AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್​ ಕಳಿಸಿದ ಆರೋಪ; ಪೊಲೀಸರ ಬಂಧನದಲ್ಲಿ ಆ್ಯಡಂ ಬಿದ್ದಪ್ಪ

ಅಶ್ಲೀಲ ಮೆಸೇಜ್ ಕಳಿಸಿದ ಆ್ಯಡಂ ಬಿದ್ದಪ್ಪ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಟಿ ಸಂಜನಾ ಗಲ್ರಾನಿ ದೂರು ನೀಡಿದ್ದರು. ದೂರಿನ ಜೊತೆ ವಾಟ್ಸಪ್​ ಚಾಟ್ ದಾಖಲೆಯನ್ನೂ ಸಂಜನಾ ನೀಡಿದ್ದಾರೆ.

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್​ ಕಳಿಸಿದ ಆರೋಪ; ಪೊಲೀಸರ ಬಂಧನದಲ್ಲಿ ಆ್ಯಡಂ ಬಿದ್ದಪ್ಪ
ಆ್ಯಡಂ ಬಿದ್ದಪ್ಪ
TV9 Web
| Edited By: |

Updated on: Mar 04, 2022 | 8:25 AM

Share

ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ (Sanjjanaa Galrani) ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ಆರೋಪದಲ್ಲಿ ಆ್ಯಡಂ ಬಿದ್ದಪ್ಪ (Adam Bidapa) ಅವರನ್ನು ಇಂದಿರಾ ನಗರ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಫ್ಯಾಷನ್​ ಡಿಸೈನರ್​, ಕೋರಿಯೋಗ್ರಾಫರ್ ಆಗಿರುವ ಪ್ರಸಾದ್ ಬಿದ್ದಪ್ಪ (Prasad Bidapa) ಅವರ ಪುತ್ರ ಆ್ಯಡಂ ಬಿದ್ದಪ್ಪ ಈಗ ಪೊಲೀಸರ ವಶದಲ್ಲಿದ್ದಾರೆ. ನಟಿ ಸಂಜನಾ ಗಲ್ರಾಣಿ ಹಾಗೂ ಆ್ಯಡಂ ಸ್ನೇಹಿತರಾಗಿದ್ದರು. ಕೆಲವೇ ದಿನಗಳ ಹಿಂದೆ ಸಂಜನಾಗೆ ಅಶ್ಲೀಲ ಮೆಸೇಜ್​ಗಳನ್ನು ಕಳಿಸಿದ್ದಾರೆ ಎಂಬ ಆರೋಪ ಆ್ಯಡಂ ಬಿದ್ದಪ್ಪ ಅವರ ಮೇಲಿದೆ. ಈ ಕುರಿತಂತೆ ಸಂಜನಾ ನೀಡಿದ ದೂರಿನ ಆಧಾರದ ಮೇಲೆ ಇಂದಿರಾ ನಗರ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಸದ್ಯ ಈ ಆರೋಪವನ್ನು ಆಡ್ಯಂ ಬಿದ್ದಪ್ಪ ಒಪ್ಪಿಕೊಂಡಿಲ್ಲ. ತಮ್ಮ ಮತ್ತು ಸಂಜನಾ ಗಲ್ರಾನಿ ನಡುವಿನ ವಾಟ್ಸಪ್​ ಸಂದೇಶಗಳನ್ನು ಆ್ಯಡಂ ಡಿಲೀಟ್​ ಮಾಡಿದ್ದಾರೆ ಎಂಬುದು ಗೊತ್ತಾಗಿದೆ.

ಇದೇ ಫೆಬ್ರವರಿ 25ರಂದು ರಾತ್ರಿ 10ರಿಂದ 12ರವರೆಗೆ ಸಂಜನಾ ಗಲ್ರಾನಿ ಅವರಿಗೆ ಆ್ಯಡಂ ಬಿದ್ದಪ್ಪ ಅಶ್ಲೀಲ ಮೆಸೇಜ್ ಕಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಟಿ ಸಂಜನಾ ದೂರು ನೀಡಿದ್ದರು. ದೂರಿನ ಜೊತೆಗೆ ವಾಟ್ಸಪ್​ ಚಾಟ್ ದಾಖಲೆಯನ್ನೂ ಸಂಜನಾ ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಕೊಡಗಿನಲ್ಲಿರುವ ತನ್ನ ಹೋಮ್ ಸ್ಟೇನಲ್ಲಿ‌ ಇದ್ದ ಆ್ಯಡಂ ಬಿದ್ದಪ್ಪನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ತಾವು ಮೆಸೇಜ್​ ಕಳಿಸಿಲ್ಲ ಎಂದು ವಿಚಾರಣೆ ವೇಳೆ ಆ್ಯಡಂ ಬಿದ್ದಪ್ಪ ಹೇಳಿದ್ದಾರೆ. ಅಲ್ಲದೇ ಸಂಜನಾ ಗಲ್ರಾನಿ ಅವರ ನಂಬರ್ ಬ್ಲಾಕ್ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ನಟಿ ನೀಡಿದ ದಾಖಲೆಗಳನ್ನು ಇಟ್ಟುಕೊಂಡು ವಿಚಾರಣೆ ಮಾಡಲಾಗುತ್ತಿದೆ. ಆ್ಯಡಂ ಬಿದ್ದಪ್ಪ ತನ್ನ ಮೊಬೈಲ್​ನಲ್ಲಿ ಇರುವ ಚಾಟಿಂಗ್ ಡಿಲೀಟ್ ಮಾಡಿರುವುದರಿಂದ ಅವರ ಮೊಬೈಲ್​​ ಅನ್ನು ಪೊಲೀಸರು ರಿಟ್ರೀವ್​ಗೆ ಕಳುಹಿಸಲಿದ್ದಾರೆ.

ಇದನ್ನೂ ಓದಿ:

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ

WhatsApp: ನೀವು ವಾಟ್ಸ್​ಆ್ಯಪ್​ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸುತ್ತೀರಾ?: ಹಾಗಿದ್ರೆ ತಪ್ಪದೇ ಈ ಸ್ಟೋರಿ ಓದಿ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ