AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಗೌಡ, ವಿಚಾರಣೆ ಮುಂದೂಡಿಕೆ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಇಂದು (ಜನವರಿ 10) ಸಿಸಿಎಚ್ 57 ಕೋರ್ಟ್​ಗೆ ಹಾಜರಾಗಿದ್ದರು. ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳೂ ಕೋರ್ಟ್​ಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಇದೇ ಕಾರಣಕ್ಕೆ ಇಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲರೂ ಕೋರ್ಟ್​ಗೆ ಹಾಜರಾಗಿದ್ದರು.

ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಗೌಡ, ವಿಚಾರಣೆ ಮುಂದೂಡಿಕೆ
Darshan Thoogudeepa
ಮಂಜುನಾಥ ಸಿ.
|

Updated on:Jan 10, 2025 | 11:23 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು (ಜನವರಿ 10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಆಗಲು‌ ದಿನಾಂಕ ನಿಗಧಿ ಮಾಡಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಮೊದಲೇ ಬಂದಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ಕೋರ್ಟ್ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು. ಇತರೆ ಆರೋಪಿಗಳು ಸಹ ತಮ್ಮ ತಮ್ಮ ವಕೀಲರೊಡನೆ ಕೋರ್ಟ್​ಗೆ ಹಾಜರಾಗಿದ್ದರು.

ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ದರ್ಶನ್ ಇಂದು ಕುಟುಂತ್ತ ನಡೆಯಲಿಲ್ಲ, ಬದಲಿಗೆ ಆರಾಮವಾಗಿಯೇ ನಡೆಯುತ್ತಾ ನ್ಯಾಯಾಲಯ ಸಂಕೀರ್ಣದ ಒಳಗೆ ಹೋದರು. ರೇಣುಕಾ ಸ್ವಾಮಿ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ಮುಖಾ-ಮುಖಿ ಆಗುತ್ತಿದ್ದಾರೆ. ಒಂದೇ ನ್ಯಾಯಾಲಯದ ಹಾಲ್​ನಲ್ಲಿ ಎಲ್ಲ ಆರೋಪಿಗಳು ನ್ಯಾಯಾಧೀಶರ ಮುಂದೆ ನಿಂತು ಹಾಜರಿ ನೀಡಲಿದ್ದಾರೆ.

ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು. ಫೆಬ್ರವರಿ 25ಕ್ಕೆ ಮತ್ತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:12 am, Fri, 10 January 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ