Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಅಂಚೆ ಇಲಾಖೆಗೂ ಇಷ್ಟ ಆಯ್ತು ಡಾಲಿ ಮದುವೆ ಆಮಂತ್ರಣ ಪತ್ರಿಕೆ

ಡಾಲಿ ಧನಂಜಯ ಅವರ ಮದುವೆ ಆಮಂತ್ರಣ ಪತ್ರಿಕೆಗೆ ಭಾರತೀಯ ಅಂಚೆ ಇಲಾಖೆಯಿಂದ ಮೆಚ್ಚುಗೆ ಸೂಚಿಸಲಾಗಿದೆ. ಇನ್​ಲ್ಯಾಂಡ್​ ಲೆಟರ್ ಶೈಲಿಯಲ್ಲಿ ಸಿದ್ಧವಾದ ಆಹ್ವಾನ ಪತ್ರಿಕೆಗೆ ಅಂಚೆ ಇಲಾಖೆ ಅಧಿಕಾರಿಗಳು ಭೇಷ್ ಎಂದಿದ್ದಾರೆ. ಹಾಗಾಗಿ ಧನಂಜಯ ಹಾಗೂ ಧನ್ಯತಾ ಜೋಡಿಯ ಫೋಟೋದೊಂದಿಗೆ ವಿಶೇಷ ಸ್ಟ್ಯಾಂಪ್​ಗಳನ್ನು ಗಿಫ್ಟ್ ರೂಪದಲ್ಲಿ ನೀಡಲಾಗಿದೆ.

ಭಾರತೀಯ ಅಂಚೆ ಇಲಾಖೆಗೂ ಇಷ್ಟ ಆಯ್ತು ಡಾಲಿ ಮದುವೆ ಆಮಂತ್ರಣ ಪತ್ರಿಕೆ
Daali Dhananjaya
Follow us
ಮದನ್​ ಕುಮಾರ್​
|

Updated on: Feb 13, 2025 | 9:34 PM

ನಟ ಡಾಲಿ ಧನಂಜಯ ಅವರು ಅನೇಕ ವಿಚಾರಗಳಲ್ಲಿ ಮಾದರಿ ಆಗುತ್ತಾರೆ. ಈಗ ಅವರ ಮದುವೆ ಆಮಂತ್ರಣ ಪತ್ರಿಕೆ ಕೂಡ ಗಮನ ಸೆಳೆದಿದೆ. ಫೆಬ್ರವರಿ 15 ಮತ್ತು 16ರಂದು ಡಾಲಿ ಧನಂಜಯ ಅವರ ಮದುವೆ ನೆರವೇರಲಿದೆ. ಡಾಕ್ಟರ್ ಧನ್ಯತಾ ಜೊತೆ ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ವಿಶೇಷ ಏನೆಂದರೆ, ಅವರ ಮದುವೆಯ ಆಮಂತ್ರಣ ಪತ್ರಿಕೆ ವಿನ್ಯಾಸಕ್ಕೆ ಭಾರತೀಯ ಅಂಚೆ ಇಲಾಖೆ ಕೂಡ ಫಿದಾ ಆಗಿದೆ. ಇನ್​ಲ್ಯಾಂಡ್​ ಲೆಟರ್ ಮಾದರಿಯಲ್ಲಿ ಸಿದ್ಧವಾದ ಆಹ್ವಾನ ಪತ್ರಿಕೆಗೆ ಅಂಚೆ ಇಲಾಖೆ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ.

ಒಂದು ಕಾಲದಲ್ಲಿ ಇನ್​ಲ್ಯಾಂಡ್​ ಲೆಟರ್​ ಬಳಕೆ ಹೇರಳವಾಗಿತ್ತು. ಆದರೆ ಮೊಬೈಲ್ ಯುಗದಲ್ಲಿ ಇನ್​ಲ್ಯಾಂಡ್​ ಲೆಟರ್ ಬಳಸುವವರ ಸಂಖ್ಯೆ ತೀರಾ ವಿರಳ ಆಗಿದೆ. ಹಾಗಿದ್ದರೂ ಕೂಡ ಡಾಲಿ ಧನಂಜಯ ಅವರು ಇನ್​ಲ್ಯಾಂಡ್​ ಲೆಟರ್​ ಶೈಲಿಯಲ್ಲಿ ಮದುವೆ ಆಮಂತ್ರಣ ಪತ್ರಿಕೆ ಸಿದ್ಧಪಡಿಸಿದ್ದರಿಂದ ಜನರು ಇನ್​ಲ್ಯಾಂಡ್ ಲೆಟರ್​ ಬಗ್ಗೆ ಆಸಕ್ತಿ ತೋರಿಸಲು ಆರಂಭಿಸಿದ್ದಾರೆ ಎಂಬುದು ವಿಶೇಷ.

‘ಇನ್​ಲ್ಯಾಂಡ್ ಲೆಟರ್ ಮಾದರಿಯಲ್ಲಿ ಆಮಂತ್ರಣ ನೀಡಿ ಜನರಿಗೆ ಮಾದರಿಯಾಗಿದ್ದೀರಿ. ನಿಮ್ಮ ನಡೆಯಿಂದ ಮತ್ತೆ ಇನ್​ಲ್ಯಾಂಡ್ ಲೆಟರ್‌ಗಳಿಗೆ ಬೇಡಿಕೆ ಬಂದಿದೆ. ಜನರು ಮತ್ತೆ ಅಂಚೆ ಕಚೇರಿಯಲ್ಲಿ ಇನ್​ಲ್ಯಾಂಡ್ ಲೆಟರ್ ಕೇಳಿ ಪಡೆಯುತ್ತಿದ್ದಾರೆ‌. ಮದುವೆಯ ಮೂಲಕ ಮಾದರಿಯಾದ ನಿಮಗೆ ಅಭಿನಂದನೆಗಳು’ ಎಂದು ಅಂಚೆ ಇಲಾಖೆ ಅಧಿಕಾರಿಗಳು ಡಾಲಿ ಧನಂಜಯ ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ

ಮೈಸೂರು ಅಂಚೆ ವಿಭಾಗದ ಅಧಿಕಾರಿಗಳು ಧನಂಜಯ ಅವರಿಗೆ ವಿಶೇಷವಾದ ಸ್ಟ್ಯಾಂಪ್ ಉಡುಗೊರೆ ನೀಡಿದ್ದಾರೆ. ಸ್ಟ್ಯಾಂಪ್ ನೀಡಿ ಶುಭಾಶಯ ತಿಳಿಸಲಾಗಿದೆ. ಧನಂಜಯ ಮತ್ತು ಧನ್ಯತಾ ಅವರ ಫೋಟೋ ಜೊತೆ ಶುಭ ವಿವಾಹ ಎಂಬ ಸಂದೇಶ ಇರುವ 12 ಸ್ಟ್ಯಾಂಪ್​ಗಳನ್ನು ಉಡುಗೊರೆ ರೂಪದಲ್ಲಿ ನೀಡಲಾಗಿದೆ. ಅಂಚೆ ಇಲಾಖೆಯಿಂದ ಸಿಕ್ಕಿರುವ ಈ ಉಡುಗೊರೆಯನ್ನು ಕಂಡು ಧನಂಜಯ ಮತ್ತು ಧನ್ಯತಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ