AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್​ ಕಳಿಸಿದ ಆರೋಪ; ಪೊಲೀಸರ ಬಂಧನದಲ್ಲಿ ಆ್ಯಡಂ ಬಿದ್ದಪ್ಪ

ಅಶ್ಲೀಲ ಮೆಸೇಜ್ ಕಳಿಸಿದ ಆ್ಯಡಂ ಬಿದ್ದಪ್ಪ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಟಿ ಸಂಜನಾ ಗಲ್ರಾನಿ ದೂರು ನೀಡಿದ್ದರು. ದೂರಿನ ಜೊತೆ ವಾಟ್ಸಪ್​ ಚಾಟ್ ದಾಖಲೆಯನ್ನೂ ಸಂಜನಾ ನೀಡಿದ್ದಾರೆ.

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್​ ಕಳಿಸಿದ ಆರೋಪ; ಪೊಲೀಸರ ಬಂಧನದಲ್ಲಿ ಆ್ಯಡಂ ಬಿದ್ದಪ್ಪ
ಆ್ಯಡಂ ಬಿದ್ದಪ್ಪ
Follow us
TV9 Web
| Updated By: ಮದನ್​ ಕುಮಾರ್​

Updated on: Mar 04, 2022 | 8:25 AM

ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ (Sanjjanaa Galrani) ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ಆರೋಪದಲ್ಲಿ ಆ್ಯಡಂ ಬಿದ್ದಪ್ಪ (Adam Bidapa) ಅವರನ್ನು ಇಂದಿರಾ ನಗರ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಫ್ಯಾಷನ್​ ಡಿಸೈನರ್​, ಕೋರಿಯೋಗ್ರಾಫರ್ ಆಗಿರುವ ಪ್ರಸಾದ್ ಬಿದ್ದಪ್ಪ (Prasad Bidapa) ಅವರ ಪುತ್ರ ಆ್ಯಡಂ ಬಿದ್ದಪ್ಪ ಈಗ ಪೊಲೀಸರ ವಶದಲ್ಲಿದ್ದಾರೆ. ನಟಿ ಸಂಜನಾ ಗಲ್ರಾಣಿ ಹಾಗೂ ಆ್ಯಡಂ ಸ್ನೇಹಿತರಾಗಿದ್ದರು. ಕೆಲವೇ ದಿನಗಳ ಹಿಂದೆ ಸಂಜನಾಗೆ ಅಶ್ಲೀಲ ಮೆಸೇಜ್​ಗಳನ್ನು ಕಳಿಸಿದ್ದಾರೆ ಎಂಬ ಆರೋಪ ಆ್ಯಡಂ ಬಿದ್ದಪ್ಪ ಅವರ ಮೇಲಿದೆ. ಈ ಕುರಿತಂತೆ ಸಂಜನಾ ನೀಡಿದ ದೂರಿನ ಆಧಾರದ ಮೇಲೆ ಇಂದಿರಾ ನಗರ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಸದ್ಯ ಈ ಆರೋಪವನ್ನು ಆಡ್ಯಂ ಬಿದ್ದಪ್ಪ ಒಪ್ಪಿಕೊಂಡಿಲ್ಲ. ತಮ್ಮ ಮತ್ತು ಸಂಜನಾ ಗಲ್ರಾನಿ ನಡುವಿನ ವಾಟ್ಸಪ್​ ಸಂದೇಶಗಳನ್ನು ಆ್ಯಡಂ ಡಿಲೀಟ್​ ಮಾಡಿದ್ದಾರೆ ಎಂಬುದು ಗೊತ್ತಾಗಿದೆ.

ಇದೇ ಫೆಬ್ರವರಿ 25ರಂದು ರಾತ್ರಿ 10ರಿಂದ 12ರವರೆಗೆ ಸಂಜನಾ ಗಲ್ರಾನಿ ಅವರಿಗೆ ಆ್ಯಡಂ ಬಿದ್ದಪ್ಪ ಅಶ್ಲೀಲ ಮೆಸೇಜ್ ಕಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಟಿ ಸಂಜನಾ ದೂರು ನೀಡಿದ್ದರು. ದೂರಿನ ಜೊತೆಗೆ ವಾಟ್ಸಪ್​ ಚಾಟ್ ದಾಖಲೆಯನ್ನೂ ಸಂಜನಾ ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಕೊಡಗಿನಲ್ಲಿರುವ ತನ್ನ ಹೋಮ್ ಸ್ಟೇನಲ್ಲಿ‌ ಇದ್ದ ಆ್ಯಡಂ ಬಿದ್ದಪ್ಪನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ತಾವು ಮೆಸೇಜ್​ ಕಳಿಸಿಲ್ಲ ಎಂದು ವಿಚಾರಣೆ ವೇಳೆ ಆ್ಯಡಂ ಬಿದ್ದಪ್ಪ ಹೇಳಿದ್ದಾರೆ. ಅಲ್ಲದೇ ಸಂಜನಾ ಗಲ್ರಾನಿ ಅವರ ನಂಬರ್ ಬ್ಲಾಕ್ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ನಟಿ ನೀಡಿದ ದಾಖಲೆಗಳನ್ನು ಇಟ್ಟುಕೊಂಡು ವಿಚಾರಣೆ ಮಾಡಲಾಗುತ್ತಿದೆ. ಆ್ಯಡಂ ಬಿದ್ದಪ್ಪ ತನ್ನ ಮೊಬೈಲ್​ನಲ್ಲಿ ಇರುವ ಚಾಟಿಂಗ್ ಡಿಲೀಟ್ ಮಾಡಿರುವುದರಿಂದ ಅವರ ಮೊಬೈಲ್​​ ಅನ್ನು ಪೊಲೀಸರು ರಿಟ್ರೀವ್​ಗೆ ಕಳುಹಿಸಲಿದ್ದಾರೆ.

ಇದನ್ನೂ ಓದಿ:

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ

WhatsApp: ನೀವು ವಾಟ್ಸ್​ಆ್ಯಪ್​ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸುತ್ತೀರಾ?: ಹಾಗಿದ್ರೆ ತಪ್ಪದೇ ಈ ಸ್ಟೋರಿ ಓದಿ

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ