AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಅಂಚೆ ಇಲಾಖೆಗೂ ಇಷ್ಟ ಆಯ್ತು ಡಾಲಿ ಮದುವೆ ಆಮಂತ್ರಣ ಪತ್ರಿಕೆ

ಡಾಲಿ ಧನಂಜಯ ಅವರ ಮದುವೆ ಆಮಂತ್ರಣ ಪತ್ರಿಕೆಗೆ ಭಾರತೀಯ ಅಂಚೆ ಇಲಾಖೆಯಿಂದ ಮೆಚ್ಚುಗೆ ಸೂಚಿಸಲಾಗಿದೆ. ಇನ್​ಲ್ಯಾಂಡ್​ ಲೆಟರ್ ಶೈಲಿಯಲ್ಲಿ ಸಿದ್ಧವಾದ ಆಹ್ವಾನ ಪತ್ರಿಕೆಗೆ ಅಂಚೆ ಇಲಾಖೆ ಅಧಿಕಾರಿಗಳು ಭೇಷ್ ಎಂದಿದ್ದಾರೆ. ಹಾಗಾಗಿ ಧನಂಜಯ ಹಾಗೂ ಧನ್ಯತಾ ಜೋಡಿಯ ಫೋಟೋದೊಂದಿಗೆ ವಿಶೇಷ ಸ್ಟ್ಯಾಂಪ್​ಗಳನ್ನು ಗಿಫ್ಟ್ ರೂಪದಲ್ಲಿ ನೀಡಲಾಗಿದೆ.

ಭಾರತೀಯ ಅಂಚೆ ಇಲಾಖೆಗೂ ಇಷ್ಟ ಆಯ್ತು ಡಾಲಿ ಮದುವೆ ಆಮಂತ್ರಣ ಪತ್ರಿಕೆ
Daali Dhananjaya
ಮದನ್​ ಕುಮಾರ್​
|

Updated on: Feb 13, 2025 | 9:34 PM

Share

ನಟ ಡಾಲಿ ಧನಂಜಯ ಅವರು ಅನೇಕ ವಿಚಾರಗಳಲ್ಲಿ ಮಾದರಿ ಆಗುತ್ತಾರೆ. ಈಗ ಅವರ ಮದುವೆ ಆಮಂತ್ರಣ ಪತ್ರಿಕೆ ಕೂಡ ಗಮನ ಸೆಳೆದಿದೆ. ಫೆಬ್ರವರಿ 15 ಮತ್ತು 16ರಂದು ಡಾಲಿ ಧನಂಜಯ ಅವರ ಮದುವೆ ನೆರವೇರಲಿದೆ. ಡಾಕ್ಟರ್ ಧನ್ಯತಾ ಜೊತೆ ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ವಿಶೇಷ ಏನೆಂದರೆ, ಅವರ ಮದುವೆಯ ಆಮಂತ್ರಣ ಪತ್ರಿಕೆ ವಿನ್ಯಾಸಕ್ಕೆ ಭಾರತೀಯ ಅಂಚೆ ಇಲಾಖೆ ಕೂಡ ಫಿದಾ ಆಗಿದೆ. ಇನ್​ಲ್ಯಾಂಡ್​ ಲೆಟರ್ ಮಾದರಿಯಲ್ಲಿ ಸಿದ್ಧವಾದ ಆಹ್ವಾನ ಪತ್ರಿಕೆಗೆ ಅಂಚೆ ಇಲಾಖೆ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ.

ಒಂದು ಕಾಲದಲ್ಲಿ ಇನ್​ಲ್ಯಾಂಡ್​ ಲೆಟರ್​ ಬಳಕೆ ಹೇರಳವಾಗಿತ್ತು. ಆದರೆ ಮೊಬೈಲ್ ಯುಗದಲ್ಲಿ ಇನ್​ಲ್ಯಾಂಡ್​ ಲೆಟರ್ ಬಳಸುವವರ ಸಂಖ್ಯೆ ತೀರಾ ವಿರಳ ಆಗಿದೆ. ಹಾಗಿದ್ದರೂ ಕೂಡ ಡಾಲಿ ಧನಂಜಯ ಅವರು ಇನ್​ಲ್ಯಾಂಡ್​ ಲೆಟರ್​ ಶೈಲಿಯಲ್ಲಿ ಮದುವೆ ಆಮಂತ್ರಣ ಪತ್ರಿಕೆ ಸಿದ್ಧಪಡಿಸಿದ್ದರಿಂದ ಜನರು ಇನ್​ಲ್ಯಾಂಡ್ ಲೆಟರ್​ ಬಗ್ಗೆ ಆಸಕ್ತಿ ತೋರಿಸಲು ಆರಂಭಿಸಿದ್ದಾರೆ ಎಂಬುದು ವಿಶೇಷ.

‘ಇನ್​ಲ್ಯಾಂಡ್ ಲೆಟರ್ ಮಾದರಿಯಲ್ಲಿ ಆಮಂತ್ರಣ ನೀಡಿ ಜನರಿಗೆ ಮಾದರಿಯಾಗಿದ್ದೀರಿ. ನಿಮ್ಮ ನಡೆಯಿಂದ ಮತ್ತೆ ಇನ್​ಲ್ಯಾಂಡ್ ಲೆಟರ್‌ಗಳಿಗೆ ಬೇಡಿಕೆ ಬಂದಿದೆ. ಜನರು ಮತ್ತೆ ಅಂಚೆ ಕಚೇರಿಯಲ್ಲಿ ಇನ್​ಲ್ಯಾಂಡ್ ಲೆಟರ್ ಕೇಳಿ ಪಡೆಯುತ್ತಿದ್ದಾರೆ‌. ಮದುವೆಯ ಮೂಲಕ ಮಾದರಿಯಾದ ನಿಮಗೆ ಅಭಿನಂದನೆಗಳು’ ಎಂದು ಅಂಚೆ ಇಲಾಖೆ ಅಧಿಕಾರಿಗಳು ಡಾಲಿ ಧನಂಜಯ ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ

ಮೈಸೂರು ಅಂಚೆ ವಿಭಾಗದ ಅಧಿಕಾರಿಗಳು ಧನಂಜಯ ಅವರಿಗೆ ವಿಶೇಷವಾದ ಸ್ಟ್ಯಾಂಪ್ ಉಡುಗೊರೆ ನೀಡಿದ್ದಾರೆ. ಸ್ಟ್ಯಾಂಪ್ ನೀಡಿ ಶುಭಾಶಯ ತಿಳಿಸಲಾಗಿದೆ. ಧನಂಜಯ ಮತ್ತು ಧನ್ಯತಾ ಅವರ ಫೋಟೋ ಜೊತೆ ಶುಭ ವಿವಾಹ ಎಂಬ ಸಂದೇಶ ಇರುವ 12 ಸ್ಟ್ಯಾಂಪ್​ಗಳನ್ನು ಉಡುಗೊರೆ ರೂಪದಲ್ಲಿ ನೀಡಲಾಗಿದೆ. ಅಂಚೆ ಇಲಾಖೆಯಿಂದ ಸಿಕ್ಕಿರುವ ಈ ಉಡುಗೊರೆಯನ್ನು ಕಂಡು ಧನಂಜಯ ಮತ್ತು ಧನ್ಯತಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ