾಡಿ, ಬೇರೆಯವರನ್ನು ಕೇಸ್​ನಲ್ಲಿ ಸರೆಂಡರ್ ಮಾಡಿಸೋ ತನಕ ಪ್ರತಿ ಹಂತದಲ್ಲಿ ದರ್ಶನ್ ಪಾತ್ರದ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ, ದರ್ಶನ್ ಪಾತ್ರದ ಬಗ್ಗೆ ಸಾಕ್ಷ್ಯಗಳ ಸಮೇತ ಚಾರ್ಜ್​ಶೀಟ್​ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಹಾಗಾದರೆ ದರ್ಶನ್ ವಿರುದ್ಧ ಸಿಕ್ಕಿರುವ ಸಾಕ್ಷ್ಯಗಳು ಏನು? ಆ ಬಗ್ಗೆ ಇಲ್ಲಿದೆ ವಿವರ.

  1. ಪವನ್​ಗೆ ಹೇಳಿ ಚಿತ್ರದುರ್ಗದಿಂದ ರೇಣುಕಾಸ್ವಾಮಿ ಕರೆಸಿದ್ದು ದರ್ಶನ್ ಅನ್ನೋದು ಗೊತ್ತಾಗಿದೆ. ಪವನ್ ಸೂಚನೆಯಂತೆ ರಾಘವೇಂದ್ರ, ರೇಣುಕಾಸ್ವಾಮಿ ಕಿಡ್ನಾಪ್ ಮಾಡಿಸಿದ್ದರು.
  2. ದರ್ಶನ್ ಬಟ್ಟೆಯ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಪತ್ತೆ ಆಗಿವೆ. ಇದು ಪ್ರಮುಖ ಸಾಕ್ಷಿ ಆಗಲಿದೆ.
  3. ಪಬ್​ನಲ್ಲಿ ಕುಳಿತಿದ್ದು, ನಂತರ ಪವಿತ್ರಾ ಮನೆಗೆ ಹೋಗಿದ್ದ ದೃಶ್ಯಗಳು ಲಭ್ಯವಾಗಿವೆ. ಪವಿತ್ರಾರ ಕರೆದುಕೊಂಡು ಪಟ್ಟಣಗೆರೆ ಶೆಡ್​ಗೆ ದರ್ಶನ್ ಹೊಗಿದ್ದರು. ಶೆಡ್​ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಆ ಬಳಿಕ ದರ್ಶನ್​ ಪಬ್​ಗೆ ಬಂದಿದ್ದ ಬಗ್ಗೆ ಸಾಕ್ಷಿ ಇದೆ.
  4. ಪಬ್​ನಲ್ಲಿ ಇರುವಾಗ ರೇಣುಕಾಸ್ವಾಮಿ ಫೋಟೋ ದರ್ಶನ್​ಗೆ ಬಂದಿತ್ತು. ಆ ಬಳಿಕ ದರ್ಶನ್ ಮತ್ತೆ ಪಬ್​ನಿಂದ ಪಟ್ಟಣಗೆರೆ ಶೆಡ್​ಗೆ ಹೋಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ. ಆ ಬಳಿಕ RR ನಗರ ಮನೆಗೆ ಬಂದು ಬಟ್ಟೆ ಬದಲಿಸಿದ್ದರು ದರ್ಶನ್.
  5. ಬೆಳಿಗ್ಗೆ ಬನಶಂಕರಿಯ ವಿಜಯಲಕ್ಷ್ಮಿ ಮನೆಗೆ ಹೋಗಿದ್ದರು. ವಿಜಯಲಕ್ಷ್ಮಿ ಮನೆಯಲ್ಲಿ ಪೂಜೆಯಲ್ಲಿ ಭಾಗಿಯಾಗಿದ್ದರು. ವಿಜಯಲಕ್ಷ್ಮಿ ಮನೆಯಲ್ಲಿ  ದರ್ಶನ್ ಶೂ ಬಿಟ್ಟು ಹೋಗಿದ್ದರು. ನಂತರ ಮೈಸೂರಿನ ಫಾರ್ಮ್ ಹೌಸ್​ಗೆ ಹೋಗಿ ಅಲ್ಲಿಂದ ಹೋಟೆಲ್​ಗೆ ತೆರಳಿದ್ದರು. ಇದಕ್ಕೂ ಸಾಕ್ಷಿ ಸಿಕ್ಕಿದೆ.
  6. ಹೋಟೆಲ್​ನಿಂದ ಶೂಟಿಂಗ್​ಗೆ ಹೋಗಿದ್ದರು. ಆ ಬಳಿಕ ಮತ್ತೆ ಹೋಟೆಲ್​ಗೆ ಬಂದಿದ್ದರು. ದರ್ಶನ್ ಓಡಾಟದ ಸಿಸಿಟಿವಿ, ಟವರ್ ಲೊಕೇಷನ್ ತನಿಖೆಯಲ್ಲಿ ಸಿಕ್ಕಿವೆ.
  7. ಸಿಸಿಟಿವಿ ದೃಶ್ಯಗಳಿಗೂ ಟವರ್ ಲೊಕೇಷನ್​ಗಳೀಗೂ ಮ್ಯಾಚ್ ಆಗಿದೆ. ಪ್ರತಿ ಹಂತದಲ್ಲೂ ದರ್ಶನ್ ನೋಡಿದ್ದ ಐ ವಿಟ್ನೇಸ್ ಹೇಳಿಕೆಗಳು. ನಟ ಚಿಕ್ಕಣ್ಣ ಸೇರಿದಂತೆ ಅನೇಕ ಸಾಕ್ಷಿಗಳ ಹೇಳಿಕೆಗಳು ಉಲ್ಲೇಖ ಮಾಡಲಾಗಿದೆ.
  8. ದರ್ಶನ್ ವಿರುದ್ಧ ಆರೋಪಿಯೊಬ್ಬ ಹೇಳಿಕೆ ನೀಡಿದ್ದಾನೆ. ಪ್ರದೋಶ್ ಮೊಬೈಲ್​ನಲ್ಲಿ ಘಟನೆಗೆ ಸಂಬಂಧಿಸಿದ ವಿಡಿಯೋ ಇತ್ತು. ಫೋನ್ ಕಾಲ್, ಚಾಟಿಂಗ್​ನಲ್ಲಿ ಸಂಚಿನ ಬಗ್ಗೆ ಮಾಹಿತಿ ಸಿಕ್ಕಿದೆ. ಸರೆಂಡರ್ ಮಾಡಿಸಲು ಮನವೊಲಿಸಿದ್ದು, ಹಣ ಕೊಟ್ಟಿದ್ದು ದೃಢವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ