AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಡ್ರಗ್ಸ್ ಕೇಸ್; ಅವರ ವಿರುದ್ಧ ಆರೋಪವಿದ್ದರೂ ಹೇರ್ ಸ್ಯಾಂಪಲ್ ಪರೀಕ್ಷೆ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಇಂದ್ರಜಿತ್

ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಆ್ಯಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ್ದಾರೆ. ಇದೇ ವೇಳೆ ಅವರು ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣದ ವಿವಿಧ ಆಯಾಮಗಳ ಕುರಿತು ಮಾತನಾಡಿದ್ದಾರೆ.

ಅನುಶ್ರೀ ಡ್ರಗ್ಸ್ ಕೇಸ್; ಅವರ ವಿರುದ್ಧ ಆರೋಪವಿದ್ದರೂ ಹೇರ್ ಸ್ಯಾಂಪಲ್ ಪರೀಕ್ಷೆ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಇಂದ್ರಜಿತ್
ಇಂದ್ರಜಿತ್​ ಲಂಕೇಶ್​
TV9 Web
| Updated By: shivaprasad.hs|

Updated on: Sep 08, 2021 | 12:04 PM

Share

ಬೆಂಗಳೂರು: ಆ್ಯಂಕರ್ ಅನುಶ್ರೀ ಹೆಸರನ್ನು ಸಿಸಿಬಿ ಪೊಲೀಸರ ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿದೆ. ಪ್ರಕರಣದ ಎ2 ಕಿಶೋರ್ ಶೆಟ್ಟಿ ಅನುಶ್ರೀ ಹೆಸರನ್ನು ಉಲ್ಲೇಖಿಸಿ, ಅವರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಈ ಕುರಿತಂತೆ ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ‘ಈ ಪ್ರಕರಣಕ್ಕೆ ರಾಜಕೀಯ, ಚಿತ್ರರಂಗ, ಸಾಮಾಜಿಕ ಸೇರಿದಂತೆ ಹಲವಾರು ಆಯಾಮಗಳಿವೆ. ಆದ್ದರಿಂದಲೇ ಇದು ನಮ್ಮ ರಾಜ್ಯದ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ಸ್ಕ್ಯಾಂಡಲ್’ ಎಂದು ಇಂದ್ರಜಿತ್ ಡ್ರಗ್ಸ್ ಪ್ರಕರಣದ ಕುರಿತಂತೆ ಗಂಭೀರ ಆರೋಪ ಮಾಡಿದ್ದಾರೆ. 

‘‘ಕರ್ನಾಟಕದ ಡ್ರಗ್ಸ್ ಜಾಲದ ಬಗ್ಗೆ ಈ ಹಿಂದೆ ಮಾತನಾಡಿದ್ದೆ. ಹಲವರು ನನ್ನ ಬೆನ್ನುತಟ್ಟಿದ್ದರು, ಕೆಲವರು ಟೀಕೆ ಸಹ ಮಾಡಿದ್ದರು. ಆದರೆ ಇದು ಒನ್ ಡೇ ಮ್ಯಾಚ್ ಅಲ್ಲ. ಡ್ರಗ್ಸ್ ವಿರುದ್ಧ ನಿರಂತರ ಕಾರ್ಯಾಚರಣೆ ಅಗತ್ಯವಾಗಿದ್ದು, ಈ ಹಿಂದೆ ಪೊಲೀಸರೆದುರು ವಿಚಾರಣೆಗೆ ಬಂದವರೆಲ್ಲ ಬೆಂಗಳೂರಿನಲ್ಲಿ ಈಗ ಮತ್ತೆ ಪಾರ್ಟಿ ಮಾಡುತ್ತಿದ್ದಾರೆ’’ ಎಂದು ಇಂದ್ರಜಿತ್ ಆರೋಪ ಮಾಡಿದ್ದಾರೆ. ಕೊವಿಡ್ ಎರಡನೇ ಅಲೆ ನಂತರ ಮತ್ತೆ ಪಾರ್ಟಿ ಜಾಸ್ತಿಯಾಗಿದೆ. ಡ್ರಗ್ಸ್ ಸೇವನೆ ಜಾಸ್ತಿಯಾಗಿದೆ. ಆದ್ದರಿಂದಲೇ ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಬರುತ್ತಿದೆ. ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಆಗಬಾರದು. ಪೊಲೀಸರು ಎಲ್ಲರನ್ನೂ ಸರಿಯಾಗಿ ವಿಚಾರಣೆ ಮಾಡಬೇಕು ಎಂದು ಇಂದ್ರಜಿತ್ ಹೇಳಿದ್ಧಾರೆ.

ಸಿಸಿಬಿ ಪೊಲೀಸರು ಬಂಧಿತ ಹೆಸರನ್ನು ಹೇಳಿದ್ದರೂ ಏಕೆ ಟೆಸ್ಟ್ ಮಾಡಿಸಿಲ್ಲ ಎಂದು ಇಂದ್ರಜಿತ್ ಇದೇ ವೇಳೆ ಪ್ರಶ್ನಿಸಿದ್ದಾರೆ. ‘‘ಸಿಸಿಬಿ ಪೊಲೀಸರಿಗೆ ನನ್ನ ಬಳಿ ಇದ್ದ ಎಲ್ಲ ಮಾಹಿತಿ ನೀಡಿದ್ದೆ. ಯೂರಿನ್, ಬ್ಲಡ್ ಸ್ಯಾಂಪಲ್ ಟೆಸ್ಟ್ ಮಾಡಿದರೆ ಸಾಕಾಗುವುದಿಲ್ಲ. ಕೂದಲ ಸ್ಯಾಂಪಲ್ ಟೆಸ್ಟ್ ಮಾಡಬೇಕು ಎಂದು ಹೇಳಿದ್ದೆ. ಆದರೆ ಕೆಲವರಿಗೆ ಬೆಣ್ಣೆ, ಕೆಲವರಿಗೆ ಸುಣ್ಣ ಎಂಬಂತೆ ಟೆಸ್ಟ್ ಮಾಡಿದ್ದಾರೆ. ಸಿಸಿಬಿಯವರಿಗೆ ರಾಜಕೀಯ ಒತ್ತಡವಿತ್ತೇ? ಸ್ಟೇಟ್‌ಮೆಂಟ್‌ನಲ್ಲಿ ಆರೋಪ ಪ್ರೂವ್ ಮಾಡಲು ಸಾಧ್ಯವಿಲ್ಲ ಎಂದು ಇಂದ್ರಜಿತ್ ಸಿಸಿಬಿ ಪೊಲೀಸರ ತನಿಖಾ ನಡೆಯ ವಿರುದ್ಧ ಆರೋಪ ಮಾಡಿದ್ದಾರೆ.

ಕೊರೊನಾ ಎರಡನೇ ಅಲೆಯ ನಂತರ ಪಾರ್ಟಿ ಡ್ರಗ್ಸ್ ಸೇವನೆ ಜಾಸ್ತಿಯಾಗಿದೆ ಎಂದಿರುವ ಇಂದ್ರಜಿತ್, ಸಿಸಿಬಿಗೆ ಹೇಳಿಕೆ ನೀಡಿದವರು ಕೂಡ ಮತ್ತೆ ಭಾಗಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾನೂನಾತ್ಮಕವಾಗಿ ಡ್ರಗ್ಸ್ ಪೆಡ್ಲರ್​ಗೆ ಶಿಕ್ಷೆ ಜಾಸ್ತಿ ಇದೆ. ಆದರೆ ಡ್ರಗ್ಸ್ ಸೇವನೆ ಮಾಡಿದವರಿಗೆ ಕಡಿಮೆ ಪ್ರಮಾಣದ ಶಿಕ್ಷೆ ಇದೆ. ಡ್ರಗ್ಸ್ ಸೇವನೆ ಮಾಡಿದವರನ್ನು ಪುನರ್ವಸತಿಗೂ ಕಳಿಸುವ ವ್ಯವಸ್ಥೆಯಿದೆ. ಆದರೆ ಡ್ರಗ್ಸ್ ಪೆಡ್ಲಿಂಗ್ ಎನ್ನುವುದು ಬಹುದೊಡ್ಡ ಮಾಫಿಯಾ ಎಂದು ಇಂದ್ರಜಿತ್ ಹೇಳಿದ್ದಾರೆ.

ಪ್ರಕರಣದಲ್ಲಿ ವಿಚಾರಣೆ ನಿಧಾನಗತಿಯಲ್ಲಿ ಸಾಗಿರುವುದಕ್ಕೆ ಮತ್ತು ಆರೋಪ ಬಂದಾಗ ಸರಿಯಾದ ತನಿಖೆ ಕೈಗೊಳ್ಳದೇ ಇರುವುದಕ್ಕೆ ಇಂದ್ರಜಿತ್ ವ್ಯವಸ್ಥೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ‘‘ಕಿಶೋರ್ ಶೆಟ್ಟಿ ಹೇಳಿಕೆ ಕೊಟ್ಟ ತಕ್ಷಣ ತನಿಖೆ ಮಾಡಬೇಕಾಗಿತ್ತು. ಆದರೆ ಮಾಡಿಲ್ಲ. ಆದ್ದರಿಂದಲೇ ನ್ಯಾಯಾಲಯದಲ್ಲಿ ಪ್ರಕರಣಗಳು ಫೇಲ್ ಆಗೋದು. ಗೌರಿ ಹತ್ಯೆ ಆಗಿ 4 ವರ್ಷ ಆಗಿದೆ. ಆದರೆ ಇನ್ನೂ ಕೋರ್ಟ್​ನಲ್ಲಿ ಟ್ರಯಲ್ ಆಗಿಲ್ಲ. ಇದನ್ನೆಲ್ಲ ನೋಡಿದಾಗ ವ್ಯವಸ್ಥೆ ಬಗ್ಗೆ ಬೇಸರವಾಗತ್ತದೆ. ಕೋರ್ಟ್​​ನಲ್ಲಿ ವಿಚಾರ ಇರೋದರಿಂದ ನಾನು ಮಾತನಾಡಲು ಸಾಧ್ಯವಿಲ್ಲ’’ ಎಂದು ಇಂದ್ರಜಿತ್ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ:

ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

(Indrajit Lankesh on Anushree and Sandalwood scandal)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!