AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಅಂಚೆ ಇಲಾಖೆಗೂ ಇಷ್ಟ ಆಯ್ತು ಡಾಲಿ ಮದುವೆ ಆಮಂತ್ರಣ ಪತ್ರಿಕೆ

ಡಾಲಿ ಧನಂಜಯ ಅವರ ಮದುವೆ ಆಮಂತ್ರಣ ಪತ್ರಿಕೆಗೆ ಭಾರತೀಯ ಅಂಚೆ ಇಲಾಖೆಯಿಂದ ಮೆಚ್ಚುಗೆ ಸೂಚಿಸಲಾಗಿದೆ. ಇನ್​ಲ್ಯಾಂಡ್​ ಲೆಟರ್ ಶೈಲಿಯಲ್ಲಿ ಸಿದ್ಧವಾದ ಆಹ್ವಾನ ಪತ್ರಿಕೆಗೆ ಅಂಚೆ ಇಲಾಖೆ ಅಧಿಕಾರಿಗಳು ಭೇಷ್ ಎಂದಿದ್ದಾರೆ. ಹಾಗಾಗಿ ಧನಂಜಯ ಹಾಗೂ ಧನ್ಯತಾ ಜೋಡಿಯ ಫೋಟೋದೊಂದಿಗೆ ವಿಶೇಷ ಸ್ಟ್ಯಾಂಪ್​ಗಳನ್ನು ಗಿಫ್ಟ್ ರೂಪದಲ್ಲಿ ನೀಡಲಾಗಿದೆ.

ಭಾರತೀಯ ಅಂಚೆ ಇಲಾಖೆಗೂ ಇಷ್ಟ ಆಯ್ತು ಡಾಲಿ ಮದುವೆ ಆಮಂತ್ರಣ ಪತ್ರಿಕೆ
Daali Dhananjaya
ಮದನ್​ ಕುಮಾರ್​
|

Updated on: Feb 13, 2025 | 9:34 PM

Share

ನಟ ಡಾಲಿ ಧನಂಜಯ ಅವರು ಅನೇಕ ವಿಚಾರಗಳಲ್ಲಿ ಮಾದರಿ ಆಗುತ್ತಾರೆ. ಈಗ ಅವರ ಮದುವೆ ಆಮಂತ್ರಣ ಪತ್ರಿಕೆ ಕೂಡ ಗಮನ ಸೆಳೆದಿದೆ. ಫೆಬ್ರವರಿ 15 ಮತ್ತು 16ರಂದು ಡಾಲಿ ಧನಂಜಯ ಅವರ ಮದುವೆ ನೆರವೇರಲಿದೆ. ಡಾಕ್ಟರ್ ಧನ್ಯತಾ ಜೊತೆ ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ವಿಶೇಷ ಏನೆಂದರೆ, ಅವರ ಮದುವೆಯ ಆಮಂತ್ರಣ ಪತ್ರಿಕೆ ವಿನ್ಯಾಸಕ್ಕೆ ಭಾರತೀಯ ಅಂಚೆ ಇಲಾಖೆ ಕೂಡ ಫಿದಾ ಆಗಿದೆ. ಇನ್​ಲ್ಯಾಂಡ್​ ಲೆಟರ್ ಮಾದರಿಯಲ್ಲಿ ಸಿದ್ಧವಾದ ಆಹ್ವಾನ ಪತ್ರಿಕೆಗೆ ಅಂಚೆ ಇಲಾಖೆ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ.

ಒಂದು ಕಾಲದಲ್ಲಿ ಇನ್​ಲ್ಯಾಂಡ್​ ಲೆಟರ್​ ಬಳಕೆ ಹೇರಳವಾಗಿತ್ತು. ಆದರೆ ಮೊಬೈಲ್ ಯುಗದಲ್ಲಿ ಇನ್​ಲ್ಯಾಂಡ್​ ಲೆಟರ್ ಬಳಸುವವರ ಸಂಖ್ಯೆ ತೀರಾ ವಿರಳ ಆಗಿದೆ. ಹಾಗಿದ್ದರೂ ಕೂಡ ಡಾಲಿ ಧನಂಜಯ ಅವರು ಇನ್​ಲ್ಯಾಂಡ್​ ಲೆಟರ್​ ಶೈಲಿಯಲ್ಲಿ ಮದುವೆ ಆಮಂತ್ರಣ ಪತ್ರಿಕೆ ಸಿದ್ಧಪಡಿಸಿದ್ದರಿಂದ ಜನರು ಇನ್​ಲ್ಯಾಂಡ್ ಲೆಟರ್​ ಬಗ್ಗೆ ಆಸಕ್ತಿ ತೋರಿಸಲು ಆರಂಭಿಸಿದ್ದಾರೆ ಎಂಬುದು ವಿಶೇಷ.

‘ಇನ್​ಲ್ಯಾಂಡ್ ಲೆಟರ್ ಮಾದರಿಯಲ್ಲಿ ಆಮಂತ್ರಣ ನೀಡಿ ಜನರಿಗೆ ಮಾದರಿಯಾಗಿದ್ದೀರಿ. ನಿಮ್ಮ ನಡೆಯಿಂದ ಮತ್ತೆ ಇನ್​ಲ್ಯಾಂಡ್ ಲೆಟರ್‌ಗಳಿಗೆ ಬೇಡಿಕೆ ಬಂದಿದೆ. ಜನರು ಮತ್ತೆ ಅಂಚೆ ಕಚೇರಿಯಲ್ಲಿ ಇನ್​ಲ್ಯಾಂಡ್ ಲೆಟರ್ ಕೇಳಿ ಪಡೆಯುತ್ತಿದ್ದಾರೆ‌. ಮದುವೆಯ ಮೂಲಕ ಮಾದರಿಯಾದ ನಿಮಗೆ ಅಭಿನಂದನೆಗಳು’ ಎಂದು ಅಂಚೆ ಇಲಾಖೆ ಅಧಿಕಾರಿಗಳು ಡಾಲಿ ಧನಂಜಯ ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ

ಮೈಸೂರು ಅಂಚೆ ವಿಭಾಗದ ಅಧಿಕಾರಿಗಳು ಧನಂಜಯ ಅವರಿಗೆ ವಿಶೇಷವಾದ ಸ್ಟ್ಯಾಂಪ್ ಉಡುಗೊರೆ ನೀಡಿದ್ದಾರೆ. ಸ್ಟ್ಯಾಂಪ್ ನೀಡಿ ಶುಭಾಶಯ ತಿಳಿಸಲಾಗಿದೆ. ಧನಂಜಯ ಮತ್ತು ಧನ್ಯತಾ ಅವರ ಫೋಟೋ ಜೊತೆ ಶುಭ ವಿವಾಹ ಎಂಬ ಸಂದೇಶ ಇರುವ 12 ಸ್ಟ್ಯಾಂಪ್​ಗಳನ್ನು ಉಡುಗೊರೆ ರೂಪದಲ್ಲಿ ನೀಡಲಾಗಿದೆ. ಅಂಚೆ ಇಲಾಖೆಯಿಂದ ಸಿಕ್ಕಿರುವ ಈ ಉಡುಗೊರೆಯನ್ನು ಕಂಡು ಧನಂಜಯ ಮತ್ತು ಧನ್ಯತಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು